ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಈ ರಾಜ್ಯದಲ್ಲಿ ಉದ್ಯೋಗಿಗಳಿಗೆ ರಜೆಯೋ ರಜೆ!
ದೀಸ್ಪುರ್, ಡಿಸೆಂಬರ್ 09: ಸಾಮಾನ್ಯವಾಗಿ ಸರ್ಕಾರಿ ಉದ್ಯೋಗಿಗಳು ತಮ್ಮ ಪ್ರೀತಿಪಾತ್ರರ ಜೊತೆಗೆ ಗುಣಮಟ್ಟದ ಸಮಯವನ್ನು ಕಳೆಯುವುದರ ಜೊತೆಗೆ ಕಠಿಣ ಪರಿಶ್ರಮಕ್ಕಾಗಿ ಸಮಯವನ್ನು ವಿನಿಯೋಗಿಸುವುದು ಅಷ್ಟೇ ಮುಖ್ಯವಾಗಿರುತ್ತದೆ. ಈ ಹಿನ್ನೆಲೆ ಅಸ್ಸಾಂ ಸರ್ಕಾರವು ಈಗ ತನ್ನ ರಾಜ್ಯದ ಸರ್ಕಾರಿ ಉದ್ಯೋಗಿಗಳಿಗೆ ತಮ್ಮ ಪೋಷಕರೊಂದಿಗೆ ಸಮಯ ಕಳೆಯಲು ವಿಶೇಷ ಕ್ಯಾಶುಯಲ್ ರಜೆಯನ್ನು ನೀಡುತ್ತಿದೆ.
ಸರ್ಕಾರಿ ಉದ್ಯೋಗಿಗಳು ಮುಂದಿನ ವರ್ಷ ಫೆಬ್ರವರಿ 9 ಮತ್ತು 10 ರಂದು ಎರಡು ದಿನಗಳ ವಿಶೇಷ ರಜೆ ಪಡೆಯಬಹುದು ಎಂದು ಅಧಿಕೃತ ಪ್ರಕಟಣೆ ಶುಕ್ರವಾರ ತಿಳಿಸಿದೆ. ಈ ವಿಶೇಷ ರಜೆಗಳನ್ನು ಅನ್ವಯವಾಗಬೇಕಾದರೆ ಮತ್ತು ಪಡೆಯಲು ವಿವರವಾದ ನಿಯಮಗಳು ಮತ್ತು ವಿಧಾನಗಳನ್ನು ವಿಶೇಷ ವೆಬ್ ಪೋರ್ಟಲ್ ಮೂಲಕ ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.
ಈ ವಿಶೇಷ ರಜೆಗಳನ್ನು ಮುಂದಿನ ಎರಡು ದಿನಗಳಲ್ಲಿ ಎರಡನೇ ಶನಿವಾರ ಮತ್ತು ಭಾನುವಾರದ ನಿಯಮಿತ ರಜಾದಿನಗಳೊಂದಿಗೆ ಜೋಡಣೆ ಮಾಡಲಾಗಿದೆ. ಹೀಗಾಗಿ ಉದ್ಯೋಗಿಗಳಿಗೆ ಒಟ್ಟು ನಾಲ್ಕು ದಿನಗಳ ಕಾಲ ರಜೆ ಸಿಗಲಿದೆ.

ಸಿಎಲ್ ಬಗ್ಗೆ ಘೋಷಿಸಿದ್ದ ಸಿಎಂ ಹಿಮಂತ್ ಶರ್ಮಾ:
ಕಳೆದ 2021ರಲ್ಲಿ ಅಧಿಕಾರ ವಹಿಸಿಕೊಂಡ ನಂತರ ಸ್ವಾತಂತ್ರ್ಯ ದಿನದಂದು ತಮ್ಮ ಮೊದಲ ಭಾಷಣದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ರಾಜ್ಯ ಸರ್ಕಾರಿ ನೌಕರರು ತಮ್ಮ ಪೋಷಕರು ಮತ್ತು ಮಾವಂದಿರೊಂದಿಗೆ ಸಮಯ ಕಳೆಯಲು ಕ್ಯಾಶುವಲ್ ರಜೆಯ ಬಗ್ಗೆ ಘೋಷಿಸಿದ್ದರು. ನಂತರ ರಾಜ್ಯ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆಯಲಾಯಿತು. ಅಂತಹ ಮೊದಲ ರಜೆಗಳನ್ನು ಈ ವರ್ಷ ಜನವರಿ 6 ಮತ್ತು 7ರಂದು ನೀಡಲಾಗಿದೆ.
ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರನ್ನು ಹೊರತುಪಡಿಸಿ ಸಚಿವರು ಸೇರಿದಂತೆ ಎಲ್ಲರೂ ಈ ರಜೆಗಳನ್ನು ಪಡೆಯಬಹುದು ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications