ಉಗ್ರ ಮೊಹಮ್ಮದ್ ನವೀದ್ ಲಷ್ಕರ್ ಸೇರಿದ್ದು ಹೇಗೆ?
ಬೆಂಗಳೂರು, ಆಗಸ್ಟ್ 7 : 'ನಾನು ಕೊಲ್ಲಲು ಬಂದಿದ್ದೆ, ಸಾಯಲು ಅಲ್ಲ' ಎಂದು ಹೇಳುತ್ತಿರುವ ಉದಾಂಪುರ್ನಲ್ಲಿ ಸೆರೆಸಿಕ್ಕ ಉಗ್ರ ಮೊಹಮ್ಮದ್ ನವೀದ್ ಪಾಕಿಸ್ತಾನದವನು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಲೋಕಸಭೆಯಲ್ಲಿ ಹೇಳಿಕೆ ನೀಡಿದ್ದಾರೆ. ಆದರೆ, ಪಾಕಿಸ್ತಾನ ಮಾತ್ರ ಇದಕ್ಕೆ ಸಾಕ್ಷಿ ಕೇಳುತ್ತಿದೆ.
ಸೆರೆಸಿಕ್ಕ ದಿನದಿಂದ ತನ್ನ ಹೆಸರು ಕಾಸಿಂ, ಉಸ್ಮಾನ್ ಖಾನ್, ಮೊಹಮ್ಮದ್ ನವೀದ್ ಎಂದು ಹೇಳಿದ್ದ ಉಗ್ರನ ನಿಜವಾದ ಹೆಸರು ಮೊಹಮ್ಮದ್ ನವೀದ್ ಎಂಬುದು ಖಚಿತವಾಗಿದೆ. 'ಮೊಹಮ್ಮದ್ ನವೀದ್ ನನ್ನ ಮಗ, ನಾನೊಬ್ಬ ನತದೃಷ್ಟ ತಂದೆ' ಎಂದು ಆತನ ತಂದೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ['ನಾನು ಕೊಲ್ಲಲು ಬಂದಿದ್ದೆ, ಸಾಯಲು ಅಲ್ಲ']
ಉದಾಂಪುರ್ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಗ್ಗೆ ರಾಷ್ಟ್ರೀಯ ತನಿಖಾ ದಳ ತನಿಖೆ ನಡೆಸುತ್ತಿದೆ. ಮೊಹಮ್ಮದ್ ನವೀದ್ನನ್ನು ಹೆಚ್ಚಿನ ತನಿಖೆಗಾಗಿ ದೆಹಲಿಗೆ ಕರೆದುಕೊಂಡು ಹೋಗುವ ಸಾಧ್ಯತೆ ಇದೆ. ನವೀದ್ ಲಷ್ಕರ್ ಎ ತೋಯ್ಬಾ ಸಂಘಟನೆಗೆ ಸೇರಿದವನು ಎಂದು ತಿಳಿದುಬಂದಿದೆ. ಆದರೆ, ಆತ ಲಷ್ಕರ್ ಸೇರಿದ್ದು ಹೇಗೆ? ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ....[ನವೀದ್ ಬಾಲಾಪರಾಧಿ ಎಂದು ಸಾಬೀತಾದರೆ?]

ನವೀದ್ ತಂದೆಗೆ ಮೂರು ಜನರ ಮಕ್ಕಳು
ಪಾಕಿಸ್ತಾನದ ಫೈಸ್ಲಾಬಾದ್ ಮೂಲದನಾದ ನವೀಬ್ ತಂದೆ ಯೂಸೂಫ್ ಮೊಹಮದ್. ನವೀದ್ಗೆ ಇಬ್ಬರು ಸಹೋದರರು. ಒಬ್ಬರು ಉಪನ್ಯಾಸಕರಾಗಿದ್ದರೆ, ಮತ್ತೊಬ್ಬರು ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದಾರೆ. ಅವರ ತಂದೆಯೇ ಹೇಳಿದಂತೆ 'ನಾನೊಬ್ಬ ನತದೃಷ್ಟ ತಂದೆ' ಅವರ ಮುಂದೆ ಬೇರೆ ಆಯ್ಕೆಗಳಿರಲಿಲ್ಲ. ಆದ್ದರಿಂದ ನವೀದ್ ಬಂದೂಕು ಹಿಡಿದಿದ್ದ.

ಲಷ್ಕರ್ ಉಗ್ರರು ಮನೆಗೆ ಬಂದಿದ್ದರು
ವಿಚಾರಣೆ ವೇಳೆ ನವೀದ್ ಹೇಳಿದಂತೆ ಲಷ್ಕರ್ ಉಗ್ರರು ಕಳೆದ ಎರಡು ವರ್ಷಗಳಲ್ಲಿ ಹಲವಾರು ಬಾರಿ ಅವರ ಮನೆಗೆ ಬಂದಿದ್ದರು. ಮಕ್ಕಳನ್ನು ಕಳಿಸುವಂತೆ ಯೂಸೂಫ್ ಮೊಹಮ್ಮದ್ಗೆ ಹೇಳಿದ್ದರು. ಆದರೆ, ಅವರು ನಿರಾಕರಿಸಿದಾಗ ಬೆದರಿಕೆ ಹಾಕಿದ್ದರು. ಆದ್ದರಿಂದ ಅವರ ಮುಂದೆ ಬೇರೆ ಆಯ್ಕೆಗಳಿರಲಿಲ್ಲ.

ಲಷ್ಕರ್ ನೇಮಕಾತಿ ಮಾಡಿಕೊಳ್ಳುತ್ತದೆ
ಬೇರೆ-ಬೇರೆ ದೇಶಗಳು ಸೇನೆಗೆ ನೇಮಕಾತಿ ಮಾಡಿಕೊಳ್ಳುವಂತೆ ಲಷ್ಕರ್ ಉಗ್ರರು ತಮ್ಮ ಸಂಘಟನೆಗೆ ಯುವಕರನ್ನು ನೇಮಕಾತಿ ಮಾಡಿಕೊಳ್ಳುತ್ತದೆ. ಉಗ್ರರಿಗೆ ಪರೋಕ್ಷ ಬೆಂಬಲ ನೀಡುವ ಗುಪ್ತಚರ ದಳ ಐಎಸ್ಐ ಹಾಗೂ ಪಾಕ್ ಸೇನೆ ಈ ಬಗ್ಗೆ ಮೌನವಹಿಸಿರುತ್ತವೆ. [ಚಿತ್ರ : ಉದಾಂಪುರ್ನಲ್ಲಿ ಮೃತಪಟ್ಟ ಮತ್ತೊಬ್ಬ ಉಗ್ರ]

ಹಣದ ಆಮಿಷ ಒಪ್ಪದಿದ್ದರೆ ಬೆದರಿಕೆ
ಉಗ್ರರು ತಮ್ಮ ಸಂಘಟನೆಗೆ ಯುವಕರನ್ನು ನೇಮಕಾತಿ ಮಾಡಿಕೊಳ್ಳುವಾಗ ಮೊದಲು ಹಣದ ಆಮಿಷ ಒಡ್ಡುತ್ತಾರೆ. ಅದಕ್ಕೆ ಒಪ್ಪದಿದ್ದರೆ ಬೆದರಿಕೆ ಹಾಕಿ ಯುವಕರನ್ನು ಕರೆದುಕೊಂಡು ಹೋಗುತ್ತಾರೆ.[ಚಿತ್ರ : ಉದಾಂಪುರ್ನಲ್ಲಿ ಉಗ್ರ ನವೀದ್ ಸೆರೆ ಹಿಡಿದಿದ್ದು ಇವರು]

ನವೀದ್ ಸೇರಿದ್ದು ಇದೇ ಮಾದರಿಯಲ್ಲಿ
ಬಿಎಸ್ಎಫ್ ಪಡೆಗಳ ಮೇಲೆ ದಾಳಿ ಮಾಡಿದ ನವೀದ್ ಲಷ್ಕರ್ ಸೇರಿದ್ದು ಇದೇ ಮಾದರಿಯಲ್ಲಿ. ಉದ್ಯೋಗವಿದಲ್ಲದೇ ಅಲೆದಾಡುತ್ತಿದ್ದ ಆತನನ್ನು ಉಗ್ರರು ಸಂಪರ್ಕಿಸಿದ್ದರು. ಮನೆಗೆ ಬಂದು ಸಂಘಟನೆ ಸೇರುವಂತೆ ಬೆದರಿಕೆ ಹಾಕಿದ್ದರು. [ಚಿತ್ರ : ಉದಾಂಪುರ್ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಪಾಲ್ಗೊಂಡಿದ್ದ ಯೋಧರು]
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications