ಒಂದೇ ಕಾರಣ ನೀಡಿ ರಜೆಗೆ ಅರ್ಜಿ ಹಾಕಿದ 700ಕ್ಕೂ ಅಧಿಕರ ಪೊಲೀಸರು; ಮುಂದೇನಾಯ್ತು?
Holiday: ಸಾಮಾನ್ಯವಾಗಿ ಸರ್ಕಾರಿ ಅಥವಾ ಖಾಸಗಿ ಕಂಪನಿಗಳಲ್ಲಿ ಉದ್ಯೋಗಿಗಳಿಗೆ ವರ್ಷಕ್ಕೆ ಇಂತಿಷ್ಟೆಂದು ರಜೆಗಳು ಇರುತ್ತವೆ. ಯಾವುದದರೂ ತುರ್ತು ಸಂದರ್ಭ ಅಥವಾ ಹಬ್ಬ, ಕಾರ್ಯಕ್ರಮಗಳಿಗೆ ರಜೆಗಳನ್ನು ಪಡೆಯಬಹುದಾಗಿದೆ. ಆದರೆ, ಇದೀಗ ವಿಚಿತ್ರ ಎಂಬಂತೆ 700ಕ್ಕೂ ಹೆಚ್ಚು ಮಂದಿ ಪೊಲೀಸರು ಒಂದೇ ಕಾರಣ ನೀಡಿ ರಜೆಗೆ ಅರ್ಜಿ ಸಲ್ಲಿಸಿದ್ದಾರೆಂಬ ಮಾಹಿತಿಯೊಂದು ಹೊರಬಿದ್ದಿದೆ.
ಸರ್ಕಾರಿ ಮಟ್ಟದ ಯಾವುದೇ ಇಲಾಖೆಯಲ್ಲಾಗಲಿ ತುರ್ತು ಸಂದರ್ಭಗಳಲ್ಲಿ ಅಧಿಕಾರಿಗಳಿಗೆ ರಜೆ ನೀಡಬೇಕಾಗುತ್ತದೆ. ಆದರೆ ಕೆಲವರು ಇದನ್ನೇ ಬಂಡವಾಳ ಮಾಡಿಕೊಂಡು ಸುಳ್ಳು ನೆಪ ಹೇಳಿ ರಜೆಗಳನ್ನು ಪಡೆಯುವ ಮೂಲಕ ಕೊನೆಗೆ ಇತರ ಅಧಿಕಾರಿಗಳಿಗೂ ಸಂಕಷ್ಟ ತಂದುಬಿಡುತ್ತಾರೆ. ಅಂತಹದ್ದೇ ಒಂದು ಘಟನೆ ಪ್ರಯಾಗ್ರಾಜ್ನಲ್ಲಿ ನಡೆದಿದೆ.

2025ರ ಜನವರಿಯಲ್ಲಿ ಪ್ರಯಾಗ್ರಾಜ್ನಲ್ಲಿ ಕುಂಭಮೇಳ ನಡೆಯಲಿದ್ದು, ಈ ಹಿನ್ನೆಲೆ ಈಗಾಗಲೇ ಉತ್ತರಪ್ರದೇಶ ಸರ್ಕಾರ ಸಕಲ ತಯಾರಿ ಮಾಡಿಕೊಂಡಿದೆ. ಕೋಟ್ಯಂತರ ಜನ ಭಾಗಿ ಆಗುವ ನಿರೀಕ್ಷೆಯಿದ್ದು, ಭದ್ರತೆಗೆ 6,000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಿದ್ದು, ಯಾವುದೇ ಅಹಿತಕರ ಘಟನೆ ಸಂಭವಿಸಿದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ.
ಭದ್ರತೆಗೆ ಸಂಬಂಧಿಸಿದಂತೆ ಅಕ್ಟೋಬರ್ 25ರಿಂದ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತಿದೆ. ಈ ಪೈಕಿ 1200ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಡಿಸೆಂಬರ್ನಲ್ಲಿ ರಜೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಪೈಕಿ 700ಕ್ಕೂ ಹೆಚ್ಚು ಪೊಲೀಸರು ಒಂದೇ ಕಾರಣ ನೀಡಿದ್ದಾರೆ. ಇದೀಗ ಇದೇ ವಿಚಾರ ಅಧಿಕಾರಿಗಳನ್ನು ಸಂಕಷ್ಟಕ್ಕೆ ಸಿಲುಕಿಸಿದೆ.
ಮೂಲಗಳ ಪ್ರಕಾರ, 700ಕ್ಕೂ ಹೆಚ್ಚು ಪೊಲೀಸರು ತಮ್ಮ ಪತ್ನಿಗೆ ಹೆರಿಗೆ ಕಾರಣ ನೀಡಿ ರಜೆ ಕೋರಿದ್ದಾರೆ. ಡಿಸೆಂಬರ್ ಅಥವಾ ಜನವರಿಯಲ್ಲಿ ಹೆರಿಗೆ ಆಗುವ ಸಾಧ್ಯತೆಯಿದೆ ಎಂದು ಕಾರಣಗಳನ್ನು ನೀಡಿ ರಜೆ ನೀಡಬೇಕು ಎಂದು ಅಧಿಕಾರಿಗಳಿಗೆ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರಂತೆ ಅಂತಾ ತಿಳಿದುಬಂದಿದೆ.
ಅರ್ಜಿ ಸಲ್ಲಿಸಿದವರ ಪೈಕಿ 2018 ಮತ್ತು 2023ರಲ್ಲಿ ನೇಮಕ ಆಗಿರುವವರು ಹೆಚ್ಚಿದ್ದಾರಂತೆ. ಅಷ್ಟೇ ಅಲ್ಲದೆ, ಪೋಷಕರ ಅನಾರೋಗ್ಯದ ಹಿನ್ನೆಲೆ 250 ಪೊಲೀಸರು ರಜೆಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇತರರು ಇನ್ನೂ ಬೇರೆ ಬೇರೆ ಕಾರಣಗಳನ್ನು ನೀಡಿ ರಜೆ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
2025ರ ಜನವರಿ 13ರಂದು ಮಹಾಕುಂಭಮೇಳ ಆರಂಭವಾಗಲಿದೆ. ಇದು ಫೆಬ್ರವರಿ 26ರಂದು ಮುಕ್ತಾಯ ಆಗಲಿದೆ. ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರುವ ನಿರೀಕ್ಷೆಯಿದ್ದು, ಈ ಹಿನ್ನೆಲೆ ಸರ್ಕಾರ ಯಾವುದೇ ಅಹಿತಕರ ಘಟನೆಗಳು ನೆಡೆಯದಂತೆ ಈಗಿನಿಂದಲೇ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ.
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications