ಪಠಾಣ್ ಕೋಟ್ ವಾಯುನೆಲೆಗೆ ಉಗ್ರರು ನುಗ್ಗಿದ್ದು ಹೇಗೆ?
ನವದೆಹಲಿ, ಜನವರಿ 02 : ಪಂಜಾಬ್ನ ಪಠಾಣ್ ಕೋಟ್ ವಾಯುನೆಲೆ ಮೇಲೆ ಶನಿವಾರ ಮುಂಜಾನೆ ಉಗ್ರರು ದಾಳಿ ಮಾಡಿದ್ದಾರೆ. ಮುಂಜಾನೆ 3 ಗಂಟೆಗೆ ಆರಂಭವಾದ ಉಗ್ರರ ಜೊತೆಗಿನ ಗುಂಡಿನ ಚಕಮಕಿ ಇನ್ನೂ ಮುಂದುವರೆದಿದೆ.
ಶನಿವಾರ ಮುಂಜಾನೆ 3 ಗಂಟೆಗೆ ವಾಯುನೆಲೆಗೆ ನುಗ್ಗಲು ಯತ್ನಿಸಿದ ಉಗ್ರನನ್ನು ಭದ್ರತಾ ಪಡೆಗಳು ಹತ್ಯೆ ಮಾಡುವ ಮೂಲಕ ಗುಂಡಿನ ಚಕಮಕಿ ಆರಂಭವಾಯಿತು. ಸುಮಾರು 6 ಮಂದಿ ಶಸ್ತ್ರ ಸಜ್ಜಿತ ಯೋಧರು ವಾಯುನೆಲೆಗೆ ನುಗ್ಗಿದ್ದಾರೆ ಎಂದು ಅಂದಾಜಿಸಲಾಗಿದೆ. [ವಾಯುನೆಲೆ ಮೇಲೆ ಉಗ್ರರ ದಾಳಿ]

10 ರಿಂದ 15 ಅಡಿ ಎತ್ತರವಿರುವ ಗೋಡೆಯನ್ನು ಹಾರಿ ವಾಯುನೆಲೆಗೆ ಪ್ರವೇಶಿಸಲು ಉಗ್ರ ಪ್ರಯತ್ನ ನಡೆಸುತ್ತಿರುವಾಗ ಸಂದರ್ಭದಲ್ಲಿ ಭದ್ರತಾ ಪಡೆಗಳು ಗುಂಡು ಹಾರಿಸಿ ಆತನನ್ನು ಹತ್ಯೆ ಮಾಡಿದರು. ತಕ್ಷಣ ಉಳಿದ ಉಗ್ರರು ಭದ್ರತಾ ಪಡೆಗಳತ್ತ ಗುಂಡು ಹಾರಿಸುತ್ತಾ ವಾಯುನೆಲೆಗೆ ನುಗ್ಗಿ ಅಡಗಿ ಕುಳಿತರು.
ವಾಯುನೆಲೆಯ ಆಡಳಿತ ಕಚೇರಿಗೆ ನುಗ್ಗಲು ಉಗ್ರರು ನಡೆಸಿದ ಪ್ರಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿದವು. ಉಗ್ರರು ನುಗ್ಗಿರುವ ಮಾಹಿತಿಯನ್ನು ತಕ್ಷಣ ಸೇನೆಗೆ ತಿಳಿಸಲಾಯಿತು. ಸೇನೆ ಸಂಪೂರ್ಣ ಪ್ರದೇಶವನ್ನು ತಮ್ಮ ವಶಕ್ಕೆ ತೆಗೆದುಕೊಂಡು ಉಗ್ರರನ್ನು ಮಟ್ಟಹಾಕುವ ಕಾರ್ಯಾಚರಣೆಯನ್ನು ಆರಂಭಿಸಿದರು.
SWAT team at #Pathankot attack site; combing operations underway (pictures deferred by unspecified time) pic.twitter.com/fFG4b6tCye
— ANI (@ANI_news) January 2, 2016 ವಾಯುನೆಲೆಯ ಸುತ್ತಲಿನ ಗೇಟ್ಗಳ ಮೂಲಕ 6 ಉಗ್ರರು ಒಳ ನುಗ್ಗಿರಬಹುದು ಎಂದು ಶಂಕಿಸಲಾಗಿದೆ. ಇದುವರೆಗಿನ ಕಾರ್ಯಾಚರಣೆ ವೇಳೆ 4 ಉಗ್ರರನ್ನು ಹೊಡೆದುರುಳಿಸಲಾಗಿದೆ. ಇನ್ನೂ ಗುಂಡಿನ ಚಕಮಕಿ ನಡೆಯುತ್ತಿದ್ದು. ಸ್ವ್ಯಾಟ್ ತಂಡ (Special Weapons and Tactics Team) ಉಗ್ರರಿಗಾಗಿ ಶೋಧ ನಡೆಸುತ್ತಿದೆ. [ಪಿಟಿಐ ಚಿತ್ರ]
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications