Hindenburg Research: ಹಿಂಡೆನ್ ಬರ್ಗ್ ವರದಿ, ಅದಾನಿ 8 ಕಂಪನಿಗಳ ಷೇರು ಕುಸಿತ
ಮುಂಬೈ, ಆಗಸ್ಟ್ 13: ಅಮೆರಿಕ ಮೂಲದ ಹಿಂಡೆನ್ ಬರ್ಗ್ ವರದಿ ಮತ್ತೆ ಭಾರತದಲ್ಲಿ ಚರ್ಚೆಗೆ ಕಾರಣವಾಗಿದೆ. ವರದಿಯ ಬಳಿಕ ಅದಾನಿ ಗ್ರೂಪ್ನ 8 ಕಂಪನಿಗಳ ಷೇರು ಕುಸಿತ ಕಂಡಿದೆ. ಹೂಡಿಕೆದಾರರು ಸಮಾಧಾನದಿಂದ ಇರಿ ಎಂದು ಭಾರತೀಯ ಷೇರು ಪೇಟೆ ನಿಯಂತ್ರಣ ಮಂಡಳಿ (ಸೆಬಿ) ಹೇಳಿದೆ. ಈ ವರದಿ ಬಳಿಕ ಸೋಮವಾರ ಪೇರು ಪೇಟೆಯಲ್ಲಿ ಷೇರುಗಳ ಮೌಲ್ಯದಲ್ಲಿ ಕುಸಿತ ಕಂಡುಬಂದಿದೆ.
ಸೋಮವಾರ ಅದಾನಿ ಗ್ರೂಪ್ನ 10 ಕಂಪನಿಗಳ ಪೈಕಿ 8 ಕಂಪನಿಗಳ ಷೇರು ಮೌಲ್ಯದಲ್ಲಿ ಕುಸಿತ ಕಂಡುಬಂದಿದೆ. ಹಿಂಡೆನ್ ಬರ್ಗ್ ವರದಿ ಸೆಬಿ ಅಧ್ಯಕ್ಷೆ ಮಾಧವಿ ಬುಚ್ ಮತ್ತು ಅವರ ಪತಿ ಅದಾನಿ ಷೇರು ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ತನ್ನ ವರದಿಯಲ್ಲಿ ಆರೋಪ ಮಾಡಿತ್ತು.

ಯಾವ-ಯಾವ ಕಂಪನಿಗಳು: ಅದಾನಿ ಗ್ರೂಪ್ನ ಅದಾನಿ ವಿಲ್ಮರ್, ಅದಾನಿ ಟೋಟಲ್ ಗ್ಯಾಸ್, ಅದಾನಿ ಎನರ್ಜಿ ಸಲ್ಯೂಷನ್ಸ್, ಎನ್ಡಿಟಿವಿ, ಅದಾನಿ ಪೋರ್ಟ್, ಅದಾನಿ ಎಂಟರ್ಪ್ರೈಸಸ್, ಎಸಿಸಿ ಮತ್ತು ಅದಾನಿ ಪವರ್ನ ಷೇರಿನ ಮೌಲ್ಯ ಇಳಿಕೆಯಾಗಿದೆ. ಆದರೆ ಅಂಜುಜಾ ಸಿಮೆಂಟ್ಸ್ ಮತ್ತು ಅದಾನಿ ಗ್ರೀನ್ ಎನರ್ಜಿ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ.
ಕಳೆದ ವಾರ something big soon India ಎಂದು ಸಾಮಾಜಿಕ ಜಾಲತಾಣದಲ್ಲಿ ಹಿಂಡೆನ್ ಬರ್ಗ್ ಪೋಸ್ಟ್ ಹಾಕಿತ್ತು. ಬಳಿಕ ಅದಾನಿ ಸಮೂಹದ ಸಾಗರೋತ್ತರ ಹೂಡಿಕೆಯಲ್ಲಿ ಸೆಬಿ ಅಧ್ಯಕ್ಷೆ ಮಾಧವಿ ಪುರಿ ಬುಚ್ ಮತ್ತು ಅವರ ಪತಿ ಧವಲ್ ಬುಚ್ ಪಾಲುದಾರಿಕೆ ಹೊಂದಿದ್ದಾರೆ ಎಂದು ಆರೋಪಿಸಿ ವರದಿ ಬಿಡುಗಡೆ ಮಾಡಿತ್ತು.
ಈ ಹಿಂದೆಯೂ ಅಮೆರಿಕ ಮೂಲದ ಶಾರ್ಟ್ ಸೆಲ್ಲರ್ ಕಂಪನಿ ಹಿಂಡೆನ್ ಬರ್ಗ್ ಅದಾನಿ ಗ್ರೂಪ್ ವಿರುದ್ಧ ವರದಿ ಪ್ರಕಟಿಸಿದಾಗ ಭಾರತದ ಷೇರುಪೇಟೆಯಲ್ಲಿ ತಲ್ಲಣ ಉಂಟಾಗಿತ್ತು. ಷೇರುಗಳು ಕುಸಿತಗೊಂಡಿದ್ದವು. ಈಗಲೂ ಹಾಗೆಯೇ ಆಗಿದ್ದು, ಹೂಡಿಕೆದಾರರಲ್ಲಿ ಆತಂಕ ಉಂಟಾಗಿದೆ.
ಈಗಾಗಲೇ ಕಳೆದ ವಾರ ಬಿಡುಗಡೆಯಾದ ಹಿಂಡೆನ್ ಬರ್ಗ್ ವರದಿ ಭಾರತದಲ್ಲಿ ರಾಜಕೀಯ ಸ್ವರೂಪ ಪಡೆದಿದೆ. ವರದಿ ಬಗ್ಗೆ ಆರೋಪ ಪ್ರತ್ಯಾರೋಪಗಳು ಕೇಳಿ ಬರುತ್ತಿವೆ. ಇಂತಹ ಸಮಯದಲ್ಲಿಯೇ ಷೇರುಪೇಟೆಯಲ್ಲಿ ಅದಾನಿ ಗ್ರೂಪ್ನ 8 ಕಂಪನಿಗಳ ಷೇರುಗಳಲ್ಲಿ ಕುಸಿತವಾಗಿದೆ.
ಆತಂಕ ಬೇಡ ಎಂದ ಸೆಬಿ: ಹಿಂಡೆನ್ ಬರ್ಗ್ ವರದಿ, ಅದಾನಿ ಗ್ರೂಪ್ 8 ಕಂಪನಿಗಳ ಷೇರುಗಳು ಕುಸಿತದ ಬಳಿಕ ಸೆಬಿ ಹೂಡಿಕೆದಾರರ ಆತಂಕ ಕಡಿಮೆ ಮಾಡಲು ಮುಂದಾಗಿದೆ. ನಿಮ್ಮ ಕಾರ್ಯ ಮುಂದುವರೆಸಿ, ಸಮಾಧಾನದಿಂದ ಇರಿ ಎಂದು ಸೆಬಿ ಹೇಳಿದೆ.
ಆಗಸ್ಟ್ 10ರ ವರದಿಯಲ್ಲಿ ಹಿಂಡೆನ್ ಬರ್ಗ್ ಅದಾನಿ ಸಮೂಹದ ಸಾಗರೋತ್ತರ ಹೂಡಿಕೆಯಲ್ಲಿ ಬುಚ್ ದಂಪತಿಯ ಪಾಲುದಾರಿಕೆ ಇದೆ. ಅದಾನಿ ಮರಿಷಸ್ ಮತ್ತು ಇನ್ನಿತರ ದೇಶಗಳಲ್ಲಿ ಹೊಂದಿರುವ ಶೆಲ್ ಕಂಪನಿಗಳ ಬಗ್ಗೆ ತನಿಖೆ ನಡೆಸಲು ಸೆಬಿ ಯಾವುದೇ ತೋರದಿರುವುದು ಅಚ್ಚರಿ ಮೂಡಿಸಿದೆ ಎಂದು ಹೇಳಿತ್ತು.
ಅದಾನಿ ಷೇರು ಹಗರಣದ ಕುರಿತು 2023ರಲ್ಲಿಯೇ ಹಿಂಡೆನ್ ಬರ್ಗ್ ವರದಿಯೊಂದನ್ನು ಪ್ರಕಟಿಸಿತ್ತು. ಆದರೆ ಈಗ ಈ ಷೇರು ಹಗರಣದಲ್ಲಿ ಮಾಧವಿ ಬುಚ್, ಧವಲ್ ಬುಚ್ ಪಾತ್ರವಿದೆ ಎಂದು ಆರೋಪಿಸಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications