Hindu Population: ಹಿಂದೂ ಜನಸಂಖ್ಯೆ ಕುಸಿತ, ಮುಸ್ಲಿಂ ಜನಸಂಖ್ಯೆ ಹೆಚ್ಚಳ; ಪ್ರಧಾನಿ ಸಮಿತಿ ವರದಿ
ಭಾರತದಲ್ಲಿ 1950 ಮತ್ತು 2015 ರ ನಡುವೆ ಹಿಂದೂ ಜನಸಂಖ್ಯೆಯ ಶೇಕಡಾ 7.82 ರಷ್ಟು ಕಡಿಮೆಯಾಗಿದೆ, ಆದರೆ ಮುಸ್ಲಿಮರ ಸಂಖ್ಯೆ ಶೇಕಡಾ 43.15 ರಷ್ಟು ಹೆಚ್ಚಾಗಿದೆ ಎಂದು ಪ್ರಧಾನ ಮಂತ್ರಿಯ ಆರ್ಥಿಕ ಸಲಹಾ ಮಂಡಳಿ ವರದಿಯಲ್ಲಿ (EAC-PM) ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.
'ಧಾರ್ಮಿಕ ಅಲ್ಪಸಂಖ್ಯಾತರ ಪಾಲು: ಕ್ರಾಸ್-ಕಂಟ್ರಿ ಅನಾಲಿಸಿಸ್ (1950-2015)' ಎಂಬ ಶೀರ್ಷಿಕೆಯ ಪತ್ರಿಕಾ ವರದಿಯಲ್ಲಿ ಭಾರತದ ಜನಸಂಖ್ಯೆಯಲ್ಲಿ ಜೈನರ ಜನಸಂಖ್ಯೆ 1950 ರಲ್ಲಿ ಶೇಕಡಾ 0.45 ರಿಂದ 2015 ರಲ್ಲಿ ಶೇಕಡಾ 0.36 ಕ್ಕೆ ಇಳಿದಿದೆ ಎಂದು ವರದಿ ಮಾಡಿದೆ.

78.06ಕ್ಕೆ ಕುಸಿದ ಹಿಂದೂ ಜನಸಂಖ್ಯೆ
1950ರಲ್ಲಿ ಶೇ 84.68 ರಷ್ಟಿದ್ದ ಬಹುಸಂಖ್ಯಾತ ಹಿಂದೂ ಜನಸಂಖ್ಯೆಯಲ್ಲಿ 2015 ರಲ್ಲಿ ಶೇಕಡಾ 78.06 ಕ್ಕೆ ಕುಸಿದಿದೆ (7.82 ರಷ್ಟು ಕುಸಿತ). 1950 ರಲ್ಲಿ ಮುಸ್ಲಿಂ ಜನಸಂಖ್ಯೆಯು ಒಟ್ಟಾರೆ ಜನಸಂಖ್ಯೆಯ ಶೇಕಡಾ 9.84 ರಷ್ಟಿತ್ತು ಮತ್ತು 2015 ರಲ್ಲಿ ಶೇಕಡಾ 14.09 ಕ್ಕೆ ಏರಿಕೆ ಕಂಡಿದೆ ಎಂದು ಇಎಸಿ-ಪಿಎಂ ಸದಸ್ಯ ಶಮಿಕಾ ರವಿ ನೇತೃತ್ವದ ತಂಡವು ಸಿದ್ಧಪಡಿಸಿದ ವರದಿಯಲ್ಲಿ ಹೇಳಲಾಗಿದೆ.
ಕ್ರಿಶ್ಚಿಯನ್ ಜನಸಂಖ್ಯೆಯ ಪಾಲು ಶೇಕಡಾ 2.24 ರಿಂದ 2.36 ಕ್ಕೆ ಏರಿಕೆ ಕಂಡಿದೆ. 1950 ಮತ್ತು 2015 ರ ನಡುವೆ 5.38 ಶೇಕಡಾ ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ.
ಸಿಖ್ ಜನಸಂಖ್ಯೆಯ ಪಾಲು 1950 ರಲ್ಲಿ ಶೇಕಡಾ 1.24 ರಿಂದ 2015 ರಲ್ಲಿ ಶೇಕಡಾ 1.85 ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಪಾರ್ಸಿ ಜನಸಂಖ್ಯೆಯ ಪಾಲು ಶೇಕಡಾ 85 ರಷ್ಟು ಕುಸಿತವನ್ನು ಕಂಡಿದೆ, 1950 ರಲ್ಲಿ ಪಾಲು 0.004 ರಿಂದ 2015 ರಲ್ಲಿ ಶೇ 0.03 ಕ್ಕೆ ಇಳಿಕೆಯಾಗಿದೆ.
"ಸಮಾಜದಲ್ಲಿ ವೈವಿಧ್ಯತೆಯನ್ನು ಬೆಳೆಸಲು ಅನುಕೂಲಕರ ವಾತಾವರಣವಿದೆ" ಎಂದು ಈ ಅಂಕಿ ಅಂಶಗಳು ಸೂಚಿಸುತ್ತದೆ, ತಳಮಟ್ಟದ ಮೂಲಕ ಪೋಷಣೆಯ ವಾತಾವರಣ ಮತ್ತು ಸಾಮಾಜಿಕ ಬೆಂಬಲವನ್ನು ಒದಗಿಸದೆ ಸಮಾಜದ ಹಿಂದುಳಿದ ವರ್ಗಗಳಿಗೆ ಉತ್ತಮ ಜೀವನ ಫಲಿತಾಂಶಗಳನ್ನು ಉತ್ತೇಜಿಸಲು ಸಾಧ್ಯವಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.
ಬಾಂಗ್ಲಾದೇಶ, ಪಾಕಿಸ್ತಾನ, ಶ್ರೀಲಂಕಾ, ಭೂತಾನ್ ಮತ್ತು ಅಫ್ಘಾನಿಸ್ತಾನದಂತಹ ದೇಶಗಳಲ್ಲಿ ಬಹುಸಂಖ್ಯಾತ ಧಾರ್ಮಿಕ ಪಂಗಡದ ಪಾಲು ಹೆಚ್ಚಿದೆ ಮತ್ತು ಅಲ್ಪಸಂಖ್ಯಾತ ಜನಸಂಖ್ಯೆಯು ಆತಂಕಕಾರಿಯಾಗಿ ಕುಗ್ಗಿದೆ. ಆದರೆ ಭಾರತದಲ್ಲಿ ಇದಕ್ಕೆ ತದ್ವಿರುದ್ಧವಾಗಿರುವುದು ಗಮನಾರ್ಹವಾಗಿದೆ.
-
ರಷ್ಯಾದಿಂದ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ಅನುಮತಿ ಕೊಟ್ಟ ಅಮೆರಿಕ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಯುಪಿಎಸ್ಸಿ 2025 ಫಲಿತಾಂಶ ಪ್ರಕಟ: ಪಾಸಾದವರು 958 ಆಕಾಂಕ್ಷಿಗಳು, ಅರ್ಜಿ ಹಾಕಿದ್ದವರು 10 ಲಕ್ಷ ಮಂದಿ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna












Click it and Unblock the Notifications