ನಾಲಿಗೆ ಬಿಗಿ ಹಿಡಿದು ಮಾತಾಡಿ, ಜನ್ಮ ಜಾಲಾಡಿಸುತ್ತೇನೆ: ಮೋದಿ ಎಚ್ಚರಿಕೆ
ನಾಲಿಗೆ ಬಿಗಿಹಿಡಿದು ಮಾತನಾಡಿ, ಹರಿದ್ವಾರದಲ್ಲಿ ಕಾಂಗ್ರೆಸ್ ಮುಖಂಡರಿಗೆ ಪ್ರಧಾನಿ ಮೋದಿ ಎಚ್ಚರಿಕೆ.
ಡೆಹ್ರಾಡೂನ್, ಹರಿದ್ವಾರ, ಫೆ 11 (ಪಿಟಿಐ) : ಕಾಂಗ್ರೆಸ್ ಪಕ್ಷದ ನಾಯಕರು ನಾಲಿಗೆ ಬಿಗಿ ಹಿಡಿದು ಮಾತನಾಡಲಿ, ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷದ ಮುಖಂಡರ ಜನ್ಮ ಜಾಲಾಡಿಸಿ ಬಿಡುತ್ತೇನೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ.
ಹರಿದ್ವಾರದಲ್ಲಿ ಚುನಾವಣೆಯ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಮೋದಿ, ನಾನು ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆಯಿಂದ ಮಾತನಾಡಿ ಎಂದು ಹೇಳುತ್ತಲೇ ಬರುತ್ತಿದ್ದೇನೆ, ಅವರು ಇದೇ ರೀತಿ ಹೇಳಿಕೆ ನೀಡುತ್ತಾ ಬಂದರೆ ಅವರ ಪಕ್ಷದ ಮುಖಂಡರ ಜಾತಕ ನನ್ನ ಬಳಿಯಿದೆ ಎನ್ನುವುದನ್ನು ಕಾಂಗ್ರೆಸ್ ಮುಖಂಡರು ಅರಿತಿರಲಿ ಎಂದು ಮೋದಿ ಎಚ್ಚರಿಸಿದ್ದಾರೆ.
ಪ್ರಸಕ್ತ ಬಜೆಟ್ ಅಧಿವೇಶನದ ವೇಳೆ, ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಬಗ್ಗೆ ಆಡಿದ ಮಾತಿಗೆ ಕಾಂಗ್ರೆಸ್ ನಾಯಕರು ನನ್ನ ಮೇಲೆ ಟೀಕಾಪ್ರಹಾರ ನಡೆಸುತ್ತಿದ್ದಾರೆ. ನಾನು ವಿವೇಕ ಇಟ್ಟುಕೊಂಡೇ ಹೇಳಿಕೆ ನೀಡಿದ್ದು ಎಂದು ಮೋದಿ ಸ್ಪಷ್ಟನೆ ನೀಡಿದ್ದಾರೆ.

ನಾನು ನನ್ನ ರಾಜಕೀಯ ವಿರೋಧಿಗಳ ವಿರುದ್ದ ಮಾತನಾಡುವಾಗ ಒಳ್ಳೆ ಪದಗಳನ್ನು ಬಳಸುತ್ತೇನೆ, ಆದರೆ ಕಾಂಗ್ರೆಸ್ ಮುಖಂಡರು ನನ್ನ ಬಗ್ಗೆ 'ನಾನ್ ಸೆನ್ಸ್' ಪದ ಬಳಸಿದರೆ, ಕಾಂಗ್ರೆಸ್ ಈ ದೇಶಕ್ಕೆ ಮಾಡಿರುವ ಮೋಸದ ಇತಿಹಾಸ ಅವರ ಹಿಂದೆಯೇ ಬರುತ್ತದೆ ಎನ್ನುವುದನ್ನು ಮೋದಿ, ಕಾಂಗ್ರೆಸ್ ಮುಖಂಡರಿಗೆ ನೆನೆಪಿಸಿದ್ದಾರೆ.
ಸರ್ಜಿಕಲ್ ದಾಳಿಯ ವೇಳೆ ನಮ್ಮ ದೇಶದ ಯೋಧರು ಎದುರಾಳಿಗಳ ಕ್ಯಾಂಪಿಗೆ ಹೋಗಿ ಉಗ್ರರನ್ನು ಸದೆಬಡಿದಿದ್ದಾರೆ. ಇಂತಹ ದಾಳಿಗಳನ್ನು ಗೌಪ್ಯವಾಗಿ ನಿರ್ವಹಿಸಬೇಕಾಗುತ್ತದೆ ಎನ್ನುವ ಕನಿಷ್ಠ ಜ್ಞಾನವಿಲ್ಲದ ವಿರೋಧ ಪಕ್ಷಗಳು ಯೋಧರ ಬಗ್ಗೆ ಅನುಮಾನ ವ್ಯಕ್ತಪಡಿಸಿತು ಎಂದು ಮೋದಿ ಬೇಸರ ವ್ಯಕ್ತ ಪಡಿಸಿದ್ದಾರೆ.
ಚುನಾವಣೆಯ ಹೊಸ್ತಿಲಲ್ಲಿರುವ ಉತ್ತರಾಖಾಂಡ ರಾಜಧಾನಿ ಡೆಹ್ರಾಡೂನ್ ನಲ್ಲಿ ಶನಿವಾರ (ಫೆ 11) ಮತ್ತೊಂದು ಭಾರೀ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಮೋದಿ, ನಮ್ಮ ಸರಕಾರ ಒನ್ ರ್ಯಾಂಕ್ ಒನ್ ಪೆನ್ಸನ್ ಸ್ಕೀಂ ಜಾರಿಗೆ ತಂದಿದೆ.
ಚಾರ್ ಧಾಮ್ ಯಾತ್ರೆಗೆ ಹೋಗುವ ಯಾತ್ರಾರ್ಥಿಗಳ ಸುರಕ್ಷತೆ ಮತ್ತು ಭದ್ರತೆಗೆ ನಮ್ಮ ಸರಕರ ವಿಶೇಷ ಒತ್ತು ನೀಡಲಿದೆ, ಚೌಕೀದಾರನಾಗಿ ನೀವು ನನ್ನನ್ನು ನೇಮಿಸಿದ್ದೀರಾ, ಆ ಕೆಲಸ ನಾನು ಮಾಡುತ್ತಿದ್ದೇನೆಂದು ಸಭೆಯಲ್ಲಿ ಮೋದಿ ಹೇಳಿದ್ದಾರೆ.
-
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ?












Click it and Unblock the Notifications