ಮೋದಿ ಸರಕಾರದ 'ಕೊರೊನಾ ನಿರ್ವಹಣೆ' ತೃಪ್ತಿ ತಂದಿದೆಯೇ? ಸಮೀಕ್ಷಾ ಫಲಿತಾಂಶ
ಜಗತ್ತಿಗೆ ಮಾರಿಯಾಗಿ ಪರಿಣಮಿಸಿರುವ ಕೊರೊನಾ, ಭಾರತವನ್ನೂ ಬಿಟ್ಟಿಲ್ಲ. ಇದುವರೆಗೆ, ದೇಶದಲ್ಲಿ 718 ಜನ ಈ ವೈರಸ್ ನಿಂದ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಲ್ಲಿ ಅತಿಹೆಚ್ಚು ಜನ ಈ ಸೋಂಕಿಗೆ ಬಲಿಯಾಗಿದ್ದಾರೆ.
ನರೇಂದ್ರ ಮೋದಿ ಸರಕಾರ ಕೊರೊನಾ ನಿರ್ವಹಣೆಯನ್ನು ಸರಿಯಾಗಿ ನಿಭಾಯಿಸಿದೆಯೇ ಎನ್ನುವ ಸಮೀಕ್ಷೆಯನ್ನು ನಡೆಸಲಾಗಿತ್ತು. ಕಳೆದ ಹತ್ತು ದಿನಗಳ ಅವಧಿಯಲ್ಲಿ ನಡೆಸಲಾದ ಎರಡನೇ ಸಮೀಕ್ಷೆ ಇದಾಗಿದೆ.
ಹಿಂದಿನ ಸಮೀಕ್ಷೆಗೆ ಹೋಲಿಸಿದರೆ, ಗುರುವಾರ (ಏ 23) ಬಿಡುಗಡೆಯಾದ ಸಮೀಕ್ಷಾ ವರದಿಯಲ್ಲಿ, ಮೋದಿ ಸರಕಾರದ ನಿರ್ವಹಣೆ ತೃಪ್ತಿ ತಂದಿದೆ ಎಂದು ಅಭಿಪ್ರಾಯ ಪಟ್ಟವರ ಸಂಖ್ಯೆ ಹೆಚ್ಚಿದೆ.
ಮೊದಲು ಮೋದಿ ಸರಕಾರ, ಮಾರ್ಚ್ 25ರಂದು ದೇಶವ್ಯಾಪಿ 21 ದಿನಗಳ ಲಾಕ್ ಡೌನ್ ಘೋಷಿಸಿತ್ತು. ಇದಾದ ನಂತರ, ಎರಡನೇ ಹಂತದಲ್ಲಿ ಮೇ ಮೂರರವರೆಗೆ ಲಾಕ್ ಡೌನ್ ವಿಸ್ತರಿಸಿದೆ. ಸಮೀಕ್ಷಾ ಫಲಿತಾಂಶ ಇಂತಿದೆ:

ಮೋದಿ ಸರಕಾರದ ನಿರ್ವಹಣೆ
ನೇತಾ ಆಪ್ , ಏಪ್ರಿಲ್ ಎರಡನೇ ವಾರದಲ್ಲಿ ಸಮೀಕ್ಷೆ ನಡೆಸಿ, ಏಪ್ರಿಲ್ ಹದಿನಾಲ್ಕಕ್ಕೆ ವರದಿಯನ್ನು ಪ್ರಕಟಿಸಿತ್ತು. ಸುಮಾರು ಐವತ್ತು ಸಾವಿರ ಜನ ಈ ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ಶೇ. 71ರಷ್ಟು ಜನ, ಮೋದಿ ಸರಕಾರದ ನಿರ್ವಹಣೆ ತೃಪ್ತಿ ತಂದಿದೆ ಎನ್ನುವ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು.

ಹೆಚ್ಚಿನ ಸಾವುನೋವು ತಪ್ಪಿತು
ಈ ಸಮೀಕ್ಷೆಯಲ್ಲಿ ಭಾಗವಹಿಸಿದ್ದವರು, ಪರಿಸ್ಥಿತಿ ಹತೋಟಿ ತಪ್ಪುವ ಮುನ್ನವೇ ಲಾಕ್ ಡೌನ್ ಘೋಷಿಸಿದ್ದರಿಂದ, ಹೆಚ್ಚಿನ ಸಾವುನೋವು ತಪ್ಪಿತು ಎನ್ನುವ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. 23ರಾಜ್ಯಗಳಲ್ಲಿ ಏಪ್ರಿಲ್ 11-12ರ ಅವಧಿಯಲ್ಲಿ ನಡೆಸಲಾದ ಸರ್ವೇ ಇದಾಗಿತ್ತು.

ಸಿವೋಟರ್ ಜಂಟಿಯಾಗಿ ಸಮೀಕ್ಷೆ
ಐಎಎನ್ಎಸ್ ಮತ್ತು ಸಿವೋಟರ್ ಜಂಟಿಯಾಗಿ ಸಮೀಕ್ಷೆಯೊಂದನ್ನು ನಡೆಸಿದೆ. ಮಾರ್ಚ್ 16ರಿಂದ ಏಪ್ರಿಲ್ 21ರ ಅವಧಿಯಲ್ಲಿ ನಡೆಸಿದ ಸಮೀಕ್ಷೆ ಇದಾಗಿದೆ. ಲಾಕ್ ಡೌನ್ ಘೋಷಣೆ ಮಾಡಿದ ಆರಂಭದಲ್ಲಿ ಎಷ್ಟು ಜನರು ಮೋದಿ ಸರಕಾರದ ನಿರ್ವಹಣೆಯ ಬಗ್ಗೆ ತೃಪ್ತಿ ಹೊಂದಿದ್ದರೋ, ಅದು ಏಪ್ರಿಲ್ 21ರ ವೇಳೆ ಶೇ. 15ರಷ್ಟು ಜಾಸ್ತಿಯಾಗಿದೆ.

ಶೇ. 93.5 ಜನ ಮೋದಿ ಸರಕಾರದ ಕೊರೊನಾ ನಿರ್ವಹಣೆಯ ಬಗ್ಗೆ ಖುಷಿ
ತಾಜಾ ಸಮೀಕ್ಷೆಯ ಪ್ರಕಾರ ಶೇ. 93.5 ಜನ ಮೋದಿ ಸರಕಾರದ ಕೊರೊನಾ ನಿರ್ವಹಣೆಯ ಖುಷಿ ಪಟ್ಟಿದ್ದಾರೆ. ಸರಕಾರದ ನಿರ್ವಹಣೆಯ ಬಗ್ಗೆ ಸಂಪೂರ್ಣ ತೃಪ್ತಿ ಇದೆ ಎಂದು ಸಮೀಕ್ಷಾ ವರದಿಯಲ್ಲಿ ಬಂದ ಫಲಿತಾಂಶ.
-
ಅಪ್ಪನ ಸಕ್ಕರೆ ಚಟ ಬಿಡಿಸಲು ಮೋದಿ ಮೊರೆ ಹೋದ ಯುವಕ: ವಿಡಿಯೋ Viral, ಪ್ರಧಾನಿಯಿಂದ ಬಂತು ಅಚ್ಚರಿಯ ರಿಪ್ಲೈ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್












Click it and Unblock the Notifications