ಮರ್ಯಾದಾ ಹತ್ಯೆ ಶಂಕೆ: ಉದಯಪುರದಲ್ಲಿ ದಂಪತಿ ಕೊಲೆ
ಉದಯಪುರ ನವೆಂಬರ್ 18: ರಾಜಸ್ಥಾನದ ಉದಯಪುರದ ಗೊಗುಂಡಾ ಪೊಲೀಸ್ ಠಾಣೆ ಬಳಿಯ ನಿರ್ಜನ ಪ್ರದೇಶದಲ್ಲಿ ದಂಪತಿಯ ಮೃತದೇಹಗಳು ಪತ್ತೆಯಾಗಿವೆ. ಇದು ಮರ್ಯಾದಾ ಹತ್ಯೆ ಅಥವಾ ವೈಯಕ್ತಿಕ ದ್ವೇಷದ ಪ್ರಕರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಬಲಿಯಾದವರನ್ನು ವೃತ್ತಿಯಲ್ಲಿ ಶಿಕ್ಷಕ ರಾಹುಲ್ ಮೀನಾ (30) ಮತ್ತು ಸೋನು ಸಿಂಗ್ (28) ಎಂದು ಗುರುತಿಸಲಾಗಿದೆ. ರಾಹುಲ್ ಬುಡಕಟ್ಟು ಸಮುದಾಯದವರಾಗಿದ್ದರೆ, ಸೋನು ರಜಪೂತ ಸಮುದಾಯದವರು. ಇಬ್ಬರೂ ಉದಯಪುರದಿಂದ 10 ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಹಳ್ಳಿಗಳಲ್ಲಿ ವಾಸಿಸುತ್ತಿದ್ದರು.
ಮೇಲ್ನೋಟಕ್ಕೆ ಅವರಿಬ್ಬರನ್ನು ಭಾರವಾದ ಕಲ್ಲುಗಳಿಂದ ಜಜ್ಜಿ ಕೊಲೆ ಮಾಡಲಾಗಿದೆ. ನಂತರ ಹರಿತವಾದ ಆಯುಧದಿಂದ ಇರಿಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

"ಮೀನಾ ಅವರ ಖಾಸಗಿ ಭಾಗಗಳನ್ನು ಕತ್ತರಿಸಲಾಗಿದೆ. ಜೊತೆಗೆ ಮೊಂಡಾದ ಆಯುಧದ ಗಾಯಗಳಿವೆ. ದೇಹವು ಎರಡು ದಿನಗಳ ಹಳೆಯದು ಎಂದು ತೋರುತ್ತದೆ. ಅವರು ಎರಡು ದಿನಗಳಿಂದ ಕಾಣೆಯಾಗಿದ್ದಾರೆ. ಸಂತ್ರಸ್ತರ ಜಾತಿಯನ್ನು ನೋಡಿದರೆ ಇದು ಮರ್ಯಾದಾ ಹತ್ಯೆಯ ಪ್ರಕರಣವಾಗಿರಬಹುದು ಎಂದು ತೋರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

"ನವೆಂಬರ್ 15 ರಿಂದ ಇಬ್ಬರೂ ನಾಪತ್ತೆಯಾಗಿದ್ದಾರೆ. ಹತ್ಯೆಗಳು ವೈಯಕ್ತಿಕ ದ್ವೇಷದ ಕಾರಣವಾಗಿರಬಹುದು. ಸ್ಥಳದಿಂದ ಸಂಗ್ರಹಿಸಲಾದ ಮೃತದೇಹಗಳು ಮತ್ತು ಸಾಕ್ಷ್ಯಗಳನ್ನು ವೈದ್ಯಕೀಯ ಮತ್ತು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ" ಎಂದು ಉದಯಪುರ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ವಿಕಾಸ್ ಶರ್ಮಾ ತಿಳಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications