ಕಾಶ್ಮೀರದಲ್ಲಿ 21 ವರ್ಷದ ಹಿಜ್ಬುಲ್ ಮುಜಾಹಿದ್ದಿನ್ ಕಮಾಂಡರ್ ಹತ್ಯೆ
ಶ್ರೀನಗರ, ಜುಲೈ 09 : ದಕ್ಷಿಣ ಕಾಶ್ಮೀರದಲ್ಲಿ ಶುಕ್ರವಾರ ನಡೆದ ಎನ್ಕೌಂಟರ್ನಲ್ಲಿ ಹಿಜ್ಬುಲ್ ಮುಜಾಹಿದ್ದಿನ್ ಉಗ್ರ ಸಂಘಟನೆಯ ಕಮಾಂಡರ್ ಅಬ್ದುಲ್ ಬುರ್ಹಾನ್ ವನಿಯನ್ನು ಹತ್ಯೆ ಮಾಡಲಾಗಿದೆ. ಕಾಶ್ಮೀರದ ಯುವಕರಿಗೆ ಬಂದೂಕು ಕೈಗೆತ್ತಿಕೊಳ್ಳುವಂತೆ ಕರೆ ನೀಡಿದ್ದ ಬುರ್ಹಾನ್ ತಲೆಗೆ ಪೊಲೀಸರು 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಿದ್ದರು.
ಅನಂತನಾಗ್ ಜಿಲ್ಲೆಯ ಕೊಕೇರ್ ನಾಗ್ ಪದೇಶದಲ್ಲಿ ಉಗ್ರರು ಅಡಗಿರುವ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಬುರ್ಹಾನ್ (21) ಮತ್ತು ಆತನ ಸಹಚರರಾದ ಸರ್ತಾಜ್ ಅಹಮದ್ ಶೇಖ್ ಮತ್ತು ಬಶೀರ್ ಲಷ್ಕರಿ ಅವರನ್ನು ಹತ್ಯೆ ಮಾಡಿದ್ದಾರೆ. [ಕಣ್ಣೀರಲ್ಲಿ ತಾರಿಷಿ ಕುಟುಂಬ, ಇಂಥ ನೋವಿಗೆ ಕೊನೆ ಯಾವಾಗ?]

15ನೇ ವಯಸ್ಸಿನಲ್ಲಿಯೇ ಹಿಜ್ಬುಲ್ ಮುಜಾಹಿದ್ದಿನ್ ಉಗ್ರ ಸಂಘಟನೆ ಸೇರಿದ್ದ ಬುರ್ಹಾನ್ ಬಹು ಬೇಗನೆ ಕಮಾಂಡರ್ ಆಗಿದ್ದ. ಉಗ್ರ ಸಂಘಟನೆ ಸೇರಿದ ಮೊದಲ ವಿದ್ಯಾವಂತ ಯುವಕ ಎಂಬ ಹಣೆಪಟ್ಟಿಯನ್ನು ಈತ ಹೊಂದಿದ್ದ. ಕಾಶ್ಮೀರದ ಯುವಕರು ಬಂದೂಕು ಹಿಡಿಯಿರಿ ಎಂದು ಆತ ಕರೆ ಕೊಟ್ಟಿದ್ದ. [ಬಾಂಗ್ಲಾ ದಾಳಿ: ಸ್ನೇಹಕ್ಕಾಗಿ ಪ್ರಾಣ ತ್ಯಾಗ ಮಾಡಿದ ಹುಸೇನ್]
ಸಾಮಾಜಿಕ ಜಾಲ ತಾಣಗಳಲ್ಲಿ ಸಕ್ರಿಯನಾಗಿದ್ದ ಬುರ್ಹಾನ್ ಯುವಕರನ್ನು ಸಂಘಟನೆಗೆ ಸೇರಿಸಿಕೊಳ್ಳುತ್ತಿದ್ದ. ಉಗ್ರ ಸಂಘಟನೆ ಸೇರುವುದಕ್ಕೂ ಮೊದಲು ವಿದ್ಯಾಭ್ಯಾಸದ ಬಗ್ಗೆ ಬುರ್ಹಾನ್ಗೆ ಅಪಾರವಾದ ಆಸಕ್ತಿ ಇತ್ತು. ಕ್ರಿಕೆಟ್ ಆಟದ ಬಗ್ಗೆ ಆತ ಬಹಳ ಆಕರ್ಷಿತನಾಗಿದ್ದ.
ಅಬ್ದುಲ್ ಬುರ್ಹಾನ್ ವನಿಯನ್ನು ದಕ್ಷಿಣ ಕಾಶ್ಮೀರದ 28ಕ್ಕೂ ಹೆಚ್ಚು ವಿದ್ಯಾವಂತ ಯುವಕರನ್ನು ಹಿಜ್ಬುಲ್ ಮುಜಾಹಿದ್ದಿನ್ ಉಗ್ರ ಸಂಘಟನೆಗೆ ಸೇರಿಸಿದ್ದಾನೆ ಎಂದು ಗುಪ್ತಚರ ಇಲಾಖೆ ಮಾಹಿತಿ ಸಂಗ್ರಹಣೆ ಮಾಡಿದೆ. ಅಲ್ ಖೈದಾ, ಐಎಸ್ಐಎಸ್ ಸಂಘಟನೆಗಳ ನಾಯಕರಂತೆ ಸಂಘಟನೆಯ ಪ್ರಚಾರಕ್ಕೆ ಈತ ಸಾಮಾಜಿಕ ಜಾಲ ತಾಣಗಳನ್ನು ಬಳಸುತ್ತಿದ್ದ. [ಪಿಟಿಐ ಚಿತ್ರ]
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications