ರಾಷ್ಟ್ರಪತಿ ಸ್ಥಾನಕ್ಕೆ ಕೋವಿಂದ್ ರನ್ನು ಆಯ್ಕೆ ಮಾಡಿದ್ದು ಹೇಗೆ?
ನವೆದೆಹಲಿ, ಜೂನ್ 20 : ಎಲ್ಲರನ್ನು ಅಚ್ಚರಿಗೆ ದೂಡುವಲ್ಲಿ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರು ಯಶಸ್ವಿಯಾಗಿದ್ದಾರೆ.
ಬಿಹಾರದ ರಾಜ್ಯಪಾಲ ರಾಮನಾಥ್ ಕೋವಿಂದ್ ರನ್ನು ಆಯ್ಕೆ ಮಾಡುವ ಮೂಲಕ ಪ್ರತಿಪಕ್ಷಗಳು ಹಾಗಿರಲಿ, ಪಕ್ಷದ ಅನೇಕರಿಗೆ ಅಚ್ಚರಿ ಉಂಟು ಮಾಡಿದರು.
ಕೋವಿಂದ್ ರನ್ನು ಆಯ್ಕೆ ಮಾಡಲು ದಲಿತ ನಾಯಕ ಎಂಬುದು ಒಂದು ಕಾರಣವಾದರೆ, ಮತ್ತೊಂದು ರೈತನೊಬ್ಬನ ಮಗ, ಸಮರ್ಥ ಆಡಳಿತಗಾರ ಎಂಬ ಅಂಶಗಳು ಬೆಳಕಿಗೆ ಬಂದಿವೆ. ಎನ್ಡಿಎ ದಲಿತ ವಿರೋಧಿಯಲ್ಲ ಎಂಬ ಸಂದೇಶವನ್ನು ನೀಡುವ ಮೂಲಕ ಅನೇಕ ಬಾಯಿ ಮುಚ್ಚಿಸಿದ್ದಾರೆ.

ಸಮರ್ಥ ವ್ಯಕ್ತಿಯನ್ನು ಆಯ್ಕೆ ಮಾಡುವ ಮೂಲಕ ಅವಿರೋಧ ಆಯ್ಕೆ ಸಾಧ್ಯತೆಯನ್ನು ಮೋದಿ ಅವರು ಮುಂದಿಟ್ಟಿದ್ದಾರೆ. ಈಗ ಕಾಂಗ್ರೆಸ್ ಪಕ್ಷವು, ಕೋವಿಂದ್ ಅವರ ಆಯ್ಕೆಯನ್ನು ವಿರೋಧಿಸಲಾಗದೆ, ದಲಿತ ಅಭ್ಯರ್ಥಿಯನ್ನೇ ಆಯ್ಕೆ ಮಾಡುವ ಒತ್ತಡಕ್ಕೆ ಒಳಗಾಗಿದೆ.
ಸಮರ್ಥ ಕ್ಯಾಬಿನೆಟ್ -ಮೋದಿ ಬಲ : ರಾಷ್ಟ್ರಪತಿ ಆಯ್ಕೆ ವಿಚಾರದಲ್ಲಿ ಮಿತ್ರಪಕ್ಷಗಳು, ಆರೆಸ್ಸೆಸ್, ಜಾತಿ ಸಮೀಕರಣ, ಮುಂದಿನ ಚುನಾವಣೆ, ವಿಪಕ್ಷಗಳಿಗೆ ಆಘಾತ ಮುಂತಾದ ಅಂಶಗಳನ್ನು ಪರಿಗಣಿಸಿ ಅಮಿತ್ ಶಾ, ನರೇಂದ್ರ ಮೋದಿ ಹಾಗೂ ಮೋಹನ್ ಭಾಗ್ವತ್ ಅವರು ರಾಮ್ ನಾಥ್ ಕೋವಿಂದ್ ಹೆಸರನ್ನು ಅಂತಿಮಗೊಳಿಸಿದ್ದಾರೆ.
ಪಕ್ಷದ ಸದಸ್ಯರ ಅಭಿಪ್ರಾಯ ಸಂಗ್ರಹ: ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ಟಿಸಿ ಗೆಹ್ಲೋಟ್ ಹೆಸರು ಕೇಳಿ ಬಂದಿದೆ. ಆದರೆ, ಅನಿಲ್ ಮಾಧವ್ ಅವರ ನಿಧನದ ನಂತರ ಮೋದಿ ಅವರು ತಮ್ಮ ಕ್ಯಾಬಿನೆಟ್ ಬಗ್ಗೆ ಕಠಿಣ ನಿರ್ಧಾರ ಕೈಗೊಳ್ಳಲು ನಿರ್ಧರಿಸಿದ್ದಾರೆ.
ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗುವ ವ್ಯಕ್ತಿ ಸಮರ್ಥರಿರಬೇಕು ಆದರೆ, ಅವರು ರಾಷ್ಟ್ರಪತಿಯಾಗುವುದರಿಂದ ತಮ್ಮ ಕ್ಯಾಬಿನೆಟ್ ಬಲ ಕುಗ್ಗಬಾರದು ಎಂಬ ಅಂಶ ಮೋದಿ ಅವರನ್ನು ಬಲವಾಗಿ ಕಾಡಿತ್ತು.
ರಕ್ಷಣಾ ಖಾತೆ ತೊರೆದು ಮನೋಹರ್ ಪಾರಿಕ್ಕರ್ ಅವರು ಗೋವಾ ಸಿಎಂ ಆಗಿ ಹೋಗಿದ್ದು ಹಲವರಿಗೆ ಅಚ್ಚರಿ ಮೂಡಿಸಿದರೂ ಅದು ತುಂಬಾ ಲೆಕ್ಕಾಚಾರದ ನಡೆಯಾಗಿತ್ತು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications