ಎನ್ಜಿಸಿ ತಂತ್ರಜ್ಞಾನದಿಂದ ಕಪ್ಪು ಹಣದ ಪತ್ತೆ ಹೇಗೆ?
ಹೊಸದಾಗಿ ಚಲಾವಣೆಗೆ ಬರಲಿರುವ 500 ರು. ಮತ್ತು 2000 ರು. ನೋಟುಗಳ ಬಗ್ಗೆ ಪ್ರತಿಯೊಬ್ಬರೂ ತಿಳಿಯಲೇಬೇಕು. ನಕಲಿ ನೋಟುಗಳ ಚಲಾವಣೆ ತಪ್ಪಿಸಲು ಯಾವ ತಂತ್ರಜ್ಞಾನವನ್ನು ಅಳವಡಿಸಲಾಗಿದೆ ಎಂಬುದನ್ನು ಕೂಡ ಅರಿತುಕೊಳ್ಳಬೇಕು.
ನವದೆಹಲಿ, ನವೆಂಬರ್ 08 : ಬೆಳಗಿನ ಹಬ್ಬ ದೀಪಾವಳಿಯ ನಂತರ ದೇಶದ ಪ್ರತಿಯೊಬ್ಬ ಪ್ರಜೆ 'ಪ್ರಾಮಾಣಿಕತೆಯ ಉತ್ಸವ'ದಲ್ಲಿ ಪಾಲ್ಗೊಳ್ಳಬೇಕು. ಭ್ರಷ್ಟಾಚಾರ ಮಟ್ಟಹಾಕಬೇಕಿದ್ದರೆ, ಕಪ್ಪು ಹಣಕ್ಕೆ ಕಡಿವಾಣ ಹಾಕಬೇಕಿದ್ದರೆ ಈ 'ಮಹಾಯಜ್ಞ'ದಲ್ಲಿ ಪ್ರತಿಯೊಬ್ಬರೂ ಭಾಗಿಯಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಕರೆ ನೀಡಿದ್ದಾರೆ.
ಆದರೆ, ಕಪ್ಪು ಹಣಕ್ಕೆ ಕಡಿವಾಣ ಹಾಕುವುದು ಹೇಗೆ? ಇದರ ಮೊದಲ ಭಾಗವಾಗಿ ನವೆಂಬರ್ 8ರ ಮಧ್ಯರಾತ್ರಿಯಿಂದ 500 ಮತ್ತು 1000 ರು. ನೋಟುಗಳ ಚಲಾವಣೆಯನ್ನು ನಿಷೇಧಿಸಿರುವುದು. ಎರಡನೇ ಭಾಗವಾಗಿ ಹೊಸ 500 ರು. ಮತ್ತು 2000 ರು. ನೋಟುಗಳು ನವೆಂಬರ್ 10ರಿಂದ ಚಲಾವಣೆಗೆ ಬರಲಿವೆ. [ಎಲ್ಲರ ಕೈಲೂ ದೊಡ್ಡ ನೋಟು , ದೇಶದೆಲ್ಲೆಡೆ ಎಟಿಎಂಗಳಲ್ಲಿ ನೂಕು ನುಗ್ಗಲು]
ಈಗ ಹೊಸದಾಗಿ ಚಲಾವಣೆಗೆ ಬರಲಿರುವ 500 ರು. ಮತ್ತು 2000 ರು. ನೋಟುಗಳ ಬಗ್ಗೆ ಪ್ರತಿಯೊಬ್ಬರೂ ತಿಳಿಯಲೇಬೇಕು. ಹೊಸ ನೋಟುಗಳು ಯಾವ ರೀತಿ ಕಾಣುತ್ತವೆ ಮತ್ತು ನಕಲಿ ನೋಟುಗಳ ಚಲಾವಣೆ ತಪ್ಪಿಸಲು ಯಾವ ತಂತ್ರಜ್ಞಾನವನ್ನು ಅಳವಡಿಸಲಾಗಿದೆ ಎಂಬುದನ್ನು ಕೂಡ ಅರಿತುಕೊಳ್ಳಬೇಕು. ಈ ತಂತ್ರಜ್ಞಾನದ ಅಳವಡಿಕೆಯ ಬಗ್ಗೆ ಆರ್ಬಿಐ ಅಧಿಕೃತವಾಗಿ ಇನ್ನೂ ಏನೂ ಹೇಳಿಲ್ಲ. ಆದರೆ, ಸಾಧ್ಯತೆ ಖಂಡಿತ ಇದೆ. [ನೋಟಿಗೆ ಕಡಿವಾಣ : ಎಲ್ಲರೂ ತಿಳಿಯಬೇಕಾಗಿರುವುದೇನು?]

ಈ ಹೊಸ ನೋಟುಗಳಲ್ಲಿ ಎನ್ಜಿಸಿ ತಂತ್ರಜ್ಞಾನವನ್ನು ಅಳವಡಿಸಲಾಗಿರುತ್ತದೆ.
* ಹೊಸ 2000 ರು. ನೋಟುಗಳಲ್ಲಿ ನ್ಯಾನೋ ಜಿಪಿಎಸ್ ಚಿಪ್ ಎಂಬೆಡ್ ಮಾಡಲಾಗಿರುತ್ತದೆ.
* ಎನ್ಜಿಸಿ ತಂತ್ರಜ್ಞಾನ ಸುರಕ್ಷಿತವಾಗಿದ್ದು, ದುರ್ಬಳಕೆ ಮಾಡುವುದು ಕಷ್ಟಸಾಧ್ಯ. [ಹೊಸ 500 ಹಾಗೂ 1,000 ನೋಟು ನೋಡಲು ಹೇಗಿದೆ?]
* ಸೆಟಲೈಟ್ ನಿಂದ ಸಿಗ್ನಲ್ ಕಳುಹಿಸಿದರೆ ಎನ್ಜಿಸಿ ಸಿಗ್ನಲ್ ಅನ್ನು ಪ್ರತಿಫಲಿಸುತ್ತದೆ. ಇದು ಸೀರಿಯಲ್ ನಂಬರ್ ಜೊತೆಗೆ ನೋಟು ಇರುವ ಪ್ರದೇಶದ ಮಾಹಿತಿಯನ್ನೂ ನೀಡುತ್ತದೆ. ಈ ತಂತ್ರಜ್ಞಾನ ಬಳಸಿ ಯಾವ ಪ್ರದೇಶದಲ್ಲಿ ನಿಖರವಾಗಿ ಎಷ್ಟು ಹಣ, ಯಾವ ಪ್ರದೇಶದಲ್ಲಿ ಇಡಲಾಗಿದೆ ಎಂಬುದನ್ನು ಪತ್ತೆ ಹಚ್ಚಲು ಸಾಧ್ಯ.
* ಯಾವುದೇ ಪ್ರದೇಶದಲ್ಲಿ ಅಪಾರ ಪ್ರಮಾಣದಲ್ಲಿ ಹಣ ಕೂಡಿಟ್ಟಿದ್ದರೆ, ಎನ್ಜಿಸಿ ತಂತ್ರಜ್ಞಾನದ ಬಳಕೆಯ ಮೂಲಕ ಸಿಗ್ನಲ್ ದೊರೆಯುತ್ತದೆ. ಈ ಮಾಹಿತಿಯನ್ನು ಆದಾಯ ತೆರಿಗೆ ಇಲಾಖೆಗೆ ತಿಳಿಸಲು ಸಹಾಯವಾಗುತ್ತದೆ. ಇನ್ನು ಕಪ್ಪು ಹಣವನ್ನು ಕೂಡಿಡುವ ಮಾತೆಲ್ಲಿ ಬಂತು? ಇದರಿಂದ ಕಪ್ಪು ಹಣಕ್ಕೆ ಕಡಿವಾಣ ಹಾಕಿದಂತಾಗುತ್ತದೆ. [ನಕಲಿ ನೋಟು ಜಾಲ ಮಟ್ಟಹಾಕಿದ ನರೇಂದ್ರ ಮೋದಿ]
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications