Breaking: ಹಿಮಾಚಲ ಭೂಕುಸಿತ: ಸಂತ್ರಸ್ತ ಪ್ರದೇಶಗಳಿಗೆ ಸಿಎಂ ಭೇಟಿ
ಶಿಮ್ಲಾ, ಆಗಸ್ಟ್ 22: ವರುಣನ ಅರ್ಭಟಕ್ಕೆ ಹಿಮಾಚಲ ಪ್ರದೇಶ ಅಕ್ಷರಶಃ ತತ್ತರಿಸಿದೆ. ಭೂಕುಸಿತಗಳಲ್ಲಿ ಈವರೆಗೆ 22 ಮಂದಿ ಜೀವ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆ ಸೋಮವಾರ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಸಂತ್ರಸ್ತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಠಾತ್ ಪ್ರವಾಹದಿಂದಾಗಿ ಮಂಡಿ ಜಿಲ್ಲೆಯಲ್ಲಿ ಹೆಚ್ಚು ಹಾನಿಗೊಳಗಾಗಿದೆ. ಇದರ ಜೊತೆಗೆ ಭೂಕುಸಿತ ಮತ್ತು ಪ್ರವಾಹದ 36 ಘಟನೆಗಳಲ್ಲಿ 22 ಜನರು ಸಾವನ್ನಪ್ಪಿದ್ದಾರೆ ಮತ್ತು ಹನ್ನೆರಡು ಜನರು ಗಾಯಗೊಂಡಿದ್ದಾರೆ. ದುರಂತದಲ್ಲಿ ಒಂದೇ ಕುಟುಂಬದ ಎಂಟು ಸದಸ್ಯರು ಮೃತಪಟ್ಟಿದ್ದಾರೆ.
ಮುಖ್ಯಮಂತ್ರಿಗಳ ತವರು ಜಿಲ್ಲೆಯಾಗಿರುವ ಮಂಡಿಯಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. ಐವರು ನಾಪತ್ತೆಯಾಗಿದ್ದು, ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮಂಡಿಯಲ್ಲಿ ಹಠಾತ್ ಪ್ರವಾಹ ಮತ್ತು ಭೂಕುಸಿತ ಉಂಟಾಗಿತ್ತು ಈ ವೇಳೆ ಒಬ್ಬರು ಗಾಯಗೊಂಡಿದ್ದಾರೆ.

ಅಧಿಕಾರಿಗಳ ಹೇಳಿಕೆ ಪ್ರಕಾರ, ಮುಖ್ಯಮಂತ್ರಿ ಶಿಮ್ಲಾದಿಂದ ಹೆಲಿಕಾಪ್ಟರ್ನಲ್ಲಿ ಬೆಳಗ್ಗೆ ಮಂಡಿಗೆ ತಲುಪಿದ್ದಾರೆ. ಗೋಹರ್ ಡೆವಲಪ್ಮೆಂಟ್ ಬ್ಲಾಕ್ನಲ್ಲಿರುವ ಕಶನ್ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ.
ಗೋಹರ್ ಡೆವಲಪ್ಮೆಂಟ್ ಬ್ಲಾಕ್ನಲ್ಲಿರುವ ಕಶನ್ ಗ್ರಾಮದಲ್ಲಿ ಆಗಸ್ಟ್ 20 ರಂದು ಭೂಕುಸಿತ ಸಂಭವಿಸಿದ ವೇಳೆ ಖೇಮ್ ಸಿಂಗ್ ಮತ್ತು ಅವರ ಕುಟುಂಬದ ಏಳು ಸದಸ್ಯರು ಅವರದ್ದೇ ಮನೆಯ ಅವಶೇಷಗಳ ಅಡಿಯಲ್ಲಿ ಜೀವಂತವಾಗಿ ಸಮಾಧಿಯಾಗಿದ್ದರು. ಇಲ್ಲಿ ಮಧ್ಯಾಹ್ನ 12.15ರವರೆಗೆ ಮುಖ್ಯಮಂತ್ರಿ ಪರಿಸ್ಥಿತಿ ಅವಲೋಕಿಸಲಿದ್ದಾರೆ.

ಮಧ್ಯಾಹ್ನ 1.10 ರ ಸುಮಾರಿಗೆ ಸಿಎಂ ಜೈ ರಾಮ್ ಠಾಕೂರ್ ಶಿಮ್ಲಾವನ್ನು ತಲುಪಲಿದ್ದಾರೆ.
ಇನ್ನು, ಮಂಡಿಯಲ್ಲಿಯೇ,ಶನಿವಾರ ಮಂಡಿ-ಕಟೋಲಾ-ಪ್ರಶಾರ್ ರಸ್ತೆಯ ಬಾಘಿ ನುಲ್ಲಾದಲ್ಲಿ ಹಠಾತ್ ಪ್ರವಾಹ ಉಂಟಾಗಿ ಒಂದೇ ಕುಟುಂಬದ ಆರು ಸದಸ್ಯರು ನಾಪತ್ತೆಯಾಗಿದ್ದಾರೆ. ಬಾಲಕಿಯ ಮೃತದೇಹ ಆಕೆಯ ಮನೆಯಿಂದ ಸ್ವಲ್ಪ ದೂರದಲ್ಲಿ ಪತ್ತೆಯಾಗಿದೆ. ಆಕೆಯ ಕುಟುಂಬದ ಇತರ ಐದು ಸದಸ್ಯರು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದು, ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.
ಮಂಡಿ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಬಾಘಿ ಮತ್ತು ಓಲ್ಡ್ ಕಟೋಲಾ ಪ್ರದೇಶಗಳ ನಡುವಿನ ಹಲವಾರು ಕುಟುಂಬಗಳು ತಮ್ಮ ಮನೆಗಳನ್ನು ತೊರೆದು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದಿವೆ. ಇದಲ್ಲದೆ, ಹಲವಾರು ರಸ್ತೆಗಳು, ವಿದ್ಯುತ್ ಟ್ರಾನ್ಸ್ಫಾರ್ಮರ್ಗಳು ಮತ್ತು ನೀರು ಸರಬರಾಜು ಪೈಪ್ಗಳು ಸಹ ಹಠಾತ್ ಪ್ರವಾಹದಲ್ಲಿ ಹಾನಿಗೊಳಗಾಗಿವೆ.
ಐಎಂಡಿ ರಾಜ್ಯ ಉಪ ನಿರ್ದೇಶಕ ಬುಯಿ ಲಾಲ್, "ಮುಂದಿನ 5 ದಿನಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದೆ. ಇಡೀ ರಾಜ್ಯಕ್ಕೆ ಮುಂದಿನ 12 ಗಂಟೆಗಳ ಕಾಲ ಆರೆಂಜ್ ಅಲರ್ಟ್, ಆಗಸ್ಟ್ 24 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ" ಎಂದು ಹೇಳಿದರು. ಈ ವಾತಾವರಣದಲ್ಲಿ ಜನರು ನದಿಗಳು ಮತ್ತು ತೊರೆಗಳ ಬಳಿ ಹೋಗದಂತೆ ಸೂಚಿಸಲಾಗಿದೆ. ಇದಲ್ಲದೆ, ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯು ಆಗಸ್ಟ್ 25 ರವರೆಗೆ ಭೂಕುಸಿತದ ಎಚ್ಚರಿಕೆಯನ್ನು ನೀಡಿದೆ.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications