Hit And Run Case: ಮಲಗಿದ್ದವನ ಮೇಲೆ ಹರಿದ ಕಾರು- ಸಂಸದರ ಪುತ್ರಿ ಅಂದರ್ ಬಾಹರ್
ಚೆನ್ನೈ ಜೂನ್ 19: ಫುಟ್ಪಾತ್ ಮೇಲೆ ಮಲಗಿದ್ದವನ ಮೇಲೆ ಸಂಸದನ ಪುತ್ರಿ ಕಾರು ಹರಿದ ಆರೋಪ ಕೇಳಿ ಬಂದಿದೆ. ವ್ಯಕ್ತಿ ಮೇಲೆ ಕಾರು ಹರಿದು ಬಳಿಕ ಸಂಸದರ ಪುತ್ರಿ ಅಲ್ಲಿಂದ ಪರಾರಿಯಾಗಿದ್ದಾರೆ.
ಸೋಮವಾರ ಸಂಜೆ ಚೆನ್ನೈನಲ್ಲಿ ರಾಜ್ಯಸಭಾ ಸಂಸದರೊಬ್ಬರ ಪುತ್ರಿ ತನ್ನ ಐಷಾರಾಮಿ ಬಿಎಂಡಬ್ಲ್ಯು ಕಾರಿನಲ್ಲಿ ತೆರಳುತ್ತಿದ್ದಾಗ ವ್ಯಕ್ತಿಯ ಮೇಲೆ ತನ್ನ ಕಾರು ಹರಿಸಿದ್ದಾಳೆ ಎಂಬ ಆರೋಪ ಕೇಳಿ ಬರುತ್ತಿದೆ.

ಇದರಿಂದ ಸೂರ್ಯ ಎಂಬ 21 ವರ್ಷದ ಪೇಂಟರ್ ಗಂಭೀರವಾಗಿ ಗಾಯಗೊಂಡಿದ್ದು, ನಂತರ ಆತ ಸಾವನ್ನಪ್ಪಿದ್ದಾನೆ ಎಂದು ಮಾಧ್ಯಮ ವರದಿಗಳು ಹೇಳಿವೆ. ಆರೋಪಿಯನ್ನು ಚೆನ್ನೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಆದರೆ ಶೀಘ್ರದಲ್ಲೇ ಅವರು ಜಾಮೀನು ಪಡೆದು ವಾಪಸ್ ಮನೆಗೆ ಮರಳಿದ್ದಾರೆ. ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಹೌದು... ಹಿಟ್ ಅಂಡ್ ರನ್ ಪ್ರಕರಣದಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್ಸಿಪಿ) ರಾಜ್ಯಸಭಾ ಸಂಸದ ಬಿಡಾ ಮಸ್ತಾನ್ ರಾವ್ ಅವರ ಪುತ್ರಿ ಮಾಧುರಿ ಅವರನ್ನು ಬಂಧಿಸಲಾಗಿತ್ತು. ಬಳಿಕ ಅವರನ್ನು ಜಾಮೀನಿನ ಮೇಲೆ ಬಿಡಿಸಲಾಗಿದೆ.
ಏನಿದು ಪ್ರಕರಣ?
ಸೋಮವಾರ ಸಂಜೆ ವೇಗವಾಗಿ ಬಂದ ಬಿಎಂಡಬ್ಲ್ಯು ಕಾರು ಫುಟ್ಪಾತ್ನಲ್ಲಿ ಮಲಗಿದ್ದ ಸೂರ್ಯ ಅವರ ಮೇಲೆ ಹರಿದಿದೆ. ತೀವ್ರ ಗಾಯಗೊಂಡಿದ್ದ ವ್ಯಕ್ತಿಯನ್ನು ತಕ್ಷಣ ಆಸ್ಪತ್ರೆಗ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಘಟನೆ ನಡೆದ ತಕ್ಷಣ ಆರೋಪಿ ಮಹಿಳಾ ಚಾಲಕಿ ಮತ್ತು ಆಕೆಯ ಜೊತೆಗಿದ್ದ ಮತ್ತೊಬ್ಬರು ಸ್ಥಳದಿಂದ ಪರಾರಿಯಾಗಿದ್ದಾರೆ.
ಕಾರು ಮಾಲೀಕರಿಗೆ ಸಮನ್ಸ್
ಮಾಹಿತಿ ಪ್ರಕಾರ ಮೃತರನ್ನು ಸೂರ್ಯ ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಬೆಸೆಂಟ್ನಗರದ ಫುಟ್ಪಾತ್ನಲ್ಲಿ ಮಲಗಿದ್ದ ವೇಳೆ ಐಷಾರಾಮಿ ಕಾರೊಂದು ಢಿಕ್ಕಿ ಹೊಡೆದು ಸೂರ್ಯ ಸಾವನ್ನಪ್ಪಿದ್ದಾರೆ. ಅಡ್ಯಾರ್ ಟ್ರಾಫಿಕ್ ಇನ್ವೆಸ್ಟಿಗೇಶನ್ ವಿಂಗ್ ಪೊಲೀಸರು ಐಪಿಸಿ ಸೆಕ್ಷನ್ 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕಾರು ಮಾಲೀಕರಿಗೆ ಸಮನ್ಸ್ ಜಾರಿ ಮಾಡಿದ್ದಾರೆ.
ಠಾಣೆ ಮುಂದೆ ಪ್ರತಿಭಟನೆ
ಘಟನೆ ನಡೆದ ಬಳಿಕ ಮಾಧುರಿ ತಕ್ಷಣವೇ ಸ್ಥಳದಿಂದ ಪರಾರಿಯಾಗಿದ್ದಾರೆ. ಆದರೆ ಅವರ ಸ್ನೇಹಿತೆ ಕಾರಿನಿಂದ ಕೆಳಗಿಳಿದು ಅಪಘಾತದ ನಂತರ ನೆರೆದಿದ್ದ ಜನರೊಂದಿಗೆ ಜಗಳವಾಡಲು ಪ್ರಾರಂಭಿಸಿದರು. ಸ್ವಲ್ಪ ಸಮಯದ ನಂತರ ಆಕೆಯೂ ಅಲ್ಲಿಂದ ಪರಾರಿಯಾಗಿದ್ದಾರೆ. ಗುಂಪಿನಲ್ಲಿದ್ದ ಕೆಲವರು ಸೂರ್ಯ ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಲ್ಲಿ ಅವರು ಸಾವನ್ನಪ್ಪಿದ್ದಾರೆ.
ಸೂರ್ಯನ ಮದುವೆಯಾಗಿ ಎಂಟು ತಿಂಗಳು ಮಾತ್ರ ಕಳೆದಿತ್ತು. ಆತನ ಸಂಬಂಧಿಕರು ಮತ್ತು ನೆರೆಹೊರೆಯವರು ಜೆ-5 ಶಾಸ್ತ್ರಿನಗರ ಪೊಲೀಸ್ ಠಾಣೆಯಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಕ್ಕಾಗಿ ಒತ್ತಾಯಿಸಿದರು.
ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ವೀಕ್ಷಿಸಿದ ಪೊಲೀಸರು, ಕಾರು ಬಿಎಂಆರ್ (ಬಿಡಾ ಮಸ್ತಾನ್ ರಾವ್) ಗ್ರೂಪ್ಗೆ ಸೇರಿದ್ದು ಮತ್ತು ಪುದುಚೇರಿಯಲ್ಲಿ ನೋಂದಣಿಯಾಗಿದೆ ಎಂದು ಕಂಡುಹಿಡಿದರು. ಕೊನೆಗೆ ಪ್ರಕರಣದಲ್ಲಿ ಮಾಧುರಿಯನ್ನು ಬಂಧಿಸಲಾಗಿತ್ತು, ಆದರೆ ಆಕೆಗೆ ಪೊಲೀಸ್ ಠಾಣೆಯಿಂದಲೇ ಜಾಮೀನು ಸಿಕ್ಕಿದೆ. ಇದರಿಂದ ಅವರು ಹೊರ ಬಂದಿದ್ದಾರೆ.
ಭಾರೀ ಸುದ್ದಿಯಾಗಿದ್ದ ಪುಣೆ ಪ್ರಕರಣ
ಮೇ 18ರಂದು ಪುಣೆಯ ಕಲ್ಯಾಣಿನಗರ ಪ್ರದೇಶದಲ್ಲಿ ಅಪ್ರಾಪ್ತ ಬಾಲಕನೊಬ್ಬ ತನ್ನ ಕಾರಿನಿಂದ ಬೈಕ್ಗೆ ಡಿಕ್ಕಿ ಹೊಡೆದಿದ್ದ. ಅಪಘಾತದಲ್ಲಿ ಇಬ್ಬರು ಯುವ ಸಾಫ್ಟ್ವೇರ್ ವೃತ್ತಿಪರರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದವನು ಎಸ್ಕೇಪ್ ಆಗಿದ್ದು ಅವರ ತಂದೆ ಮತ್ತು ಅಜ್ಜನನ್ನು ಬಂಧಿಸಲಾಗಿದೆ. ಈ ಪ್ರಕರಣ ಇಡೀ ದೇಶದಲ್ಲಿ ಸಂಚಲನ ಮೂಡಿಸಿತ್ತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications