ಮಾವೋವಾದಿಗಳ ಜತೆ ನಂಟು: ಬಂಧಿತ ವಿಚಾರವಾದಿಗಳಿಗೆ ಸೆ.6ರ ವರೆಗೆ ಗೃಹ ಬಂಧನ
ಮುಂಬೈ, ಆಗಸ್ಟ್ 29: ಮಾವೋವಾದಿಗಳ ಜೊತೆ ನಂಟು ಶಂಕೆ, ಮೋದಿ ಹತ್ಯೆ ಸಂಚು, ಭೀಮಾ ಕೊರೆಗಾಂವ್ ಹಿಂಸಾಚಾರಕ್ಕೆ ಕುಮ್ಮಕ್ಕು ಆರೋಪದಡಿ ಬಂಧಿತರಾಗಿರುವ ಐವರು ವಿಚಾರವಾದಿಗಳಿಗೆ ಸೆಪ್ಟೆಂಬರ್ 6ರವರೆಗೆ ಗೃಹಬಂಧನ ವಿಧಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆಯಡಿ ನಿನ್ನೆ ಹೈದರಾಬಾದ್, ದೆಹಲಿ, ಪುಣೆ, ಚತ್ತೀಸ್ಘಡ, ಮುಂಬೈಗಳಲ್ಲಿ ಒಟ್ಟು ಐವರು ವಿಚಾರವಾದಿಗಳನ್ನು ವಿಶೇಷ ಪೊಲೀಸರು ಬಂಧಿಸಿದ್ದರು. ಇದಕ್ಕೆ ಭಾರಿ ವಿರೋಧ ವ್ಯಕ್ತವಾಗಿತ್ತು.
ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ವಿಶೇಷ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಬಂಧಿತ ಐವರನ್ನು ಸೆಪ್ಟೆಂಬರ್ 6ರವರೆಗೆ ಗೃಹ ಬಂಧನದಲ್ಲಿ ಇರಿಸುವಂತೆ ಹೇಳಿದೆ. ಅಂದೇ ಪ್ರಕರಣದ ಕುರಿತು ವಿಚಾರಣೆ ನಡೆಯಲಿದೆ.

ಆಂಧ್ರ ಪ್ರದೇಶದ ಕ್ರಾಂತಿಕಾರಿ ಕವಿ ವರವರ ರಾವ್. ವಕೀಲೆ, ನಾಗರೀಕ ಹಕ್ಕುಗಳ ಹೋರಾಟಗಾರ್ತಿ ಸುಧಾ ಭಾರಧ್ವಜ್. ವಿರ್ನೋನ್ ಗೋನ್ಸಾಲ್ವೀಸ್, ಅರುಣ್ ಫರೇರಿಯಾ, ಗೌತಮ್ ನಾಲ್ವಾಕ್ಕಾ ಅವರುಗಳನ್ನು ಪೊಲೀಸರು ನಿನ್ನೆ ಬಂಧಿಸಿದ್ದರು.

ವಿಚಾರವಾದಿಗಳ ಬಂಧನದ ಬಗ್ಗೆ ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದೆ. ಹೈದರಾಬಾದ್, ದೆಹಲಿ, ಮುಂಬೈ, ಫೈಸಲಾಬಾದ್, ಪುಣೆಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications