ಹಿಂದೂ ಇಸ್ಲಾಂ ಧರ್ಮಕ್ಕಿಂತ ಹಳೆಯದು: ಮುಸ್ಲಿಂ ಮೂಲದ ಬಗ್ಗೆ ಕಾಂಗ್ರೆಸ್ಸಿಗನ ಸ್ಪೋಟಕ ಹೇಳಿಕೆ
ಬೆಂಗಳೂರು, ಆಗಸ್ಟ್ 17: ಕಾಂಗ್ರೆಸ್ ಪಕ್ಷವನ್ನು ಬಹುತೇಕ ಮುಸಲ್ಮಾನರು ಬೆಂಬಲಿಸುತ್ತಾರೆ. ಕಾಂಗ್ರೆಸ್ ಸಹ ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹೆಚ್ಚಿನ ಗಮನಹರಿಸುವುದು ಗೊತ್ತಿರುವ ವಿಚಾರ. ಆದರೆ ಸದ್ಯ ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ಮುಸ್ಲಿಂರ ಮೂಲದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಹೌದು, ಕಾಂಗ್ರೆಸ್ನ ಮಾಜಿ ನಾಯಕ ಗುಲಾಂ ನಬಿ ಆಜಾದ್ ಅವರು ಮುಸ್ಲಿಮರ ಮೂಲದ ಕುರಿತು ಮಾತನಾಡಿದ್ದಾರೆ. ಹಿಂದೂ ಧರ್ಮವು ಇಸ್ಲಾಂ ಧರ್ಮಕ್ಕಿಂತ ಹಳೆಯದು ಎಂದು ಹೇಳಿಕೆ ನೀಡಿದ್ದಾರೆ.

ಕಳೆದ ಆಗಸ್ಟ್ 14 ರಂದು ದೋಡಾ ಜಿಲ್ಲೆಯಲ್ಲಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಕಾಂಗ್ರೆಸ್ ನಾಯಕ, ಇಸ್ಲಾಂ ಧರ್ಮಕ್ಕಿಂತ ಹಿಂದು ಧರ್ಮ ಎಂಬುದಕ್ಕೆ ಕಾಶ್ಮೀರವೇ ಉದಾಹರಣೆ. 600 ವರ್ಷಗಳ ಹಿಂದೆ ಕಾಶ್ಮೀರದಲ್ಲಿ ಮುಸ್ಲಿಮರು ಇರಲಿಲ್ಲ. ಕಾಶ್ಮೀರಿ ಪಂಡಿತರು ಇಸ್ಲಾಂಗೆ ಮತಾಂತರಗೊಂಡರು ಎಂದು ಹೇಳಿದ್ದಾರೆ.
ಭಾರತದಲ್ಲಿ ಮಾತ್ರವಲ್ಲ ಜಗತ್ತು, ಇಸ್ಲಾಂ 1500 ವರ್ಷಗಳ ಹಿಂದೆ ಬಂದಿದ್ದು, ಆದರೆ ಹಿಂದೂ ಧರ್ಮ ಬಹಳ ಹಳೆಯದು. ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಕ್ಷದ ಮುಖ್ಯಸ್ಥರು ಸಹ ಇಸ್ಲಾಂ ಧರ್ಮವು ಹೊರಗಿನಿಂದ ಬಂದಿರಬೇಕು, 10-20 ಜನರು ಮೊಘಲ್ ಸೈನ್ಯದಿಂದ ಬಂದ ಕುರಿತು ಮಾತನಾಡಿದ್ದರು. ಉಳಿದವರು ಹಿಂದೂ-ಸಿಖ್ ಧರ್ಮದಿಂದ ಮತಾಂತರಗೊಂಡಿದ್ದಾರೆ ಎಂದು ಅಜಾದ್ ತಿಳಿಸಿದರು.

ಇಸ್ಲಾಂ ಕೇವಲ 1500 ವರ್ಷದಷ್ಟು ಹಳೆಯದು
ಸದ್ಯ ಈ ಕುರಿತ ವಿಡಿಯೋ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಗುಲಾಮ್ ನಬಿ ಆಜಾದ್ ಅವರು, ನಾವು ಹಿಂದೂಗಳು, ಮುಸ್ಲಿಮರು, ಕಾಶ್ಮೀರಿ ಮತ್ತು ದಲಿತರಿಗಾಗಿ ರಾಜ್ಯವನ್ನು ನಿರ್ಮಿಸಿದ್ದೇವೆ. ಇದು ನಮ್ಮ ಭೂಮಿಯಾಗಿದ್ದು, ಇಲ್ಲಿಗೆ ಯಾರೂ ಹೊರಗಿನಿಂದ ಬಂದಿಲ್ಲ. ಕೆಲವರು ಹೊರಗಿನಿಂದ ಇಲ್ಲಿಗೆ ಬಂದಿದ್ದಾರೆ ಎಂದು ನಮ್ಮ ಸಹ ಸಂಸದರೊಬ್ಬರು ಹೇಳಿದನ್ನು ನಾನು ಒಪ್ಪಿರಲಿಲ್ಲ ಎಂದರು.
ನಮ್ಮ ಹಿಂದೂಸ್ತಾನದಲ್ಲಿ ಇಸ್ಲಾಂ ಕೇವಲ 1500 ವರ್ಷಗಳಷ್ಟು ಹಳೆಯದು. ಹಿಂದೂ ಧರ್ಮವು ಪುರಾತನವಾದದ್ದು. ಅದಕ್ಕೆ ಅದರದ್ದೇ ಆದ ದೀರ್ಘ ಇತಿಹಾಸ ಇದೆ. ಆದ್ದರಿಂದ ಮುಸ್ಲಿಮರಲ್ಲಿ 10-20 ಜನರು ಹೊರಗಿನಿಂದ ಬಂದಿರಬೇಕು. ಮೊಘಲರ ಕಾಲದಲ್ಲಿ ಅವರ ಸೈನ್ಯದಲ್ಲಿ, ಉಳಿದವರೆಲ್ಲರೂ ಭಾರತದಲ್ಲಿ ಹಿಂದೂಗಳಿಂದ ಮುಸ್ಲಿಮರಾಗಿ ಮತಾಂತರಗೊಂಡಿದ್ದಾರೆ. ಇದಕ್ಕೆ ನಮ್ಮ ಕಾಶ್ಮೀರವೇ ತಕ್ಕ ಉದಾಹರಣೆಯಾಗಿದೆ ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಆಜಾದ್ ಅವರು, ಸುಮಾರು 600 ವರ್ಷಗಳ ಹಿಂದೆ ಕಾಶ್ಮೀರದಲ್ಲಿ ಮುಸಲ್ಮಾನರಾಗಿದ್ದವರು ಯಾರು?. ಎಲ್ಲರೂ ಕಾಶ್ಮೀರಿ ಪಂಡಿತರು, ಅವರೆಲ್ಲರೂ ಇಸ್ಲಾಂಗೆ ಮತಾಂತರಗೊಂಡವರೆ ಆಗಿದ್ದಾರೆ. ಹಾಗಾಗಿ ಎಲ್ಲರೂ ಈ ಧರ್ಮದಲ್ಲಿ ಹುಟ್ಟಿದ್ದಾರೆ ಎಂದು ನಾನು ಹೇಳಿದೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications