ಉದ್ಯಮಿ ವಿಜಯ್ ಮಲ್ಯ ವಿದೇಶಕ್ಕೆ ಹೋಗಿದ್ದು ಹೇಗೆ?
ಬೆಂಗಳೂರು, ಮಾರ್ಚ್ 10 : ಉದ್ಯಮಿ ವಿಜಯ್ ಮಲ್ಯ ಅವರು ಭಾರತದಲ್ಲಿಲ್ಲ. ಅವರು ಲಂಡನ್ನಲ್ಲಿರಬಹುದು ಎಂದು ಅಂದಾಜಿಸಲಾಗಿದೆ. ಮಾರ್ಚ್ 2ರಂದು ಸಾಲ ವಸೂಲಾತಿ ನ್ಯಾಯಾಧೀಕರಣ ಮಲ್ಯ ಅವರ ವಿರುದ್ಧದ ಅರ್ಜಿಯ ವಿಚಾರಣೆ ನಡೆಸುವ ಸಂದರ್ಭದಲ್ಲೇ ಅವರು ವಿದೇಶಕ್ಕೆ ಹಾರಿರಬಹುದು ಎಂದು ಶಂಕಿಸಲಾಗಿದೆ.
ವಿಜಯ್ ಮಲ್ಯ ಅವರ ವಿರುದ್ಧ ಅಕ್ಟೋಬರ್ನಲ್ಲಿಯೇ ಸಿಬಿಐ ಲುಕ್ ಔಟ್ ನೋಟಿಸ್ ಜಾರಿಗೊಳಿಸಿತ್ತು. ಎರಡು ಬಾರಿ ಅವರ ವಿಚಾರಣೆಯನ್ನು ನಡೆಸಿತ್ತು. ಆದರೂ ಅವರು ವಿದೇಶಕ್ಕೆ ಹಾರಿದ್ದು ಹೇಗೆ? ಎಂಬ ಪ್ರಶ್ನೆ ಎದುರಾಗಿದೆ. [ಮಲ್ಯ ಭಾರತದಲ್ಲಿಲ್ಲ, ಲಂಡನ್ನಿಗೆ ಪರಾರಿ!]

ಯಾವುದೇ ವ್ಯಕ್ತಿಯ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿಗೊಳಿಸಿದರೆ, ತನಿಖಾ ಸಂಸ್ಥೆಯ ಒಪ್ಪಿಗೆ ಪಡೆಯದೇ ಅವರು ವಿದೇಶಕ್ಕೆ ತೆರಳುವಂತಿಲ್ಲ. ವಿಜಯ್ ಮಲ್ಯ ಅವರು ರಾಜ್ಯಸಭೆಯ ಸದಸ್ಯರೂ ಹೌದು. ವಿದೇಶಕ್ಕೆ ತೆರಳುವ ಮುನ್ನ ಕಲಾಪಕ್ಕೆ ಬರುವುದಿಲ್ಲ ಎಂದು ಅವರು ಅನುಮತಿ ತೆಗೆದುಕೊಳ್ಳಬೇಕು. [ಮಲ್ಯರಿಂದ ಸಾಲ ವಸೂಲಿ ಕಷ್ಟ ಕಷ್ಟ]
ಆದರೆ, ವಿಜಯ್ ಮಲ್ಯ ಅವರು ಈ ಯಾವುದೇ ನಿಯಮಗಳನ್ನು ಪಾಲಿಸಿಲ್ಲ. ವಿದೇಶಕ್ಕೆ ತೆರಳುವ ದಿನ ಮಲ್ಯ ರಾಜ್ಯಸಭೆ ಕಲಾಪಕ್ಕೆ ಹಾಜರಾಗಿದ್ದರು ಎಂದು ದಾಖಲೆ ಹೇಳುತ್ತಿದೆ. ಆದರೆ, ಸಿಬಿಐ ಕಣ್ಣು ತಪ್ಪಿಸಿ ಮಲ್ಯ ಅವರು ವಿದೇಶಕ್ಕೆ ಹೋಗಿದ್ದು ಹೇಗೆ? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. [ಮಲ್ಯ ಬಾಯಿ ಸೇರಬೇಕಿದ್ದ ತುತ್ತಿಗೆ ನ್ಯಾಯಾಧೀಕರಣ ತಡೆ]
ಸಿಬಿಐ ಅಧಿಕಾರಿಯೊಬ್ಬರು ಒನ್ ಇಂಡಿಯಾಗೆ ನೀಡಿದ ಮಾಹಿತಿಯಂತೆ, 'ವಿಜಯ್ ಮಲ್ಯ ಅವರು ಖಾಸಗಿ ವಿಮಾನದ ಮೂಲಕ ವಿದೇಶಕ್ಕೆ ಹೋಗಿರುವ ಸಾಧ್ಯತೆ ಇದೆ. ಸಿಬಿಐಗೆ ತಿಳಿಯದಂತೆ ಅವರು ದೇಶ ಬಿಟ್ಟು ಹೋಗಿದ್ದು ಹೇಗೆ? ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ' ಎಂದು ಅವರು ಹೇಳಿದ್ದಾರೆ.
ಕೋರ್ಟ್ಗೆ ಹಾಜರಾಗಲಿ : ಸುಪ್ರೀಂಕೋರ್ಟ್ ಮುಂದೆ ವಾದ ಮಂಡನೆ ಮಾಡುವಾಗ ಅರ್ಟಾನಿ ಜನರಲ್ ಅವರು ವಿಜಯ್ ಮಲ್ಯ ಅವರು ಪಾಸ್ ಪೋರ್ಟ್ ಸಮೇತ, ಕೋರ್ಟ್ ಮುಂದೆ ಹಾಜರಾಗುವಂತೆ ಸೂಚನೆ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಮಲ್ಯ ಲಂಡನ್ನಲ್ಲಿರಬಹುದು ಎಂದು ಶಂಕಿಸಲಾಗಿದೆ. ವಿವಿಧ ತನಿಖಾ ಸಂಸ್ಥೆಗಳು ಅವರಿರುವ ನಿಖರವಾದ ಜಾಗವನ್ನು ತಿಳಿಯಲು ಪ್ರಯತ್ನ ನಡೆಸುತ್ತಿವೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications