ದಯಾ ಮರಣದ ಬಗ್ಗೆ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು
ನವದೆಹಲಿ, ಮಾರ್ಚ್ 09 : 'ಜನರಿಗೆ ಗೌರವಪೂರ್ವಕವಾಗಿ ಸಾವನ್ನಪ್ಪುವ ಹಕ್ಕಿದೆ' ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ದಯಾ ಮರಣಕ್ಕೆ ಸಂಬಂಧಿಸಿದಂತೆ ನಿಯಮಾವಳಿಗಳನ್ನು ರಚನೆ ಮಾಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಶುಕ್ರವಾರ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಎ.ಎಕೆ.ಸಿಕ್ರಿ, ಎ.ಎಮ್.ಖಾನ್ ವಿಲ್ಕರ್, ಡಿ.ವೈ,ಚಂದ್ರಚೂಡ್ ಮತ್ತು ಅಶೋಕ್ ಭೂಷಣ್ ಅವರ ನ್ಯಾಯಪೀಠ ದಯಾ ಮರಣದ ಕುರಿತು ತೀರ್ಪು ನೀಡಿದೆ.
ಮರಣಶಯ್ಯೆಯಲ್ಲಿರುವ ವ್ಯಕ್ತಿಗೆ ತಾನು ಯಾವಾಗ ಕೊನೆಯುಸಿರುಎಳೆಯಬೇಕು ಎಂದು ನಿರ್ಧರಿಸುವ ಹಕ್ಕಿದೆ ಎಂದು ಕೋರ್ಟ್ ಹೇಳಿದೆ. ಐವರು ನ್ಯಾಯಮೂರ್ತಿಗಳು ಸಾಂವಿಧಾನಿಕ ಪೀಠ ಈ ಕುರಿತು ಶುಕ್ರವಾರ ತೀರ್ಪು ನೀಡಿದೆ.

ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಸಂಬಂಧಿಕರು, ಸ್ನೇಹಿತರು ದಯಾಮರಣವನ್ನು ಕೋರಿ ಹೈಕೋರ್ಟ್ ಮೆಟ್ಟಿಲೇರಿದರೆ ಕೋರ್ಟ್ ದಯಾಮರಣವನ್ನು ನೀಡಲು ವೈದ್ಯಕೀಯ ತಂಡವನ್ನು ರಚನೆ ಮಾಡಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ. ಈ ಮೂಲಕ ಪರೋಕ್ಷ ದಯಾ ಮರಣಕ್ಕೆ ಒಪ್ಪಿಗೆ ನೀಡಿದೆ.
A five-judge Constitution bench of the Supreme Court, headed by Chief Justice of India Dipak Misra passed the order allowing passive #Euthanasia with guidelines
— ANI (@ANI) March 9, 2018
ದಯಾಮರಣದ ಪರ ಮತ್ತು ವಿರುದ್ಧವಾಗಿ ದೇಶದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿದ್ದವು. ಈ ಕುರಿತು ಸುಪ್ರೀಂಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಇಂದು ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ.
ಅರುಣಾ ಶಾನಭಾಗ ಅವರಿಗೆ ದಯಾ ಮರಣ ಸಿಕ್ಕಿರಲಿಲ್ಲ : ಸುಮಾರು 42 ವರ್ಷಗಳಿಂದ ಮರಣಶಯ್ಯೆಯಲ್ಲಿದ್ದ ಕನ್ನಡತಿ ನರ್ಸ್ ಅರುಣಾ ರಾಮಚಂದ್ರ ಶಾನಭಾಗ ಅವರಿಗೆ ದಯಾ ಮರಣ ಸಿಕ್ಕಿರಲಿಲ್ಲ.
2015ರ ಮೇ ತಿಂಗಳಿನಲ್ಲಿ ಅವರು ಮೃತಪಟ್ಟಿದ್ದರು. ಅತ್ಯಾಚಾರಕ್ಕೊಳಗಾಗಿದ್ದ ಅರುಣಾಳ ಮಿದುಳಿನಲ್ಲಿ ರಕ್ತಸ್ರಾವವಾಗಿ ದೃಷ್ಟಿ ಕುಂಠಿತವಾಗಿದ್ದಲ್ಲದೆ, ಮಾತನಾಡುವ ಶಕ್ತಿ ಹಾಗೂ ಪರಿಸರದ ಬಗ್ಗೆ ಸಂವೇದನೆಯನ್ನೂ ಘಾಸಿಗೊಳಿಸಿತು. ಆಸ್ಪತ್ರೆಯಲ್ಲಿ ವೈದ್ಯರು ಮತ್ತು ದಾದಿಯರ ಸಹಾಯದಿಂದ ಸುಮಾರು 40 ಕ್ಕೂ ಅಧಿಕ ವರ್ಷ ಕೋಮಾ ಅವಸ್ಥೆಯಲ್ಲಿ ಕಾಲ ದೂಡಬೇಕಾಯಿತು.
ಅರುಣಾ ಶಾನಭಾಗ ಅವರಿಗೆ ದಯಾಮರಣ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿತ್ತು. ಆದ್ದರಿಂದ, ದಯಾಮರಣ ಸಿಗದೇ ಅವರು ನಕರ ಸದೃಶ ಜೀವನ ನಡೆಸಬೇಕಾಯಿತು.
-
ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ CSR ರಾಷ್ಟ್ರೀಯ ಸಮಾವೇಶ: ವಿಕಸಿತ ಭಾರತ ಚರ್ಚೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
War Updates: ಇರಾನ್ಗೆ ಟ್ರಂಪ್ ವಾರ್ನಿಂಗ್: ತೈಲ ಮಾರ್ಗ ಬಂದ್ ಮಾಡಿದರೆ ದೇಶವೇ ಸರ್ವನಾಶ, ಇಂದಿನ ಪ್ರಮುಖಾಂಶಗಳು -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ












Click it and Unblock the Notifications