School College Holidays: ಮುಂದಿನ ಆದೇಶದವರೆಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Holidays Annouced: ಭಾರತ ಸರ್ಕಾರ ಅಂದುಕೊಂಡಂತೆ ಪಾಕಿಸ್ತಾನ ಮೇಲೆ ಬುಧವಾರ ನಸುಕಿನ ಜಾವ ದಾಳಿ ಮಾಡಿದೆ. ಇತ್ತ ಗುರುವಾರ ಲಾಹೋರ್ ನಲ್ಲಿ ಒಂದಷ್ಟು ಸ್ಪೋಟಕಗಳು ಕೇಳಿ ಬಂದಿವೆ. ಭಾರತದ 31 ಜನರ ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೆ ಪಾಕಿಸ್ತಾನ ಸಹ ಯುದ್ಧ ಮಾಡುವುದಾಗಿ ತಿಳಿಸಿತ್ತು. ಸದ್ಯಕ್ಕೆ ಯುದ್ಧ ಮಾಡುವ ಶಕ್ತಿ ಪಾಕಿಸ್ಥಾನಕ್ಕೆ ಇಲ್ಲ ಎನ್ನಲಾಗಿದೆ. ಹೀಗಿದ್ದರೂ ಮಕ್ಕಳು, ವಿದ್ಯಾರ್ಥಿಗಳ ಹಿತದೃಷ್ಟಿ ಮತ್ತು ಭದ್ರತೆ ಕಾರಣಕ್ಕಾಗಿ ಶಾಲೆ-ಕಾಲೇಜುಗಳಿಗೆ ಇಂದಿನಿಂದ ಅನಿರ್ದಿಷ್ಟಾವಧಿಗೆ ರಜೆ ಘೋಷಿಸಲಾಗಿದೆ.
ಹೌದು ರಾಜಸ್ತಾನ ರಾಜ್ಯದ ಜೋಧಪುರ ನಗರ ಆಡಳಿತವು ಇಂದಿನಿಂದ ಮುಂದಿನ ಆದೇಶದವರೆಗೆ ಎಲ್ಲಾ ಖಾಸಗಿ ಮತ್ತು ಸರ್ಕಾರಿ ಶಾಲೆಗಳು ಮತ್ತು ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಿದೆ. ಜಿಲ್ಲಾಧಿಕಾರಿಗಳಾದ ಗೌರವ್ ಅಗರ್ವಾಲ್ ಅವರು ಅಂಗನವಾಡಿ ಒಳಗೊಂಡಂತೆ ಶಾಲಾ, ಕಾಲೇಜುಗಳಿಗೆ ಸಾರ್ವತ್ರಿಕೆ ರಜೆ ಘೋಷಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ.

ಪಾಕಿಸ್ತಾನ ಯಾವಾಗ ಬೇಕಾದರೂ ಭಾರತದ ಮೇಲೆ ಅಟ್ಯಾಕ್ ಮಾಡಲು ಬರುವ ಸಾಧ್ಯತೆ ಇದೆ. ಪಾಕಿಸ್ಥಾನ ಸೇನೆ ಅಥವಾ ಉಗ್ರರ ಪ್ರತಿ ದಾಳಿಗೆ ಕಾಯುತ್ತಿರುವ ಭಾರತ ಎರಡನೇ ಬಾರಿಗೆ ಬಲವಾಗಿ ದಾಳಿ ಮಾಡಲು ಸಜ್ಜಾಗಿದೆ. ಹೀಗಾಗಿ ಪಾಕ್ ಮತ್ತೆ ನಮ್ಮ ತಂಟೆಗೆ ಬರುವುದು ಸದ್ಯಕ್ಕೆ ಅನುಮಾನ ಎನ್ನಲಾಗಿತ್ತಿದೆ. ಇಂತಹ ಪ್ರಕ್ಷುಬ್ದ ಸಂದರ್ಭದಲ್ಲಿ ಮಕ್ಕಳು ಶಾಲೆಗೆ, ಕಾಲೇಜಿ ತೆರಳುವುದು ಸರಿಯಲ್ಲ ಎಂದು ಅರಿತು ರಜೆ ಘೋಷಣೆ ಮಾಡುವ ನಿರ್ಧಾರಕ್ಕೆ ಬರಲಾಗಿದೆ.
ಜೋಧಪುರ ಮಾತ್ರವಲ್ಲದೇ ನೆನ್ನೆಯೇ ರಾಜಸ್ತಾನದ ರಾಜ್ಯದ ಜೈಸಲ್ಮೇರ್ ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿತ್ತು. ಮಕ್ಕಳು ಪೋಷಕರಿಗೆ ಸುರಕ್ಷಿತ ಸ್ಥಳದಲ್ಲಿರುವಂತೆ, ಸಣ್ಣ ಮಕ್ಕಳನ್ನು ಹೊರ ಬಡಿದಂತೆ ಎಚ್ಚರಿಕೆ ಸಹ ಶಾಲಾ ಆಡಳಿತ ಮಂಡಳಿ ತಿಳಿಸಿವೆ ಎನ್ನಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನದ ಉಗ್ರರು ದಾಳಿ ನಡೆಸಿ ಪ್ರವಾಸಿಗರನ್ನು ಹತ್ಯೆಗೈದ ಬಳಿಕ ಕಣಿವೆ ರಾಜ್ಯದಲ್ಲಿ ಸಹಜ ಸ್ಥಿತಿಯ ವಾತಾವರಣ ಇಲ್ಲದಾಗಿದೆ. ಭಯದಲ್ಲೇ ಜನ ಜೀವನ ನಡೆಸುವಂತಾಗಿದೆ. ಹೀಗಾಗಿ ಕಣಿವೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕೈಗೊಂಡಿದ್ದು, ಶಾಲೆ ಮತ್ತು ಕಾಲೇಜುಗಳನ್ನು ಮುಚ್ಚಲಾಗಿದೆ. ಕಾಶ್ಮೀರ ವಿಶ್ವವಿದ್ಯಾಲಯವು ಮೇ 10 ರವರೆಗೆ ನಿಗದಿಯಾಗಿದ್ದ ಎಲ್ಲಾ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದಿನ ಆದೇಶದವರೆಗೆ ಮುಂದೂಡಿಕೆ ಮಾಡಿದೆ.
ಪಾಕಿಸ್ತಾನ ಮತ್ತು ಭಾರತದ ಮಧ್ಯ ಯುದ್ಧದ ಕಾರ್ಮೋಡ ಕವಿದಿದೆ. ಬೂದಿ ಮುಚ್ಚಿದ ಕೆಂಡದಂತಹ ಸ್ಥಿತಿ ಇರುವ ಹಿನ್ನೆಲೆಯಲ್ಲಿ ಮೇ 7ರಿಂದಲೇ ಜಮ್ಮು, ಸಾಂಬಾ, ಕಥುವಾ, ರಾಜೌರಿ ಮತ್ತು ಪೂಂಚ್ ಜಿಲ್ಲೆಗಳಲ್ಲಿನ ಎಲ್ಲಾ ಶಾಲೆಗಳು, ಕಾಲೇಜುಗಳು ಹಾಗು ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಟ್ಟಿವೆ. ಈ ಸಂಬಂಧ ಅಧಿಕೃತ ಆದೇಶ ಹೊರಡಿಸಲಾಗಿದೆ. ಕೆಲವು ಶೈಕ್ಷಣಿಕ ಸಂಸ್ಥೆಗಳು ಇಂದು ಗುರುವಾರದಿಂದ ಸ್ಥಗಿತಗೊಳಿಸಲು ಪ್ರಾರಂಭಿಸಿವೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications