ಕೇರಳದಲ್ಲಿ ಅರಳಿದ ಕಮಲ: ತಿರುವನಂತಪುರದಲ್ಲಿ ಮೊದಲ ಬಿಜೆಪಿ ಮೇಯರ್
ತಿರುವನಂತಪುರ: ಕಮ್ಯುನಿಸ್ಟ್ ಭದ್ರಕೋಟೆ ಆಗಿರುವ ಕೇರಳದಲ್ಲಿ ಬಿಜೆಪಿ ತನ್ನ ದಾಪುಗಾಲು ಇರಿಸಿದೆ. ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಸವಾಲು ಎದುರಾಗಿದೆ ಎನ್ನುವಾಗಲೇ ಕೇರಳದಲ್ಲಿ ಬಿಜೆಪಿ ಮಹತ್ವದ ಮೈಲಿಗಲ್ಲು ಸಾಧಿಸಿದೆ. ವಿ.ವಿ. ರಾಜೇಶ್ ತಿರುವನಂತಪುರಂ ಕಾರ್ಪೊರೇಷನ್ನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕೇರಳದಲ್ಲಿ ಬಿಜೆಪಿ ಶುಕ್ರವಾರ ತನ್ನ ಮೊದಲ ಮೇಯರ್ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಕೇರಳ ರಾಜಧಾನಿಯಲ್ಲಿ ಸ್ಥಳೀಯ ಸಂಸ್ಥೆಗಳ ಆಡಳಿತದಲ್ಲಿ ಸುದೀರ್ಘ 40 ವರ್ಷಗಳ ಎಡಪಂಥೀಯ ಪ್ರಾಬಲ್ಯ ಕೊನೆಗೊಂಡಿದೆ.
ಈಚೆಗೆ ನಡೆದ ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕೇರಳ ರಾಜಧಾನಿ ತಿರುವನಂತಪುರ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಭರ್ಜರಿ ಜಯ ದಾಖಲಿಸಿತ್ತು. 101 ವಾರ್ಡ್ಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 50 ಸ್ಥಾನಗಳಲ್ಲಿ ಜಯ ದಾಖಲಿಸಿತ್ತು. 51 ಮತಗಳೊಂದಿಗೆ ತಿರುವನಂತಪುರಂ ಕಾರ್ಪೊರೇಷನ್ ಕಚೇರಿಯಲ್ಲಿ ನಡೆದ ಮೇಯರ್ ಚುನಾವಣೆಯಲ್ಲಿ ವಿ.ವಿ. ರಾಜೇಶ್ ಅವರು ಗೆಲುವು ದಾಖಲಿಸಿದ್ದಾರೆ. ವಿಝಿಂಜಂನ ಒಂದು ವಾರ್ಡ್ನಲ್ಲಿ ಮತದಾನ ನಡೆಸಲು ಸಾಧ್ಯವಾಗದ ಕಾರಣ 100 ಸ್ಥಾನಗಳಿಗೆ ಚುನಾವಣೆ ನಡೆಸಲಾಗಿತ್ತು.

ಎಲ್ಡಿಎಫ್ ಅಭ್ಯರ್ಥಿ ಪಿ. ಶಿವಾಜಿ 29 ಮತಗಳನ್ನು ಪಡೆದರು. ಯುಡಿಎಫ್ ನಾಮನಿರ್ದೇಶಿತ ಕೆ.ಎಸ್. ಶಬರಿನಾಥನ್ 19 ಮತಗಳನ್ನು ಪಡೆದರು. ಎರಡು ಮತಪತ್ರಗಳು ಅಮಾನ್ಯವೆಂದು ಘೋಷಿಸಲ್ಪಟ್ಟವು ಮತ್ತು ಒಬ್ಬರು ಪಾಲಿಕೆ ಸದಸ್ಯರು ಮತದಾನದಿಂದ ದೂರವುಳಿದರು.
ಕೇರಳದಲ್ಲಿ ಬಿಜೆಪಿಯ ಮೊದಲ ಮೇಯರ್
ಬಿಜೆಪಿ ರಾಜ್ಯ ಕಾರ್ಯದರ್ಶಿ ರಾಜೇಶ್ ಅವರು ಕೇರಳದಲ್ಲಿ ಬಿಜೆಪಿ ಪಕ್ಷದಿಂದ ಮೊದಲ ಮೇಯರ್ ಆಗಿದ್ದಾರೆ. ಇತ್ತೀಚಿನ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 101 ವಾರ್ಡ್ಗಳಲ್ಲಿ 50 ವಾರ್ಡ್ಗಳನ್ನು ಗೆದ್ದ ನಂತರ ಪಕ್ಷವು ತಿರುವನಂತಪುರಂ ಕಾರ್ಪೊರೇಷನ್ನಲ್ಲಿ ಏಕೈಕ ಅತಿದೊಡ್ಡ ಶಕ್ತಿಯಾಗಿ ಹೊರಹೊಮ್ಮಿದೆ. ಇದೀಗ ಒಬ್ಬರು ಪಕ್ಷೇತರ ಅಭ್ಯರ್ಥಿಯೂ ಬಿಜೆಪಿಗೆ ಬೆಂಬಲ ಸೂಚಿಸಿದ್ದಾರೆ. ಕೇರಳ ಬಿಜೆಪಿ ರಾಜ್ಯ ಅಧ್ಯಕ್ಷ ರಾಜೀವ್ ಚಂದ್ರಶೇಖರ್, ಮಾಜಿ ಕೇಂದ್ರ ಸಚಿವ ವಿ ಮುರಳೀಧರನ್ ಮತ್ತು ಮಾಜಿ ರಾಜ್ಯ ಅಧ್ಯಕ್ಷ ಕೆ ಸುರೇಂದ್ರನ್ ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಚುನಾವಣೆಯ ಸಮಯದಲ್ಲಿ ಕಾರ್ಪೊರೇಷನ್ ಕಚೇರಿಯಲ್ಲಿ ಹಾಜರಿದ್ದರು. ರಾಜೇಶ್ ಮೇಯರ್ ಆಗಿ ಪ್ರಮಾಣ ವಚನ ಸ್ವೀಕರಿಸಿದರು.
ಬಿಜೆಪಿ ಈ ಹಿಂದೆ ರಾಜೇಶ್ ಅವರನ್ನು ಮೇಯರ್ ಅಭ್ಯರ್ಥಿಯಾಗಿ ಘೋಷಿಸಿತ್ತು. ಮೂರನೇ ಬಾರಿ ಆಯ್ಕೆಯಾಗಿರುವ ಪಾಲಿಕೆ ಸದಸ್ಯೆ ಮತ್ತು ಮಹಿಳಾ ನಾಯಕಿ ಜಿ ಎಸ್ ಆಶಾ ನಾಥ್ ಅವರನ್ನು ಉಪ ಮೇಯರ್ ಆಗಿ ನಾಮನಿರ್ದೇಶನ ಮಾಡಲಾಗಿತ್ತು.
ಕೇರಳದಲ್ಲಿ ಎಲ್ಡಿಎಫ್ಗೆ ಹಿನ್ನಡೆ
ತಿರುವನಂತಪುರಂನಲ್ಲಿ ಬಿಜೆಪಿಯ ಗೆಲುವು ಸುಮಾರು 40 ವರ್ಷಗಳ ಕಾಲ ಕಾರ್ಪೊರೇಷನ್ ಆಡಳಿತದಲ್ಲಿ ಅಧಿಪತ್ಯ ಸಾಧಿಸಿದ್ದ ಎಲ್ಡಿಎಫ್ಗೆ ದೊಡ್ಡ ಹಿನ್ನಡೆಯಾಗಿದೆ. ಆದಾಗ್ಯೂ, ಎಡಪಕ್ಷಗಳು ಬೇರೆಡೆ ಪ್ರಭಾವವನ್ನು ಉಳಿಸಿಕೊಂಡಿವೆ. ಕೋಝಿಕ್ಕೋಡ್ ಕಾರ್ಪೊರೇಷನ್ನಲ್ಲಿ ಹೆಚ್ಚಿನ ವಾರ್ಡ್ಗಳನ್ನು ಗೆದ್ದಿವೆ. ಕೇರಳದ ಆರು ಪುರಸಭೆ ನಿಗಮಗಳಲ್ಲಿ ಯುಡಿಎಫ್ ನಾಲ್ಕು ಮೇಯರ್ ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಮೇಲುಗೈ ಸಾಧಿಸಿದೆ. ಬಿಜೆಪಿ ಮತ್ತು ಎಲ್ಡಿಎಫ್ ತಲಾ ಒಂದು ಕಾರ್ಪೊರೇಷನ್ ಗೆದ್ದಿದ್ದು, ತಿರುವನಂತಪುರಂ ಬಿಜೆಪಿ ಪಾಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications