ಪಠಾಣ್ ಕೋಟ್ ವಾಯುನೆಲೆಗೆ ಉಗ್ರರು ನುಗ್ಗಿದ್ದು ಹೇಗೆ?
ನವದೆಹಲಿ, ಜನವರಿ 02 : ಪಂಜಾಬ್ನ ಪಠಾಣ್ ಕೋಟ್ ವಾಯುನೆಲೆ ಮೇಲೆ ಶನಿವಾರ ಮುಂಜಾನೆ ಉಗ್ರರು ದಾಳಿ ಮಾಡಿದ್ದಾರೆ. ಮುಂಜಾನೆ 3 ಗಂಟೆಗೆ ಆರಂಭವಾದ ಉಗ್ರರ ಜೊತೆಗಿನ ಗುಂಡಿನ ಚಕಮಕಿ ಇನ್ನೂ ಮುಂದುವರೆದಿದೆ.
ಶನಿವಾರ ಮುಂಜಾನೆ 3 ಗಂಟೆಗೆ ವಾಯುನೆಲೆಗೆ ನುಗ್ಗಲು ಯತ್ನಿಸಿದ ಉಗ್ರನನ್ನು ಭದ್ರತಾ ಪಡೆಗಳು ಹತ್ಯೆ ಮಾಡುವ ಮೂಲಕ ಗುಂಡಿನ ಚಕಮಕಿ ಆರಂಭವಾಯಿತು. ಸುಮಾರು 6 ಮಂದಿ ಶಸ್ತ್ರ ಸಜ್ಜಿತ ಯೋಧರು ವಾಯುನೆಲೆಗೆ ನುಗ್ಗಿದ್ದಾರೆ ಎಂದು ಅಂದಾಜಿಸಲಾಗಿದೆ. [ವಾಯುನೆಲೆ ಮೇಲೆ ಉಗ್ರರ ದಾಳಿ]

10 ರಿಂದ 15 ಅಡಿ ಎತ್ತರವಿರುವ ಗೋಡೆಯನ್ನು ಹಾರಿ ವಾಯುನೆಲೆಗೆ ಪ್ರವೇಶಿಸಲು ಉಗ್ರ ಪ್ರಯತ್ನ ನಡೆಸುತ್ತಿರುವಾಗ ಸಂದರ್ಭದಲ್ಲಿ ಭದ್ರತಾ ಪಡೆಗಳು ಗುಂಡು ಹಾರಿಸಿ ಆತನನ್ನು ಹತ್ಯೆ ಮಾಡಿದರು. ತಕ್ಷಣ ಉಳಿದ ಉಗ್ರರು ಭದ್ರತಾ ಪಡೆಗಳತ್ತ ಗುಂಡು ಹಾರಿಸುತ್ತಾ ವಾಯುನೆಲೆಗೆ ನುಗ್ಗಿ ಅಡಗಿ ಕುಳಿತರು.
ವಾಯುನೆಲೆಯ ಆಡಳಿತ ಕಚೇರಿಗೆ ನುಗ್ಗಲು ಉಗ್ರರು ನಡೆಸಿದ ಪ್ರಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿದವು. ಉಗ್ರರು ನುಗ್ಗಿರುವ ಮಾಹಿತಿಯನ್ನು ತಕ್ಷಣ ಸೇನೆಗೆ ತಿಳಿಸಲಾಯಿತು. ಸೇನೆ ಸಂಪೂರ್ಣ ಪ್ರದೇಶವನ್ನು ತಮ್ಮ ವಶಕ್ಕೆ ತೆಗೆದುಕೊಂಡು ಉಗ್ರರನ್ನು ಮಟ್ಟಹಾಕುವ ಕಾರ್ಯಾಚರಣೆಯನ್ನು ಆರಂಭಿಸಿದರು.
SWAT team at #Pathankot attack site; combing operations underway (pictures deferred by unspecified time) pic.twitter.com/fFG4b6tCye
— ANI (@ANI_news) January 2, 2016 ವಾಯುನೆಲೆಯ ಸುತ್ತಲಿನ ಗೇಟ್ಗಳ ಮೂಲಕ 6 ಉಗ್ರರು ಒಳ ನುಗ್ಗಿರಬಹುದು ಎಂದು ಶಂಕಿಸಲಾಗಿದೆ. ಇದುವರೆಗಿನ ಕಾರ್ಯಾಚರಣೆ ವೇಳೆ 4 ಉಗ್ರರನ್ನು ಹೊಡೆದುರುಳಿಸಲಾಗಿದೆ. ಇನ್ನೂ ಗುಂಡಿನ ಚಕಮಕಿ ನಡೆಯುತ್ತಿದ್ದು. ಸ್ವ್ಯಾಟ್ ತಂಡ (Special Weapons and Tactics Team) ಉಗ್ರರಿಗಾಗಿ ಶೋಧ ನಡೆಸುತ್ತಿದೆ. [ಪಿಟಿಐ ಚಿತ್ರ]
-
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಇಸ್ರೇಲ್-ಯುಎಸ್ ಜಂಟಿ ದಾಳಿ ಅಬ್ಬರ: ಇರಾನ್ಗೆ ಉತ್ತರಾಧಿಕಾರಿ ನೇಮಕ, ಇಂದಿನ ಪ್ರಮುಖಾಂಶಗಳು ಇಲ್ಲಿವೆ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications