Hit And Run Case: ಮಲಗಿದ್ದವನ ಮೇಲೆ ಹರಿದ ಕಾರು- ಸಂಸದರ ಪುತ್ರಿ ಅಂದರ್ ಬಾಹರ್
ಚೆನ್ನೈ ಜೂನ್ 19: ಫುಟ್ಪಾತ್ ಮೇಲೆ ಮಲಗಿದ್ದವನ ಮೇಲೆ ಸಂಸದನ ಪುತ್ರಿ ಕಾರು ಹರಿದ ಆರೋಪ ಕೇಳಿ ಬಂದಿದೆ. ವ್ಯಕ್ತಿ ಮೇಲೆ ಕಾರು ಹರಿದು ಬಳಿಕ ಸಂಸದರ ಪುತ್ರಿ ಅಲ್ಲಿಂದ ಪರಾರಿಯಾಗಿದ್ದಾರೆ.
ಸೋಮವಾರ ಸಂಜೆ ಚೆನ್ನೈನಲ್ಲಿ ರಾಜ್ಯಸಭಾ ಸಂಸದರೊಬ್ಬರ ಪುತ್ರಿ ತನ್ನ ಐಷಾರಾಮಿ ಬಿಎಂಡಬ್ಲ್ಯು ಕಾರಿನಲ್ಲಿ ತೆರಳುತ್ತಿದ್ದಾಗ ವ್ಯಕ್ತಿಯ ಮೇಲೆ ತನ್ನ ಕಾರು ಹರಿಸಿದ್ದಾಳೆ ಎಂಬ ಆರೋಪ ಕೇಳಿ ಬರುತ್ತಿದೆ.

ಇದರಿಂದ ಸೂರ್ಯ ಎಂಬ 21 ವರ್ಷದ ಪೇಂಟರ್ ಗಂಭೀರವಾಗಿ ಗಾಯಗೊಂಡಿದ್ದು, ನಂತರ ಆತ ಸಾವನ್ನಪ್ಪಿದ್ದಾನೆ ಎಂದು ಮಾಧ್ಯಮ ವರದಿಗಳು ಹೇಳಿವೆ. ಆರೋಪಿಯನ್ನು ಚೆನ್ನೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಆದರೆ ಶೀಘ್ರದಲ್ಲೇ ಅವರು ಜಾಮೀನು ಪಡೆದು ವಾಪಸ್ ಮನೆಗೆ ಮರಳಿದ್ದಾರೆ. ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಹೌದು... ಹಿಟ್ ಅಂಡ್ ರನ್ ಪ್ರಕರಣದಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್ಸಿಪಿ) ರಾಜ್ಯಸಭಾ ಸಂಸದ ಬಿಡಾ ಮಸ್ತಾನ್ ರಾವ್ ಅವರ ಪುತ್ರಿ ಮಾಧುರಿ ಅವರನ್ನು ಬಂಧಿಸಲಾಗಿತ್ತು. ಬಳಿಕ ಅವರನ್ನು ಜಾಮೀನಿನ ಮೇಲೆ ಬಿಡಿಸಲಾಗಿದೆ.
ಏನಿದು ಪ್ರಕರಣ?
ಸೋಮವಾರ ಸಂಜೆ ವೇಗವಾಗಿ ಬಂದ ಬಿಎಂಡಬ್ಲ್ಯು ಕಾರು ಫುಟ್ಪಾತ್ನಲ್ಲಿ ಮಲಗಿದ್ದ ಸೂರ್ಯ ಅವರ ಮೇಲೆ ಹರಿದಿದೆ. ತೀವ್ರ ಗಾಯಗೊಂಡಿದ್ದ ವ್ಯಕ್ತಿಯನ್ನು ತಕ್ಷಣ ಆಸ್ಪತ್ರೆಗ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಘಟನೆ ನಡೆದ ತಕ್ಷಣ ಆರೋಪಿ ಮಹಿಳಾ ಚಾಲಕಿ ಮತ್ತು ಆಕೆಯ ಜೊತೆಗಿದ್ದ ಮತ್ತೊಬ್ಬರು ಸ್ಥಳದಿಂದ ಪರಾರಿಯಾಗಿದ್ದಾರೆ.
ಕಾರು ಮಾಲೀಕರಿಗೆ ಸಮನ್ಸ್
ಮಾಹಿತಿ ಪ್ರಕಾರ ಮೃತರನ್ನು ಸೂರ್ಯ ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಬೆಸೆಂಟ್ನಗರದ ಫುಟ್ಪಾತ್ನಲ್ಲಿ ಮಲಗಿದ್ದ ವೇಳೆ ಐಷಾರಾಮಿ ಕಾರೊಂದು ಢಿಕ್ಕಿ ಹೊಡೆದು ಸೂರ್ಯ ಸಾವನ್ನಪ್ಪಿದ್ದಾರೆ. ಅಡ್ಯಾರ್ ಟ್ರಾಫಿಕ್ ಇನ್ವೆಸ್ಟಿಗೇಶನ್ ವಿಂಗ್ ಪೊಲೀಸರು ಐಪಿಸಿ ಸೆಕ್ಷನ್ 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕಾರು ಮಾಲೀಕರಿಗೆ ಸಮನ್ಸ್ ಜಾರಿ ಮಾಡಿದ್ದಾರೆ.
ಠಾಣೆ ಮುಂದೆ ಪ್ರತಿಭಟನೆ
ಘಟನೆ ನಡೆದ ಬಳಿಕ ಮಾಧುರಿ ತಕ್ಷಣವೇ ಸ್ಥಳದಿಂದ ಪರಾರಿಯಾಗಿದ್ದಾರೆ. ಆದರೆ ಅವರ ಸ್ನೇಹಿತೆ ಕಾರಿನಿಂದ ಕೆಳಗಿಳಿದು ಅಪಘಾತದ ನಂತರ ನೆರೆದಿದ್ದ ಜನರೊಂದಿಗೆ ಜಗಳವಾಡಲು ಪ್ರಾರಂಭಿಸಿದರು. ಸ್ವಲ್ಪ ಸಮಯದ ನಂತರ ಆಕೆಯೂ ಅಲ್ಲಿಂದ ಪರಾರಿಯಾಗಿದ್ದಾರೆ. ಗುಂಪಿನಲ್ಲಿದ್ದ ಕೆಲವರು ಸೂರ್ಯ ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಲ್ಲಿ ಅವರು ಸಾವನ್ನಪ್ಪಿದ್ದಾರೆ.
ಸೂರ್ಯನ ಮದುವೆಯಾಗಿ ಎಂಟು ತಿಂಗಳು ಮಾತ್ರ ಕಳೆದಿತ್ತು. ಆತನ ಸಂಬಂಧಿಕರು ಮತ್ತು ನೆರೆಹೊರೆಯವರು ಜೆ-5 ಶಾಸ್ತ್ರಿನಗರ ಪೊಲೀಸ್ ಠಾಣೆಯಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಕ್ಕಾಗಿ ಒತ್ತಾಯಿಸಿದರು.
ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ವೀಕ್ಷಿಸಿದ ಪೊಲೀಸರು, ಕಾರು ಬಿಎಂಆರ್ (ಬಿಡಾ ಮಸ್ತಾನ್ ರಾವ್) ಗ್ರೂಪ್ಗೆ ಸೇರಿದ್ದು ಮತ್ತು ಪುದುಚೇರಿಯಲ್ಲಿ ನೋಂದಣಿಯಾಗಿದೆ ಎಂದು ಕಂಡುಹಿಡಿದರು. ಕೊನೆಗೆ ಪ್ರಕರಣದಲ್ಲಿ ಮಾಧುರಿಯನ್ನು ಬಂಧಿಸಲಾಗಿತ್ತು, ಆದರೆ ಆಕೆಗೆ ಪೊಲೀಸ್ ಠಾಣೆಯಿಂದಲೇ ಜಾಮೀನು ಸಿಕ್ಕಿದೆ. ಇದರಿಂದ ಅವರು ಹೊರ ಬಂದಿದ್ದಾರೆ.
ಭಾರೀ ಸುದ್ದಿಯಾಗಿದ್ದ ಪುಣೆ ಪ್ರಕರಣ
ಮೇ 18ರಂದು ಪುಣೆಯ ಕಲ್ಯಾಣಿನಗರ ಪ್ರದೇಶದಲ್ಲಿ ಅಪ್ರಾಪ್ತ ಬಾಲಕನೊಬ್ಬ ತನ್ನ ಕಾರಿನಿಂದ ಬೈಕ್ಗೆ ಡಿಕ್ಕಿ ಹೊಡೆದಿದ್ದ. ಅಪಘಾತದಲ್ಲಿ ಇಬ್ಬರು ಯುವ ಸಾಫ್ಟ್ವೇರ್ ವೃತ್ತಿಪರರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದವನು ಎಸ್ಕೇಪ್ ಆಗಿದ್ದು ಅವರ ತಂದೆ ಮತ್ತು ಅಜ್ಜನನ್ನು ಬಂಧಿಸಲಾಗಿದೆ. ಈ ಪ್ರಕರಣ ಇಡೀ ದೇಶದಲ್ಲಿ ಸಂಚಲನ ಮೂಡಿಸಿತ್ತು.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications