ವೈರಲ್ ವಿಡಿಯೋ: ಹಿಮಾಚಲ ಪ್ರದೇಶದಲ್ಲಿ ಮಳೆಯ ರೌದ್ರಾವತಾರ
Recommended Video

ಕುಲ್ಲು, ಸೆಪ್ಟೆಂಬರ್ 25: ಹಿಮಾಚಲ ಪ್ರದೇಶದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಸುರಿಯುತ್ತಲೇ ಇರುವ ಮಳೆ ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ಎಡಬಿಡದೆ ಸುರಿಯುತ್ತಲೇ ಇರುವ ಮಳೆಯಿಂದಾಗಿ ಇಲ್ಲಿನ ಬಿಯಾಸ್ ಮತ್ತು ರಾವಿ ನದಿಗಳು ತುಂಬಿ ಹರಿಯುತ್ತವೆ. ಇದರಿಂದಾಗಿ ಉಂಟಾದ ಪ್ರವಾಹಕ್ಕೆ ಇದುವರೆಗೂ 13 ಜನ ಮೃತರಾಗಿದ್ದಾರೆ.
ಗುಡ್ಡಗಾಡು ಪ್ರದೇಶವಾದ ಹಿಮಾಚಲ ಪ್ರದೇಶದಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ಭೂಕುಸಿತದಿಂದ ಪ್ರಾಣಹಾನಿ ತಪ್ಪಿಸಲು ಮುನ್ನೆಚ್ಚರಿಕೆ ದೃಷ್ಟಿಯಿಂದ ಮುನ್ನೂರೈವತ್ತಕ್ಕೂ ಹೆಚ್ಚು ರಸ್ತೆಗಳನ್ನು ಮುಚ್ಚಲಾಗಿದೆ.
ಹಿಮಾಚಲ ಪ್ರದೇಶವು ಪ್ರಮುಖ ಪ್ರವಾಸೀ ತಾಣವಾಗಿರುವುದರಿಂದ, ಪ್ರವಾಸಕ್ಕೆಂದು ಅಲ್ಲಿಗೆ ತೆರಳಿರುವವರು ಪರಿತಪಿಸುವಂತಾಗಿದೆ. ನದಿ ತೀರ ಪ್ರದೇಶಗಳಲ್ಲಿ ವಾಸಿಸುತ್ತಿದ್ದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ ಸೆಪ್ಟೆಂಬರ್ ಅಂತ್ಯದವರೆಗೂ ಈ ಗುಡ್ಡಗಾಡು ಪ್ರದೇಶದಲ್ಲಿ ಭಾರೀ ಮಳೆ ಮುಂದುವರಿಯಲಿದೆ.
| Array |
ನೀರಲ್ಲಿ ತೇಲಿಹೋದ ಗಜಗರ್ಭದ ಬಸ್!
ಬಸ್ಸೊಂದು ನಿಂತಿರುವಂತೆಯೇ ಭೂಕುಸಿತವುಂಟಾಗಿ, ಗಜಗರ್ಭದ ಬಸ್ಸು ಪ್ರಚಂಡ ಪ್ರವಾಹದಲ್ಲಿ ತೇಲಿಹೋಗುತ್ತಿರುವ ದೃಶ್ಯ ನೋಡಿದರೆ ಹಿಮಾಚಲ ಪ್ರದೇಶ ಪ್ರವಾಹದ ರೌದ್ರಾವತಾರ ಅರ್ಥವಾಗುತ್ತದೆ. ಈ ವಿಡಿಯೋವಂತೂ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.
| Array |
ತುಂಬಿ ಹರಿದ ಬಿಯಾಸ್ ನದಿ
ಕುಲ್ಲು ಮತ್ತು ಮನಾಲಿ ನಡುವಲ್ಲಿರುವ ಬಿಯಾಸ್(ಪಂಜಾಬಿ ಭಾಷೆಯಲ್ಲಿ ಬಿಯಾಸ್ ನದಿಯನ್ನು ವ್ಯಾಸ್ ನದಿ ಎಂದೂ ಕರೆಯಲಾಗುತ್ತದೆ) ನದಿ ತುಂಬಿ ತುಳುಕುತ್ತಿದ್ದು, ನದಿ ತೀರದಲ್ಲಿ ವಾಸವಿದ್ದ ಜನರನ್ನು ಮುನ್ನೆಚ್ಚರಿಕೆಯ ದೃಷ್ಟಿಯಿಂದ ಈಗಾಗಲೇ ಬೇರೆಡೆಗೆ ಸ್ಥಳಾಂತರಿಸಲಾಗಿದೆ.
|
ನೀರಿನಲ್ಲಿ ದೋಣಿಯಲ್ಲ, ಲಾರಿ!
ದೂರದಿಂದ ನೋಡಿದರೆ ಅಲೆಗಳ ಮೇಲೆ ದೋಣಿಯೊಂದು ಚಲಿಸುತ್ತಿರುವಂತೆ ಕಾಣುವ ದೃಶ್ಯ! ಹತ್ತಿರ ಬಂದು ನೋಡಿದರೆ ಪ್ರಳಯದ ರೌದ್ರಾವತಾರಕ್ಕೆ ದೋಣಿಯಂತೆ, ದೊಡ್ಡ ಲಾರಿಯೆ ನೀರಿನಲ್ಲಿ ತೇಲಿ ಹೋಗುತ್ತಿದೆ. ಈ ದೃಶ್ಯವೂ ವೈರಲ್ ಆಗಿದೆ.
|
ಕಣ್ಣೆದುರಲ್ಲೇ ಭೂಕುಸಿತ!
ಕಣ್ಣೆದುರಲ್ಲೇ ಭೂಕುಸಿತದಿಂದ ರಸ್ತೆಯೆಲ್ಲ ಪ್ರಪಾತವಾಗುತ್ತಿರುವ ದ್ರಶ್ಯ ಕಂಡುಬರುತ್ತಿದೆ. ಈ ರಸ್ತೆಯಲ್ಲಿ ಸಂಚರಿಸುವವರದು ಸಾಹಸದ ಬದುಕೇ. ಆದರೆ ಪ್ರಾಣ ಹಾನಿ ತಪ್ಪಿಸುವ ಸಲುವಾಗಿ ಈಗಾಗಲೇ ಇಲ್ಲಿನ ಮುನ್ನೂರೈವತ್ತಕ್ಕೂ ಹೆಚ್ಚು ರಸ್ತೆಗಳನ್ನು ಮುಚ್ಚಲಾಗಿದೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
IMD Weather Forecast: ದೇಶದ ಈ ಭಾಗಗಳಲ್ಲಿ ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಐಎಂಡಿ ಎಚ್ಚರಿಕೆ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
Bengaluru Airport: ಮಳೆ ಅಬ್ಬರಕ್ಕೆ 30 ವಿಮಾನಗಳ ಮಾರ್ಗ ಬದಲು, ಏರ್ಪೋರ್ಟ್ ಟರ್ಮಿನಲ್ನಲ್ಲಿ ನೀರು ಸೋರಿಕೆ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ












Click it and Unblock the Notifications