Road Accident: ಭೀಕರ ರಸ್ತೆ ಅಪಘಾತ; ಆರು ಮಂದಿ ಸಜೀವ ದಹನ
ಅಮರಾವತಿ, ಮೇ. 14 : ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹೈದರಾಬಾದ್ - ವಿಜಯವಾಡ ಹೆದ್ದಾರಿಯಲ್ಲಿ ಮೇ 15 ರ ಬುಧವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬಾಪಟ್ಲಾದಿಂದ ತೆಲಂಗಾಣದ ರಾಜಧಾನಿ ಹೈದರಾಬಾದ್ಗೆ ಹೋಗುತ್ತಿದ್ದ ಬಸ್ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಜೀವ ದಹನವಾಗಿದ್ದಾರೆ. ಈ ರಸ್ತೆ ಭೀಕರ ಅಪಘಾತದಲ್ಲಿ 32 ಮಂದಿ ಗಾಯಗೊಂಡಿದ್ದು, ಸದ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ವಿಡಿಯೋ ಉಸಿರುಗಟ್ಟಿಸುವಂತಿದೆ.

ಭೀಕರ ಅಪಘಾತದ ದೃಶ್ಯಗಳು, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರದಾಡುತ್ತಿವೆ. ವಿಡಿಯೋದಲ್ಲಿ ಬಸ್ ಬೆಂಕಿಗೆ ಆಹುತಿಯಾಗಿರುವುದನ್ನು ಕಾಣಬಹುದು. ಬಸ್ - ಟ್ರಕ್ ಡಿಕ್ಕಿಯಿಂದ ಉಂಟಾದ ಬೆಂಕಿ ಎಷ್ಟು ತೀವ್ರವಾಗಿದೆ ಎಂದರೆ ಬಸ್ ಮತ್ತು ಟ್ರಕ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
ಅಪಘಾತದಲ್ಲಿ ಬಸ್ ಮತ್ತು ಟ್ರಕ್ ಸುಟ್ಟು ಭಸ್ಮವಾದ ದೃಶ್ಯ ನೋಡಿದರೇ ಅಪಘಾತದ ತೀವ್ರತೆ ಎದ್ದು ಕಾಣುತ್ತಿದೆ. ಇನ್ನೊಂದು ವಿಡಿಯೋದಲ್ಲಿ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸುತ್ತಿರುವುದನ್ನು ಕಾಣಬಹುದು. ಬಸ್ನಲ್ಲಿ ಇರುವವರು ಬಾಪಟ್ಲದಿಂದ ಮತ ಚಲಾಯಿಸಿ ಹಿಂತಿರುಗುತ್ತಿದ್ದರು ಎಂದು ಹೇಳಲಾಗಿದೆ. ರಸ್ತೆ ಅಪಘಾತದ ವೇಳೆ ಬಸ್ನಲ್ಲಿ 42 ಮಂದಿ ಪ್ರಯಾಣಿಸುತ್ತಿದ್ದರು.
ಬಸ್ನಲ್ಲಿ 42 ಮಂದಿ ಪ್ರಯಾಣ
ಖಾಸಗಿ ಬಸ್ ಬಾಪಟ್ಲಾ ಜಿಲ್ಲೆಯ ಚಿನ್ನಗಂಜಾಂನಿಂದ ಹೈದರಾಬಾದ್ಗೆ ಹೋಗುತ್ತಿತ್ತು. ನಂತರ ಹೈದರಾಬಾದ್ - ವಿಜಯವಾಡ ಹೆದ್ದಾರಿಯ ಚಿಲಕಲೂರಿಪೇಟೆ ಮಂಡಲದ ಬಳಿ ಬಸ್ ಟ್ರಕ್ಗೆ ಡಿಕ್ಕಿ ಹೊಡೆದಿದೆ. ಅಪಘಾತ ಸಂಭವಿಸಿದ ಕೂಡಲೇ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ.
5 individuals burned alive, many injured as a private bus collides with a lorry and catches fire in #Chilakaluripet Mandal, #Palnadu district. The bus was carrying 40 passengers returning to #Hyderabad from #Bapatla district after casting their votes. #BusFire #BusAccident pic.twitter.com/rnycRD4jQt
— Glint Insights Media (@GlintInsights) May 15, 2024
ಅಪಘಾತದ ವೇಳೆ ಬಸ್ನಲ್ಲಿ 42 ಮಂದಿ ಪ್ರಯಾಣಿಸುತ್ತಿದ್ದರು ಎಂದು ಗಾಯಾಳುಗಳು ತಿಳಿಸಿದ್ದಾರೆ. ಹೆದ್ದಾರಿಯಲ್ಲಿ ನಡೆದ ಈ ಭೀಕರ ಅಪಘಾತದಲ್ಲಿ ಟ್ರಕ್ ಮತ್ತು ಬಸ್ ಚಾಲಕ ಸಾವನ್ನಪ್ಪಿದ್ದಾರೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸಹ ಪ್ರಾಣ ಕಳೆದುಕೊಂಡಿದ್ದಾರೆ. ಪ್ರಾಣ ಕಳೆದುಕೊಂಡವರಲ್ಲಿ 8 ವರ್ಷದ ಬಾಲಕಿಯೂ ಸೇರಿದ್ದಾಳೆ.
ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಮಾಹಿತಿಯೂ ಬಹಿರಂಗವಾಗಿದೆ. ಮೃತರು ಬಾಪಟ್ಲಾ ಜಿಲ್ಲೆಯ ನಿವಾಸಿಗಳು. ಮೃತರಲ್ಲಿ 35 ವರ್ಷದ ಬಸ್ ಚಾಲಕ ಅಂಜಿ, 65 ವರ್ಷದ ಉಪ್ಪಗುಂದೂರು ಕಾಶಿ, 55 ವರ್ಷದ ಉಪ್ಪಗುಂದೂರು ಲಕ್ಷ್ಮಿ ಮತ್ತು 8 ವರ್ಷದ ಮುಪ್ಪರಾಜು ಖ್ಯಾತಿ ಶಾಸ್ತ್ರಿ ಎಂಬ ಬಾಲಕಿ ಸೇರಿದ್ದಾರೆ. ಉಳಿದ ಇಬ್ಬರ ಬಗ್ಗೆ ಇನ್ನೂ ಮಾಹಿತಿ ಬಹಿರಂಗವಾಗಿಲ್ಲ.
ಈ ಅಪಘಾತದಲ್ಲಿ 32 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚಿಲಕಲೂರಿಪೇಟೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಇದಾದ ಬಳಿಕ ಉತ್ತಮ ಚಿಕಿತ್ಸೆಗಾಗಿ ಗುಂಟೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications