ದಯಾ ಮರಣದ ಬಗ್ಗೆ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು
ನವದೆಹಲಿ, ಮಾರ್ಚ್ 09 : 'ಜನರಿಗೆ ಗೌರವಪೂರ್ವಕವಾಗಿ ಸಾವನ್ನಪ್ಪುವ ಹಕ್ಕಿದೆ' ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ದಯಾ ಮರಣಕ್ಕೆ ಸಂಬಂಧಿಸಿದಂತೆ ನಿಯಮಾವಳಿಗಳನ್ನು ರಚನೆ ಮಾಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಶುಕ್ರವಾರ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಎ.ಎಕೆ.ಸಿಕ್ರಿ, ಎ.ಎಮ್.ಖಾನ್ ವಿಲ್ಕರ್, ಡಿ.ವೈ,ಚಂದ್ರಚೂಡ್ ಮತ್ತು ಅಶೋಕ್ ಭೂಷಣ್ ಅವರ ನ್ಯಾಯಪೀಠ ದಯಾ ಮರಣದ ಕುರಿತು ತೀರ್ಪು ನೀಡಿದೆ.
ಮರಣಶಯ್ಯೆಯಲ್ಲಿರುವ ವ್ಯಕ್ತಿಗೆ ತಾನು ಯಾವಾಗ ಕೊನೆಯುಸಿರುಎಳೆಯಬೇಕು ಎಂದು ನಿರ್ಧರಿಸುವ ಹಕ್ಕಿದೆ ಎಂದು ಕೋರ್ಟ್ ಹೇಳಿದೆ. ಐವರು ನ್ಯಾಯಮೂರ್ತಿಗಳು ಸಾಂವಿಧಾನಿಕ ಪೀಠ ಈ ಕುರಿತು ಶುಕ್ರವಾರ ತೀರ್ಪು ನೀಡಿದೆ.

ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಸಂಬಂಧಿಕರು, ಸ್ನೇಹಿತರು ದಯಾಮರಣವನ್ನು ಕೋರಿ ಹೈಕೋರ್ಟ್ ಮೆಟ್ಟಿಲೇರಿದರೆ ಕೋರ್ಟ್ ದಯಾಮರಣವನ್ನು ನೀಡಲು ವೈದ್ಯಕೀಯ ತಂಡವನ್ನು ರಚನೆ ಮಾಡಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ. ಈ ಮೂಲಕ ಪರೋಕ್ಷ ದಯಾ ಮರಣಕ್ಕೆ ಒಪ್ಪಿಗೆ ನೀಡಿದೆ.
A five-judge Constitution bench of the Supreme Court, headed by Chief Justice of India Dipak Misra passed the order allowing passive #Euthanasia with guidelines
— ANI (@ANI) March 9, 2018
ದಯಾಮರಣದ ಪರ ಮತ್ತು ವಿರುದ್ಧವಾಗಿ ದೇಶದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿದ್ದವು. ಈ ಕುರಿತು ಸುಪ್ರೀಂಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಇಂದು ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ.
ಅರುಣಾ ಶಾನಭಾಗ ಅವರಿಗೆ ದಯಾ ಮರಣ ಸಿಕ್ಕಿರಲಿಲ್ಲ : ಸುಮಾರು 42 ವರ್ಷಗಳಿಂದ ಮರಣಶಯ್ಯೆಯಲ್ಲಿದ್ದ ಕನ್ನಡತಿ ನರ್ಸ್ ಅರುಣಾ ರಾಮಚಂದ್ರ ಶಾನಭಾಗ ಅವರಿಗೆ ದಯಾ ಮರಣ ಸಿಕ್ಕಿರಲಿಲ್ಲ.
2015ರ ಮೇ ತಿಂಗಳಿನಲ್ಲಿ ಅವರು ಮೃತಪಟ್ಟಿದ್ದರು. ಅತ್ಯಾಚಾರಕ್ಕೊಳಗಾಗಿದ್ದ ಅರುಣಾಳ ಮಿದುಳಿನಲ್ಲಿ ರಕ್ತಸ್ರಾವವಾಗಿ ದೃಷ್ಟಿ ಕುಂಠಿತವಾಗಿದ್ದಲ್ಲದೆ, ಮಾತನಾಡುವ ಶಕ್ತಿ ಹಾಗೂ ಪರಿಸರದ ಬಗ್ಗೆ ಸಂವೇದನೆಯನ್ನೂ ಘಾಸಿಗೊಳಿಸಿತು. ಆಸ್ಪತ್ರೆಯಲ್ಲಿ ವೈದ್ಯರು ಮತ್ತು ದಾದಿಯರ ಸಹಾಯದಿಂದ ಸುಮಾರು 40 ಕ್ಕೂ ಅಧಿಕ ವರ್ಷ ಕೋಮಾ ಅವಸ್ಥೆಯಲ್ಲಿ ಕಾಲ ದೂಡಬೇಕಾಯಿತು.
ಅರುಣಾ ಶಾನಭಾಗ ಅವರಿಗೆ ದಯಾಮರಣ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿತ್ತು. ಆದ್ದರಿಂದ, ದಯಾಮರಣ ಸಿಗದೇ ಅವರು ನಕರ ಸದೃಶ ಜೀವನ ನಡೆಸಬೇಕಾಯಿತು.
-
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಯುಪಿಎಸ್ಸಿ 2025 ಫಲಿತಾಂಶ ಪ್ರಕಟ: ಪಾಸಾದವರು 958 ಆಕಾಂಕ್ಷಿಗಳು, ಅರ್ಜಿ ಹಾಕಿದ್ದವರು 10 ಲಕ್ಷ ಮಂದಿ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna











Click it and Unblock the Notifications