Hit and Run Case: ಸ್ಕೂಟರ್ಗೆ ಡಿಕ್ಕಿ ಹೊಡೆದು ಬಾಲಕನನ್ನು ಎಳೆದೊಯ್ದ ಟ್ರಕ್- ವಿಡಿಯೋ ವೈರಲ್!
ಟ್ರಕ್ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಎಳೆದೊಯ್ದ ಘಟನೆ ಉತ್ತರಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಅಜ್ಜ ಮೊಮ್ಮಗ ಸಾವನ್ನಪ್ಪಿದ್ದಾರೆ.
ಲಕ್ನೋ ಫೆಬ್ರವರಿ 28: ದೆಹಲಿಯ ಹಿಟ್ ಆಂಡ್ ರನ್ ಪ್ರಕರಣ ನಡೆದು ಎರಡು ತಿಂಗಳಾಗಿದೆ. ಅದಾದ ಬಳಿಕ ಬೆಂಗಳೂರಿನಲ್ಲೂ ಹಿಟ್ ಆಂಡ್ ರನ್ ಪ್ರಕರಣದ ವಿಡಿಯೋ ಭಾರೀ ವೈರಲ್ ಆಗಿತ್ತು. ಸದ್ಯ ಅಂತದ್ದೇ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದು ನಿಜಕ್ಕೂ ಭಯಹುಟ್ಟಿಸುವಂತಿದೆ. ಟ್ರಕ್ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಎಳೆದೊಯ್ದ ಘಟನೆ ಉತ್ತರಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ನಡೆದಿದೆ.
ಭಾನುವಾರ ಸ್ಕೂಟಿಗೆ ಅತಿವೇಗದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ವೃದ್ಧ ಮತ್ತು ಅವರ ಆರು ವರ್ಷದ ಮೊಮ್ಮಗ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಸದರ್ ಕೊತ್ವಾಲಿ ಪ್ರದೇಶದಲ್ಲಿ ಕಾನ್ಪುರ-ಸಾಗರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆತನ ಮೊಮ್ಮಗನನ್ನು ಸ್ಕೂಟರ್ ಜೊತೆಗೆ ಟ್ರಕ್ ಎಳೆದೊಯ್ದಿದೆ. ಟ್ರಕ್ ಡಿಕ್ಕಿ ಹೊಡೆದ ರಬಸಕ್ಕೆ ಅಜ್ಜ ರಸ್ತೆ ಬದಿ ಬಿದ್ದಿದ್ದಾರೆ. ಆದರೆ ಮೊಮ್ಮಗ ಮಾತ್ರ ಸ್ಕೂಟರ್ ಜೊತೆಗೆ ಇದ್ದ ಎನ್ನಲಾಗಿದೆ. ಆತನನ್ನು ಸ್ಕೂಟರ್ ಜೊತೆಗೆ ಎಳೆದೊಯ್ಯಲಾಗಿದೆ ಎಂದು ಹೇಳಲಾಗುತ್ತಿದೆ.

ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಟ್ರಕ್ ಸ್ಕೂಟಿಯನ್ನು ಎಳೆದುಕೊಂಡು ಹೋಗುತ್ತಿರುವಾಗ ಬಾಲಕ ಅದರ ಕೆಳಗೆ ಸಿಲುಕಿಕೊಂಡಿದ್ದಾನೆ. ಅನೇಕ ದಾರಿಹೋಕರು ಮತ್ತು ಪ್ರಯಾಣಿಕರು ಟ್ರಕ್ ಅನ್ನು ನಿಲ್ಲಿಸುವಂತೆ ಚಾಲಕನಿಗೆ ಕೂಗಿದರು. ಆದರೆ ಚಾಲಕ ಯಾಔಉದಕ್ಕೂ ಕಿವಿ ಕೊಡದೆ ವಾಹನ ಚಲಾಯಿಸಿದ್ದಾನೆ.
A man and his 6-year-old grandson were mowed to death after a #truck hit them in #Mahoba.
— Siraj Noorani (@sirajnoorani) February 26, 2023
As per reports, the duo was riding a scooty when the truck rammed into them. The 6-year-old was dragged for 2 kms.#Uttarpradesh #india #accident #viral #viralvideo pic.twitter.com/6eynaSoCui
ಆರೋಪಿ ಚಾಲಕ ಹಲವಾರು ಕಿಲೋಮೀಟರ್ಗಳ ನಂತರ ಬ್ರೇಕ್ ಹಾಕಿದನು, ಆದರೆ ಅಲ್ಲಿಯವರೆಗೆ ಮಗು ಸಾವನ್ನಪ್ಪಿತ್ತು. ಪೊಲೀಸರು ಟ್ರಕ್ ಚಾಲಕ ಮತ್ತು ಸಹಾಯಕನನ್ನು ಬಂಧಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮೃತರನ್ನು ನಿವೃತ್ತ ಶಿಕ್ಷಕ ಉದಿತ್ ನಾರಾಯಣ ಚಾನ್ಸೋರಿಯಾ ಮತ್ತು ಅವರ ಆರು ವರ್ಷದ ಮೊಮ್ಮಗ ಸಾತ್ವಿಕ್ ಎಂದು ಗುರುತಿಸಲಾಗಿದೆ. ಟ್ರಕ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications