ಹಿಂದೂಗಳು ಯಾರನ್ನೂ ವಿರೋಧಿಸುವುದಿಲ್ಲ: ಮೋಹನ್ ಭಾಗವತ್
ಹಿಂದೂಗಳು ಯಾರ ವಿರೋಧಿಯೂ ಅಲ್ಲ, ಯಾರನ್ನೂ ದ್ವೇಷಿಸುವುದಿಲ್ಲ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಶತಮಾನದಿಂದ ವಿಶ್ವದಾದ್ಯಂತ ಹಿಂದೂಗಳನ್ನು ನಾಶ ಮಾಡಲು ಪ್ರಯತ್ನಿಸಿದವರು ತಮ್ಮಲ್ಲೇ ಜಗಳವಾಡುತ್ತಿದ್ದಾರೆ, ನಮ್ಮನ್ನು ನಾಶ ಮಾಡುವ ಪ್ರಯತ್ನ ಮಾಡಿದ್ದಾಯಿತು. ಆದರೆ ಅದರಲ್ಲಿ ಗೆಲುವು ಸಿಕ್ಕಿಲ್ಲ.
ಇಂದಿಗೂ ಭಾರತದ ಸನಾತನ ಧಾರ್ಮಿಕ ಜೀವನವನ್ನು ಯಥಾಸ್ಥಿತಿಯಲ್ಲಿ ಕಾಣಬಹುದು. ಇಷ್ಟೆಲ್ಲಾ ದೌರ್ಜನ್ಯಗಳ ನಡುವೆಯೂ ನಮ್ಮಲ್ಲಿ ಮಂತ್ರ ಭೂಮಿ ಇದೆ.
ನಮ್ಮಲ್ಲಿ ಸಾಕಷ್ಟು ಸಂಪನ್ಮೂಲಗಳು ಇರುವಾಗ ಏಕೆ ಭಯಪಡಬೇಕು. ಜೀವನದ ಬಗೆಗಿನ ನಮ್ಮ ಸಮಗ್ರ ಸೃಷ್ಟಿಕೋನವನ್ನು ಮರೆತಿರುವುದು ದೌರ್ಬಲ್ಯಕ್ಕೆ ಕಾರಣವಾಗಿದೆ ಎಂದರು.
ಹಿಂದೂ ಧರ್ಮ ಶತಮಾನಗಳಿಂದ ತನ್ನ ಅಸ್ತಿತ್ವವನ್ನು ಉಳಿಸಿಕೊಂಡು ಬಂದಿದ್ದು, ಪ್ರಗತಿ ಸಾಧಿಸಿದೆ ಎಂದು ಹೇಳಿದರು.

ಜಾತಿ, ಧರ್ಮ, ಭಾಷೆಗಿಂತಲೂ ಮಿಗಿಲಾಗಿ ರಾಷ್ಟ್ರೀಯ ಹಿತಾಸಕ್ತಿಗೆ ಆದ್ಯತೆ ನೀಡಬೇಕು, ಹಿಂದೂ ಹಿತ ಅಂದರೆ ರಾಷ್ಟ್ರಹಿತ, ಈ ಮೂಲಕ ಬಲಿಷ್ಠ ಹಾಗೂ ಸಮರ್ಥ ರಾಷ್ಟ್ರವಾಗಲು ಸಾಧ್ಯ ಎಂದು ಹೇಳಿದ್ದಾರೆ.
ದೌರ್ಜನ್ಯ ಹಾಗೂ ದಾಳಿಗೆ ಒಳಗಾಗಿರುವ ಹೊರತಾಗಿಯೂ ಹಿಂದೂಗಳು ಶೇ.80ರಷ್ಟು ಇದ್ದೇವೆ, ದೇಶದಲ್ಲಿ ಆಡಳಿತ, ರಾಜಕೀಯ ನಡೆಸುತ್ತಿರುವವರಲ್ಲಿ ಹೆಚ್ಚಿನವರು ಹಿಂದೂಗಳು. ಇಂದಿಗೂ ದೇಶದಲ್ಲಿ ದೇವಸ್ಥಾನಗಳನ್ನು ನಿರ್ಮಿಸಲಾಗುತ್ತದೆ. ನಮ್ಮ ಸಂಪ್ರದಾಯಗಳು ನಮಗೆ ಕಲಿಸಿದ್ದು ಶಾಶ್ವತವಾಗಿದೆ ಎಂದರು.
ಕೆಲವು ದಿನಗಳ ಹಿಂದೆ ಧರ್ಮ ಸಂಸತ್ ಕುರಿತು ಮಾತನಾಡಿದ್ದ ಅವರು, 'ಧರ್ಮ ಸಂಸತ್'ನಲ್ಲಿ ಹೇಳಿದ್ದಾರೆ ಎನ್ನಲಾದ ಹಿಂದುತ್ವದ ಮಾತುಗಳನ್ನು ಒಪ್ಪುವುದಿಲ್ಲ.
'ಧರ್ಮ ಸಂಸತ್'ನಲ್ಲಿ ನೀಡಿರುವ ಹೇಳಿಕೆಗಳು ಹಿಂದೂಗಳ ಮಾತುಗಳಲ್ಲ ಮತ್ತು ಹಿಂದುತ್ವವನ್ನು ಅನುಸರಿಸುವ ಜನರು ಅದನ್ನು ಎಂದಿಗೂ ಒಪ್ಪುವುದಿಲ್ಲ ಎಂದು ಹೇಳಿದ್ದರು.
ಮಾಧ್ಯಮ ಸಮೂಹ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 'ಹಿಂದುತ್ವ ಮತ್ತು ರಾಷ್ಟ್ರೀಯ ಏಕೀಕರಣ' ವಿಷಯದ ಕುರಿತು ಮಾತನಾಡುತ್ತಾ ಅವರು, ನಾನು ಕೋಪದಲ್ಲಿ ಏನಾದರೂ ಹೇಳಿದರೆ ಅದು ಹಿಂದುತ್ವವಲ್ಲ ಎಂದಿದ್ದಾರೆ.
ಧರ್ಮ ಸಂಸತ್ತಿನಲ್ಲಿ ನೀಡಿರುವ ಹೇಳಿಕೆಗಳು ಹಿಂದೂಗಳ ಮಾತುಗಳಲ್ಲ. ನಾನು ಕೋಪದಿಂದ ಏನಾದರೂ ಹೇಳಿದರೆ ಅದು ಹಿಂದುತ್ವವಲ್ಲ. ಇನ್ನು ವೀರ ಸಾವರ್ಕರ್ ಕೂಡ ಹಿಂದೂ ಸಮಾಜ ಒಗ್ಗಟ್ಟಾದರೆ ಭಗವದ್ಗೀತೆಯ ಬಗ್ಗೆ ಮಾತನಾಡುತ್ತೇನೆಯೇ ಹೊರತು ಯಾರನ್ನೂ ಹಾಳು ಮಾಡುವ ಅಥವಾ ಹಾನಿ ಮಾಡುವ ಬಗ್ಗೆ ಅಲ್ಲ ಎಂದು ಹೇಳಿದ್ದರು ಎಂದು ಆರ್ಎಸ್ಎಸ್ ಮುಖ್ಯಸ್ಥರು ಹೇಳಿದ್ದಾರೆ.
ದೇಶವು 'ಹಿಂದೂ ರಾಷ್ಟ್ರ'ವಾಗುವ ಹಾದಿಯನ್ನು ಅನುಸರಿಸುತ್ತಿರುವ ಬಗ್ಗೆ ಮಾತನಾಡಿದ ಅವರು, ನಂಬಿ ಅಥವಾ ಬಿಡಿ, ಇದು ಹಿಂದೂ ರಾಷ್ಟ್ರ. ಸಂಘವು ಜನರನ್ನು ವಿಭಜಿಸುವುದಿಲ್ಲ. ಆದರೆ ಭಿನ್ನಾಭಿಪ್ರಾಯಗಳನ್ನು ಪರಿಹರಿಸುತ್ತದೆ ಎಂದಿದ್ದಾರೆ.
ಕಳೆದ ವರ್ಷ ಡಿಸೆಂಬರ್ನಲ್ಲಿ ಹರಿದ್ವಾರದಲ್ಲಿ ನಡೆದ ಧರ್ಮ ಸಂಸತ್ತಿನಲ್ಲಿ ಮುಸ್ಲಿಮರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಲಾಗಿತ್ತು ಮತ್ತು ರಾಯ್ಪುರದಲ್ಲಿ ಮಹಾತ್ಮ ಗಾಂಧಿಯವರ ಬಗ್ಗೆ ಅಸಭ್ಯ ಹೇಳಿಕೆ ನೀಡಲಾಗಿತ್ತು ಇದಕ್ಕೆ ಮೋಹನ್ ಭಾಗವತ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications