'ಕುದುರೆ ಕಾಲು ಮುರಿದಿದ್ರೆ, ನನ್ನ ಕಾಲು ಮುರಿಯಲಿ'
ನವದೆಹಲಿ, ಮಾರ್ಚ್ 16: ಉತ್ತರಾಖಂಡದ ಬಿಜೆಪಿ ಮುಖಂಡ ಗಣೇಶ್ ಜೋಶಿ ಅವರು ಕುದುರೆ ಕಾಲು ಮುರಿದ ಪ್ರಸಂಗ ಈಗಾಗಲೇ ಓದುಗರಿಗೆ ತಿಳಿದಿರಬಹುದು. ಈಗ ಈ ಬಗ್ಗೆ ಜೋಶಿ ಅವರು 'ಕಾಲಿಗೆ ಕಾಲ್' ಕೊಡಲು ಸಿದ್ಧ ಎಂದು ಘೋಷಿಸಿದ್ದಾರೆ.
ಗಣೇಶ್ ಜೋಶಿ ಅವರು ಏಕಲವ್ಯನ ರೀತಿಯಲ್ಲಿ 'ಬೆರಳ್ ಗೆ ಕೊರಳ್' ನೀಡುವ ಪೈಕಿಯಲ್ಲದಿದ್ದರೂ, ತಮ್ಮ ವಾದ ಮಂಡನೆಯಲ್ಲಿ ರಾಮ್ ಜೇಠ್ಮಲಾನಿ ಅವರನ್ನೇ ಮೀರಿಸಬಲ್ಲರು.

ಎಲ್ಲರ ಕಣ್ಣಿಗೆ ಕಾಣುವಂತೆ ನಡುರಸ್ತೆಯಲ್ಲಿ ಕುದುರೆ ಕಾಲು ಮುರಿದ ಘಟನೆಯ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿತ್ತು. ಆದರೆ, 'ನಾನು ಯಾವ ತಪ್ಪು ಮಾಡಿಲ್ಲ, ನಾನು ತಪ್ಪಿತಸ್ಥ ಎಂದು ಸಾಬೀತಾದರೆ ನನ್ನ ಕಾಲನ್ನು ಕಡಿದು ಹಾಕಿ' ಎಂದು ಜೋಶಿ ಅವರು ಬುಧವಾರ ಘೋಷಣೆ ಹಾಕಿದ್ದಾರೆ.
ಘಟನೆ ಸಮಯದಲ್ಲಿ ನಾನು ಅಲ್ಲಿ ಇರಲೇ ಇಲ್ಲ. ನನ್ನ ವಿರುದ್ಧದ ಸಂಚು ರೂಪಿಸಲಾಗಿದೆ. ನಾನು ಲಾಠಿ ಪ್ರಹಾರ ಮಾಡಿದ್ದು ನೆಲಕ್ಕೆ, ನನ್ನ ಕಾರ್ಯಕರ್ತರನ್ನು ಉಳಿಸಿಕೊಳ್ಳಲು ಮಾತ್ರ. ಆದರೆ, ಕುದುರೆ ಚಿಕಿತ್ಸೆಗೆ ನಾನು ಹಣ ನೀಡುತ್ತೇನೆ ಎಂದು ಜೋಶಿ ಹೇಳಿದ್ದಾರೆ.
ಶಕ್ತಿಮಾನ್ ಹೆಸರಿನ ಕುದುರೆ ಕಾಲನ್ನು ಉಳಿಸಲು ಪ್ರಯತ್ನ ನಡೆಸಲಾಗಿದೆ. ಪೊಲೀಸ್ ಇಲಾಖೆಯಲ್ಲಿ ಕಳೆದ 10 ವರ್ಷದಿಂದ ಶಕ್ತಿಮಾನ್ ಕರ್ತವ್ಯ ನಿರ್ವಹಿಸುತ್ತಿದೆ. ತಮಿಳುನಾಡಿನಿಂದ ಪಶುವೈದ್ಯರನ್ನು ಕರೆಸಲಾಗಿದೆ. ಕೇಂದ್ರ ಸಚಿವೆ ಮೇನಕಾ ಗಾಂಧಿ ಅವರು ಪ್ರತಿಕ್ರಿಯಿಸಿ, ತಕ್ಷಣವೇ ಗಣೇಶ್ ಜೋಶಿ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಆಗ್ರಹಿಸಿದ್ದಾರೆ.
ಸದ್ಯಕ್ಕೆ ಪ್ರಾಣಿಗಳಿಗೆ ಹಿಂಸೆ ನೀಡಿದ ಆರೋಪದ ಮೇಲೆ ಗಣೇಶ್ ಜೋಶಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. (ಒನ್ಇಂಡಿಯಾ ಸುದ್ದಿ)
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications