10 ವರ್ಷದಲ್ಲಿ 17 ಲಕ್ಷಕ್ಕೂ ಅಧಿಕ ಜನರಿಗೆ HIV: ಆಂಧ್ರಕ್ಕೆ ಅಗ್ರಸ್ಥಾನ
ನವದೆಹಲಿ, ಏಪ್ರಿಲ್ 24: ಕಳೆದ 10 ವರ್ಷಗಳಲ್ಲಿ ಭಾರತದಲ್ಲಿ 17 ಲಕ್ಷಕ್ಕೂ ಹೆಚ್ಚು ಜನರು ಎಚ್ಐವಿ ಸೋಂಕಿಗೆ ಒಳಗಾಗಿದ್ದಾರೆ ಎಂದು ಆರ್ಟಿಐ ಪ್ರಶ್ನೆಗೆ ಉತ್ತರಿಸಿದ ಸರ್ಕಾರ ಹೇಳಿದೆ. ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ (NACO) ಒದಗಿಸಿದ ಡೇಟಾವನ್ನು ಸರ್ಕಾರ ಉಲ್ಲೇಖಿಸಿದೆ.
ಸೋಂಕಿನ ಮುಖ್ಯ ಕಾರಣ ಅಸುರಕ್ಷಿತ ಲೈಂಗಿಕತೆ ಎಂದು ಕಂಡುಬಂದಿದೆ. ಮಧ್ಯಪ್ರದೇಶ ಮೂಲದ ಸಾಮಾಜಿಕ ಕಾರ್ಯಕರ್ತ ಚಂದ್ರಶೇಖರ್ ಗೌರ್ ಅವರು ಆರ್ಟಿಐ ಅರ್ಜಿ ಸಲ್ಲಿಕೆ ಮಾಡಿದ್ದು, ಈ ವೇಳೆ ಈ ಮಾಹಿತಿ ಹೊರಬಿದ್ದಿದೆ.
ಭಾರತದಲ್ಲಿ 2011-2021 ರ ನಡುವೆ ಅಸುರಕ್ಷಿತ ಲೈಂಗಿಕತೆಯಿಂದಾಗಿ 17,08,777 ಜನರು ಎಚ್ಐವಿ ಸೋಂಕಿಗೆ ಒಳಗಾಗಿದ್ದಾರೆ ಎಂದು ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ (NACO) ಒದಗಿಸಿದ ಮಾಹಿತಿಯು ಬಹಿರಂಗಪಡಿಸಿದೆ.

ಕಳೆದ ಹತ್ತು ವರ್ಷದಲ್ಲಿ ಎಚ್ಐವಿ ಪ್ರಕರಣ ಇಳಿಕೆ
ಪ್ರಮುಖವಾಗಿ, ಕಳೆದ 10 ವರ್ಷಗಳಲ್ಲಿ ದೇಶದಲ್ಲಿ ಎಚ್ಐವಿ ಪ್ರಕರಣವು ಗಮನಾರ್ಹವಾಗಿ ಕಡಿಮೆಯಾಗಿದೆ ಎಂದು ಡೇಟಾ ಸೂಚಿಸುತ್ತದೆ. 2011-12ರಲ್ಲಿ ಅಸುರಕ್ಷಿತ ಲೈಂಗಿಕತೆಯಿಂದ ಜನರಲ್ಲಿ ಎಚ್ಐವಿ ಹರಡುವವರ ಸಂಖ್ಯೆ 2.4 ಲಕ್ಷ ದಾಖಲಾಗಿದೆ. 2020-21 ರಲ್ಲಿ, ಪ್ರಕರಣವು 2.4 ಲಕ್ಷ ಜನರಿಂದ 85,268 ಕ್ಕೆ ಇಳಿದಿದೆ.
ಆಂಧ್ರಪ್ರದೇಶ ಅಗ್ರ ಸ್ಥಾನದಲ್ಲಿ, ಕರ್ನಾಟಕ ಎಷ್ಟನೇ ಸ್ಥಾನ?
ಇನ್ನು ನಾವು ರಾಜ್ಯವಾರು ದತ್ತಾಂಶವನ್ನು ನೋಡುವಾಗ ಆಂಧ್ರ ಪ್ರದೇಶವು ಹೆಚ್ಚು ಎಚ್ಐವಿ ಸೋಂಕಿತರನ್ನು ಹೊಂದಿದೆ ಎಂದು ತಿಳಿದು ಬಂದಿದೆ. ಎಚ್ಐವಿ ಸೋಂಕಿತರ ಪಟ್ಟಿಯಲ್ಲಿ ಆಂಧ್ರ ಪ್ರದೇಶ ರಾಜ್ಯವು ಟಾಪ್ನಲ್ಲಿದೆ. ಆಂಧ್ರಪ್ರದೇಶದಲ್ಲಿ 3,18,814 ಎಚ್ಐವಿ ಪ್ರಕರಣಗಳು ವರದಿ ಆಗಿದೆ. ದರ ನಂತರ ಮಹಾರಾಷ್ಟ್ರದಲ್ಲಿ 2,84,577, ಕರ್ನಾಟಕದಲ್ಲಿ 2,21,982, ತಮಿಳುನಾಡಿನಲ್ಲಿ 1,16,536, ಉತ್ತರ ಪ್ರದೇಶದಲ್ಲಿ 1,10,911 ಮತ್ತು ಗುಜರಾತ್ನಲ್ಲಿ 87,440 ಪ್ರಕರಣಗಳಿವೆ.
18 ತಿಂಗಳ ಪರೀಕ್ಷೆಯಿಂದ ಸಂಗ್ರಹಿಸಿದ ಮಾಹಿತಿಯ ಪ್ರಕಾರ, 2011-12 ರಿಂದ 2020-21 ರವರೆಗೆ ರಕ್ತ ಮತ್ತು ರಕ್ತದ ಉತ್ಪನ್ನಗಳ ಮೂಲಕ ಹರಡುವ ಮೂಲಕ 15,782 ಜನರು ಎಚ್ಐವಿ ಸೋಂಕಿಗೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ. ತಾಯಿಯಿಂದ ಮಗುವಿಗೆ ಸೋಂಕು ಹರಡಿದ ಪ್ರಕರಣಗಳು 4,423 ಆಗಿದೆ. ಅಂಕಿಅಂಶಗಳ ಪ್ರಕಾರ, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಚ್ಐವಿ ಹರಡುವಿಕೆಯು ಕುಸಿತವನ್ನು ಕಂಡಿದೆ.
2020 ರ ಹೊತ್ತಿಗೆ ಎಚ್ಐವಿ ಇದ್ದ 23,18,737 ಜನರಲ್ಲಿ 81,430 ಮಂದಿ ಮಕ್ಕಳು ಆಗಿದ್ದರು. ದೇಹದ ಪ್ರತಿರಕ್ಷಣಾ ವ್ಯವಸ್ಥೆಯ ಮೇಲೆ ನೇರವಾಗಿ ದಾಳಿ ಮಾಡುವ ಕಾರಣ ಎಚ್ಐವಿ ಮನುಷ್ಯರಿಗೆ ತುಂಬಾ ಅಪಾಯಕಾರಿ. ವೈರಸ್ಗೆ ಯಾವುದೇ ಪರಿಣಾಮಕಾರಿ ಚಿಕಿತ್ಸೆ ಇಲ್ಲ ಎಂದು ವೈದ್ಯರು ಹೇಳುತ್ತಾರೆ. ಆದರೆ ಸರಿಯಾದ ವೈದ್ಯಕೀಯ ಆರೈಕೆಯೊಂದಿಗೆ ಅದನ್ನು ನಿರ್ವಹಿಸಬಹುದು. ಚಿಕಿತ್ಸೆ ನೀಡದೆ ಬಿಟ್ಟರೆ, ವೈರಸ್ ಏಡ್ಸ್ ಗೆ ಕಾರಣವಾಗಬಹುದು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications