ಜಮ್ಮು ಕಾಶ್ಮೀರ ಗೃಹ ಇಲಾಖೆ ಅಲ್ಲಿನ ರಾಜ್ಯಪಾಲರ ಹೆಗಲಿಗೆ?
ಜಮ್ಮು ಕಾಶ್ಮೀರದ ಗೃಹ ಇಲಾಖೆ ಸದ್ಯದಲ್ಲೇ ರಾಜ್ಯಪಾಲರ ಹೆಗಲಿಗೆ. ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ. ಕಾಶ್ಮೀರದ ಹಿಂಸಾಚಾರ ಹತ್ತಿಕ್ಕಲು ಕೇಂದ್ರ ಸರ್ಕಾರದ ಹೊಸ ಕ್ರಮ.
ಶ್ರೀನಗರ, ಜುಲೈ 4: ಜಮ್ಮು ಕಾಶ್ಮೀರದಲ್ಲಿನ ಹಿಂಸಾಚಾರ ವಾತಾವರಣವನ್ನು ಶತಾಯಗತಾಯ ಹತ್ತಿಕ್ಕಲು ನಿರ್ಧರಿಸಿರುವ ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಹೊಸ ಕ್ರಮಗಳನ್ನು ಅಳವಡಿಸಲು ಮುಂದಾಗಿದೆ.
ಇದೇ ಕಾರಣಕ್ಕಾಗಿ, ಜಮ್ಮು ಕಾಶ್ಮೀರದಲ್ಲಿ ಸಮರ್ಥ ರಾಜ್ಯಪಾಲರನ್ನು ನೇಮಿಸಬೇಕೆಂದು ಆಲೋಚಿಸಿರುವ ಕೇಂದ್ರ ಸರ್ಕಾರ, ಈಗಿರುವ ರಾಜ್ಯಪಾಲ ಎನ್ಎನ್ ವೊಹ್ರಾ ಬದಲಿಗೆ ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ರಾಜೀವ್ ಮಹರ್ಷಿಯವರನ್ನು ನೇಮಿಸಲು ಮುಂದಾಗಿದೆ.

ಇದರ ಮೊದಲ ಹೆಜ್ಜೆಯಾಗಿ, ಜಮ್ಮು ಕಾಶ್ಮೀರದ ಗೃಹ ಇಲಾಖೆಯನ್ನು ಅಲ್ಲಿನ ರಾಜ್ಯಪಾಲರಿಗೆ ಹಸ್ತಾಂತರಿಸಲು ನಿರ್ಧರಿಸಲಾಗಿದೆ. ಈಗ ಸದ್ಯಕ್ಕೆ ಆ ಗೃಹ ಇಲಾಖೆಯನ್ನು ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ನೋಡಿಕೊಳ್ಳುತ್ತಿದ್ದಾರೆ.
ಆದರೆ, ಅಲ್ಲಿನ ಮತದಾರರ ವಿರುದ್ಧ ಹೋಗಲೊಲ್ಲದ ಮುಫ್ತಿ ಅವರು, ಕೆಲವಾರು ಪ್ರಮುಖ ಹಾಗೂ ಸೂಕ್ಷ್ಮ ಸಂದರ್ಭಗಳಲ್ಲಿ ದಿಟ್ಟ ನಿರ್ಧಾರಗಳನ್ನು ಕೈಗೊಳ್ಳುವಲ್ಲಿ ಹಿಂದೇಟು ಹಾಕುತ್ತಿದ್ದಾರೆಂಬ ಆರೋಪ ಅವರ ಮೇಲಿದೆ.
ಇದರ ಫಲವಾಗಿಯೇ ಅಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಕೆಲ ಪೊಲೀಸ್ ಅಧಿಕಾರಗಳನ್ನು ಜನರು ಹೊಡೆದು ಸಾಯಿಸುವಂಥ ಘಟನೆಗಳು ನಡೆಯುತ್ತಿವೆ ಎಂದು ಕೇಂದ್ರ ಸರ್ಕಾರ ನಿರ್ಧರಿಸಿದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications