Sushant Singh Case: ಸಾವಿನ ಪ್ರಕರಣ ಬಗ್ಗೆ ಹೊಸ ಮಾಹಿತಿ ಬಹಿರಂಪಡಿಸಿದ ಡಿಸಿಎಂ ಫಡ್ನವಿಸ್
ಬೆಂಗಳೂರು, ಜೂನ್ 29: ಹಿಂದಿ ನಟ ಸುಶಾಂತ್ ಸಿಂಗ್ ರಜಪೂತ್ ಅವರು ಮೃತಪಟ್ಟು ಸುಮಾರು ಮೂರು ವರ್ಷ ಕಳೆದಿವೆ. ವೇಳೆ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರಕರಣದ ಬಗ್ಗೆ ಹೊಸ ಮಾಹಿತಿಯೊಂದನ್ನು ಬಹಿರಂಗಪಡಿಸಿದ್ದಾರೆ. ಇದರಿಂದ ಪ್ರಕರಣದ ತನಿಖೆಗೆ ತಿರುವು ಸಿಗುವ ಸಾಧ್ಯತೆ ಇದೆ.
ಸುಶಾಂತ್ ಸಾವು ತೀವ್ರ ಚರ್ಚೆ ಹುಟ್ಟುಹಾಕಿತ್ತು, ಕೆಲವು ಭಾಲಿವುಡ್ ನಟರಿಗೆ ಸಂಕಷ್ಟ ಒದಗಿತೇನೋ ಎನ್ನುವಷ್ಟರಲ್ಲಿಪ್ರಕರಣ ತನಿಖೆಯ ಪ್ರಗತಿ ನಿಧಾವಾಯಿತು ಅಂತಲೂ ಹೇಳಲಾಗುತ್ತಿದೆ. ಆದರೆ ಅವರ ಅಭಿಮಾನಿಗಳು ಇದನ್ನು ಆತ್ಮಹತ್ಯೆಯಲ್ಲಿ ಕೊಲೆ ಎಂದು ಆರೋಪಿಸಿದ್ದಾರೆ. ಈ ಸಾವು ಹಲವು ಸಂಶಯಗಳಿಗೆ ಎಡೆ ಮಾಡಿಕೊಟ್ಟಿತ್ತು.

ಸದ್ಯ ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳ ಸುಪರ್ದಿಯಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿರುವ ದೇವೇಂದ್ರ ಫಡ್ನವೀಸ್ ಅವರು, ಪ್ರಕರಣ ಕುರಿತು ಸಾಕಷ್ಟು ಪುರಾವೆಗಳು ಸರ್ಕಾರದ ಬಳಿ ಇವೆ. ಕೆಲವು ಸಾಕ್ಷಗಳನ್ನು ಪೊಲೀಸರಿಗೂ ನೀಡುವಂತೆ ತಿಳಿಸಲಾಗಿದೆ. ಈ ಕುರಿತು ಕೆಲವರಿಂದ ಮಾಹಿತಿ ಸಹ ಅಧಿಕಾರಿಗಳು ಸಂಗ್ರಹಿಸಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.
ಅಧಿಕಾರಿಗಳು ಸಲ್ಲಿಸಿದ ಪುರಾವೆಗಳ ವಿಶ್ವಾಸಾರ್ಹತೆ, ನಿಖರತೆ ಸತ್ಯದ ಕುರಿತು ಪರಿಶೀಲನೆ ಪ್ರಕ್ರಿಯೆ ನಡೆಯುತ್ತಿದೆ. ಹೀಗಾಗಿ ಪ್ರಕರಣದ ತನಿಖೆ ಇನ್ನೂ ಪ್ರಗತಿಯಲ್ಲಿದೆ. ಹೀಗಾಗಿ ಈ ಕುರಿತು ಯಾವುದೇ ಹೆಚ್ಚಿನ ಮಾಹಿತಿ ನೀಡಲಾಗಲಿ, ಪ್ರತಿಕ್ರಿಯೆ ನೀಡುವುದಾಗಲಿ ನಾನು ಮಾಡುವುದಿಲ್ಲ. ಅವರ ಸಾವು ಅಕಾಲಿಕ ಎಂದು ಫಡ್ನವಿಸ್ ತಿಳಿಸಿದರು.

ರಿಯಾ ಚಕ್ರವರ್ತಿ ವಿಚಾರಣೆ
ಸುಶಾಂತ್ ಸಿಂಗ್ ಮತ್ತು ರಿಯಾ ಚಕ್ರವತಿ ಪ್ರೀತಿಸುತ್ತಿದ್ದರು ಎನ್ನಲಾಗಿತ್ತು. ಸುಶಾಂತ್ ಸಾವಿನ ಬಳಿಕ ರಿಯಾ ಚಕ್ರವರ್ತಿ ಅವರು ಸಾವಿನ ಕುರಿತ ಮಾದಕವಸ್ತು ಆರೋಪದಲ್ಲಿ ಸುಮಾರು ಒಂದು ತಿಂಗಳು ಸೆರೆವಾಸ ಅನುಭವಿಸಿದರು. ಪ್ರಕರಣ ಸಂಬಂಧ ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು.
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ. ಅವರು ಸತ್ತು ಮೂರು ವರ್ಷವಾದರೂ ಇನ್ನೂ ಸಹ ಈ ಸಾವು ಕೊಲೆಯೋ ಇಲ್ಲ ಆತ್ಮಹತ್ಯೆಯೋ ಎಂಬುದು ತಿಳಿದು ಬಂದಿಲ್ಲ. ತನಿಖೆ ನಡೆಯುತ್ತಲೆ ಇದೆ. ಸುಶಾಂತ್ ಸಿಂಗ್ ರಜಪೂತ್ ಅವರದ್ದು ಕೊಲೆ ಎಂದು ಅವರ ಮರಣೋತ್ತರ ಪರೀಕ್ಷೆ ಮಾಡಿದ್ದ ಕೂಪರ್ ಆಸ್ಪತ್ರೆ ಸಿಬ್ಬಂದಿ ಸ್ಫೋಟಕ ಹೇಳಿಕೆ ನೀಡಿದ್ದರು. ಈ ಆಯಾಮದಲ್ಲೂ ಸಹ ಈಗಾಗಲೇ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications