ಹಿಂದಿ ಮಾತನಾಡುವಾಗ ನನಗೆ ನಡುಕ ಉಂಟಾಗುತ್ತೆ: ನಿರ್ಮಲ ಸೀತಾರಾಮನ್
ನವದೆಹಲಿ, ಸೆಪ್ಟೆಂಬರ್ 16: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಸಭಿಕರನ್ನು ಉದ್ದೇಶಿಸಿ ಹಿಂದಿಯಲ್ಲಿ ಮಾತನಾಡುವಾಗ ನನಗೆ ನಡುಕ ಉಂಟಾಗುತ್ತದೆ ಮತ್ತು ನಾನು ಹಿಂಜರಿಕೆಯಿಂದ ಹಿಂದಿ ಭಾಷೆಯನ್ನು ಮಾತನಾಡುತ್ತೇನೆ ಎಂದು ಹೇಳಿದ್ದಾರೆ.
ಹಿಂದಿ ವಿವೇಕ್ ಮ್ಯಾಗಜೀನ್ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸೀತಾರಾಮನ್, ಹಿಂದಿಯಲ್ಲಿ ಭಾಷಣ ಮಾಡುವುದಾಗಿ ಹಿಂದಿನ ಸ್ಪೀಕರ್ ಮಾಡಿದ ಘೋಷಣೆಯನ್ನು ಉಲ್ಲೇಖಿಸಿದರು. ಹಿಂದಿಯಲ್ಲಿ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡುವುದು ನನಗೆ ನಡುಕ ಹುಟ್ಟಿಸುತ್ತದೆ ಎಂದು ಹೇಳಿದರು. ಅವರು ಈ ಸ್ಥಿತಿಗೆ ಕಾರಣವಾದ ಸಂದರ್ಭಗಳನ್ನು ವಿವರಿಸಿದರು.
ಶ್ರೀಮತಿ ಸೀತಾರಾಮನ್ ಅವರು ತಮಿಳುನಾಡಿನಲ್ಲಿ ಹುಟ್ಟಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದು, ಅದು ಹಿಂದಿ ವಿರುದ್ಧದ ಆಂದೋಲನದ ಕಾಲವಾಗಿತ್ತು. ಹಿಂದಿ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳಿಗೆ ಸಾಕ್ಷಿಯಾಗಿತ್ತು ಎಂದ ಅವರು, ಹಿಂದಿ ಅಥವಾ ಸಂಸ್ಕೃತವನ್ನು ದ್ವಿತೀಯ ಭಾಷೆಯಾಗಿ ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳು, ಮೆರಿಟ್ ಲಿಸ್ಟ್ಗಳಲ್ಲಿ ಇರುವವರೂ ಸಹ ತಮ್ಮ ಭಾಷೆಗಳ ಆಯ್ಕೆಯಿಂದಾಗಿ ರಾಜ್ಯ ಸರ್ಕಾರ ನೀಡುವ ವಿದ್ಯಾರ್ಥಿ ವೇತನವನ್ನು ಪಡೆದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.
ವಯಸ್ಕರಾದ ನಂತರ ಒಬ್ಬ ವ್ಯಕ್ತಿಗೆ ಹೊಸ ಭಾಷೆಯನ್ನು ಕಲಿಯಲು ಕಷ್ಟವಾಗಿತ್ತದೆ. ತಾನು ತನ್ನ ಗಂಡನ ಮಾತೃಭಾಷೆ ತೆಲುಗು ಆಯ್ಕೆ ಮಾಡಿಕೊಂಡೆ. ಆದರೆ ಹಿಂದಿಯನ್ನು ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ನಾನು ಸಾಕಷ್ಟು ಸಂಕೋಚದಿಂದ ಹಿಂದಿ ಮಾತನಾಡುತ್ತೇನೆ ಇದು ತಾನು ಮಾತನಾಡುವ ನಿರರ್ಗಳತೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಸಮಾಜವಾದದ ತತ್ವದಿಂದ ಹಿನ್ನಡೆ
ಆದಾಗ್ಯೂ, ಹಿಂದಿಯಲ್ಲಿ ತಮ್ಮ ಭಾಷಣವನ್ನು ಮುಂದುವರೆಸಿದರು. 35 ನಿಮಿಷಗಳ ಕಾಲ ಸಂಪೂರ್ಣವಾಗಿ ಭಾಷಣವನ್ನು ಹಿಂದಿಯಲ್ಲಿ ಮುಗಿಸಿದರು. ಭಾರತವು ಈ ಹಿಂದೆಯೇ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯ ಸ್ಥಾನವನ್ನು ಸಾಧಿಸಬಹುದಿತ್ತು. ಆದರೆ ಕೇಂದ್ರೀಕೃತ ಯೋಜನೆಯನ್ನು ಅವಲಂಬಿಸಿರುವ ಸಮಾಜವಾದದ ತತ್ವವನ್ನು ಆಮದು ಮಾಡಿಕೊಂಡಿದ್ದಕ್ಕಾಗಿ ಹಿನ್ನಡೆಯಾಯಿತು ಎಂದು ಹೇಳಿದರು.

ವಾಜಪೇಯಿ ಬರುವವರೆಗೂ ಯಾವುದೇ ಪ್ರಗತಿ ಆಗಲಿಲ್ಲ
ಅವರು 1991ರ ಕಾಂಗ್ರೆಸ್ ಸರ್ಕಾರವು ಕೈಗೊಂಡ ಆರ್ಥಿಕ ಸುಧಾರಣೆಗಳನ್ನು "ಅಧೆ-ಅಧುರೆ ಸುಧಾರಣೆಗಳು" (ಅರ್ಧ-ಬೇಯಿಸಿದ ಸುಧಾರಣೆಗಳು) ಎಂದು ಕರೆದರು. ಐಎಂಎಫ್ ವಿಧಿಸಿದ ಕಟ್ಟುನಿಟ್ಟಿನ ಪ್ರಕಾರ ಆರ್ಥಿಕತೆಯು ಸರಿಯಾದ ರೀತಿಯಲ್ಲಿ ಬೆಳೆದಿಲ್ಲ. ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸುವವರೆಗೂ ಯಾವುದೇ ಪ್ರಗತಿ ಆಗಲಿಲ್ಲ. ಅವರಿಂದ ಮೂಲಭೂತ ಸೌಕರ್ಯಗಳ ನಿರ್ಮಾಣ, ರಸ್ತೆಗಳು ಮತ್ತು ಮೊಬೈಲ್ ದೂರವಾಣಿಯ ಮೇಲೆ ಅವರ ಗಮನವು ನಮಗೆ ಸಾಕಷ್ಟು ಸಹಾಯ ಮಾಡಿತು ಎಂದರು.

ನರೇಂದ್ರ ಮೋದಿ ಸುಧಾರಣೆ
ಭ್ರಷ್ಟ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇನ್ನೂ ಹತ್ತು ವರ್ಷಗಳು ಕಳೆದುಹೋಗಿವೆ. ಅಲ್ಲಿ ವೈಯಕ್ತಿಕ ಲಾಭಗಳನ್ನು ಕೇಂದ್ರೀಕರಿಸಿಕೊಳ್ಳಲಾಗಿತ್ತು. ದೇಶದ ಹಿತಾಸಕ್ತಿಗಳನ್ನು ನಿರಾಕರಿಸಲಾಯಿತು. ಪ್ರಧಾನ ಮಂತ್ರಿ ಹುದ್ದೆಗೆ ಏರಿದ ನಂತರ ನರೇಂದ್ರ ಮೋದಿ ಅವರು ಕೆಲವು ಸುಧಾರಣೆಗಳನ್ನು ಪ್ರಾರಂಭಿಸಿದರು. ಇದರಲ್ಲಿ ನೇರ ಲಾಭ ವರ್ಗಾವಣೆ ಯೋಜನೆಯೂ ಸೇರಿದೆ. ಇದು ಸೋರಿಕೆಯಿಲ್ಲದೆ ಸಾರ್ವಜನಿಕ ವಿತರಣೆಯಲ್ಲಿ ಪಾರದರ್ಶಕತೆಯನ್ನು ಖಾತ್ರಿಪಡಿಸಿದೆ ಎಂದು ಅವರು ಹೇಳಿದರು.

ವ್ಯವಹಾರಗಳಿಂದ ದೂರವಿರಲು ನಿರ್ಧಾರ
ಆರ್ಥಿಕತೆಯ ಸಾಲದ ಅಗತ್ಯಗಳನ್ನು ತ್ವರಿತವಾಗಿ ಪೂರೈಸಬಲ್ಲ ಎಸ್ಬಿಐನಂತಹ ದೊಡ್ಡ ಸಾಲದಾತನ ಹೊರಹೊಮ್ಮುವಿಕೆಗೆ ನೀತಿ ನಿರ್ಧಾರಗಳು ಅಡಿಪಾಯ ಹಾಕಿವೆ. ಮೋದಿ ಆಡಳಿತವು ಸರ್ಕಾರ ಮಾಡಬಾರದ ವ್ಯವಹಾರಗಳಿಂದ ದೂರವಿರಲು ಸರಿಯಾದ ನಿರ್ಧಾರಗಳನ್ನು ತೆಗೆದುಕೊಂಡಿದೆ. ಏರ್ ಇಂಡಿಯಾ ಖಾಸಗೀಕರಣಗೊಳ್ಳುವವರೆಗೆ ದಿನಕ್ಕೆ ₹ 20 ಕೋಟಿ ನಷ್ಟವನ್ನು ಎದುರಿಸುತ್ತಿತ್ತು ಎಂದು ಶ್ರೀಮತಿ ಸೀತಾರಾಮನ್ ಹೇಳಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications