ಉಗ್ರರ ಮೇಲೆ ಕಣ್ಣಿಡಲು ಸಿದ್ದುಗೆ ರಾಜನಾಥ್ ಸೂಚನೆ
ನವದೆಹಲಿ, ಮಾ. 24: ಉಗ್ರಗಾಮಿ ಚಟುವಟಿಕೆಗಳ ನಿಗಾ ಇಡಲು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಖಡಕ್ ಸೂಚನೆ ನೀಡಿದ್ದಾರೆ. ಭಾರತದ ಮೂರು ರಾಜ್ಯಗಳ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್ ಉಗ್ರಗಾಮಿ ಚಟುವಟಿಕೆ ಕುರಿತು ನಿಗಾ ವಹಿಸಲು ಸೂಚಿಸಿದ್ದಾರೆ.
ಕರ್ನಾಟಕ, ತಮಿಳು ನಾಡು ಮತ್ತು ಮಧ್ಯ ಪ್ರದೇಶದ ಮುಖ್ಯಮಂತ್ರಿಗಳಿಗೆ ಪ್ರತ್ಯೇಕ ಪತ್ರ ಬರೆದಿರುವ ಸಿಂಗ್, ಸಿಮಿ ಉಗ್ರ ಸಂಘಟನೆ ವಿಧ್ವಂಸಕ ಕೃತ್ಯಗಳ ಕುರಿತು ವಿಶೇಷ ಎಚ್ಚರಿಕೆ ವಹಿಸುವಂತೆ ತಿಳಿಸಿದ್ದಾರೆ.[ಬೆಂಗಳೂರು ಸ್ಫೋಟದ ಆರೋಪಿಗಳು ಎಲ್ಲಿ?]

2014ರ ಮೇ ಮತ್ತು ಡಿಸೆಂಬರ್ ನಲ್ಲಿ ಬೆಂಗಳೂರು ಮತ್ತು ಚೆನ್ನೈ ನಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಸಿಂಗ್ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಿದ್ದಾರೆ. ಈ ದಾಳಿಗಳ ಹಿಂದೆ ಮಧ್ಯ ಪ್ರದೇಶದ ಖಾಂಡ್ವಾ ಜೈಲಿನಿಂದ ತಪ್ಪಿಸಿಕೊಂಡಿರುವ ಸಿಮಿ ಸಂಘಟನೆ ಉಗ್ರರ ಕೈವಾಡವಿರುವ ಮಾಹಿತಿ ಲಭ್ಯವಾಗಿದೆ ಎಂದು ಸಿಂಗ್ ತಿಳಿಸಿದ್ದಾರೆ.
ಬೆಂಗಳೂರು ಡಿಸೆಂಬರ್ ಸ್ಫೋಟದ ಆರೋಪಿಗಳನ್ನು ಇನ್ನು ಬಂಧಿಸಬೇಕಾಗಿದೆ. ಅವರನ್ನು ಬಂಧಿಸಿ ಅಪರಾಧ ಚಟುವಟಿಕೆಯಲ್ಲಿ ತೊಡಗುವವರಿಗೆ ಸ್ಪಷ್ಟ ಸಂದೇಶ ರವಾನಿಸಬೇಕಿದೆ. ಮುಂದೆ ಇಂಥ ಅಹಿತಕರ ಘಟನೆ ನಡೆಯದಂತೆ ತಡೆಯಲು ಆರೋಪಿಗಳನ್ನು ಬಂಧಿಸುವುದು ಮುಖ್ಯವಾಗಿದೆ ಎಂದು ತಿಳಿಸಿದ್ದಾರೆ.[ಇವರೇನು ದಾನಕ್ಕೆ ಡೀಸೆಲ್ ಸ್ಮಗ್ಲಿಂಗ್ ಮಾಡ್ತಾರೋ?]
ತನಿಖೆ ಯಾವ ಹಂತದಲ್ಲಿದೆ? ಎಷ್ಟು ಪ್ರಗತಿಯಾಗಿದೆ ಎಂಬುದನ್ನು ತಿಳಿಸಬೇಕು ಎಂದು ಸಿದ್ದರಾಮಯ್ಯ ಅವರಿಗೆ ರಾಜ್ ನಾಥ್ ತಿಳಿಸಿದ್ದಾರೆ. ಉಗ್ರ ಚಟುವಟಿಕೆಗಳ ಸಂಬಂಧ ನಡೆಯುತ್ತಿರುವ ಪ್ರತಿ ಹಂತದ ತನಿಖೆಯ ವಿವರವನ್ನು ಕೇಂದ್ರ ಸರ್ಕಾರಕ್ಕೆ ತಿಳಿಸುತ್ತಿರಬೇಕು. ಮುಂದೆ ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಗೂ ಇದೇ ಬಗೆಯ ಪತ್ರ ಬರೆದು ಸೂಚನೆ ನೀಡಲಾಗುವುದು ಎಂದು ರಾಜ್ ನಾಥ್ ಸಿಂಗ್ ತಿಳಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications