ಜನವರಿ 1ರಂದೇ ಇಬ್ಬರು ಉಗ್ರರು ಪಠಾಣ್ ಕೋಟ್ಗೆ ನುಗ್ಗಿದ್ದರು
ಬೆಂಗಳೂರು, ಜನವರಿ 08 : ಪಠಾಣ್ ಕೋಟ್ ವಾಯುನೆಲೆಗೆ ಭಾರೀ ಪ್ರಮಾಣದಲ್ಲಿ ಹಾನಿ ಮಾಡುವ ಉದ್ದೇಶದಿಂದ ಉಗ್ರರು ದಾಳಿ ಮಾಡಿದ್ದರು. ಇಬ್ಬರು ಉಗ್ರರು ಜನವರಿ 1ರಂದೇ ವಾಯುನೆಲೆಗೆ ನುಗ್ಗಿದ್ದರು ಎಂದು ಎನ್ಐಎ ತನಿಖೆಯಿಂದ ಬಹಿರಂಗಗೊಂಡಿದೆ.
ಉಗ್ರರ ದಾಳಿಯ ತನಿಖೆ ನಡೆಸುತ್ತಿರುವ ಎನ್ಐಎ ಅಧಿಕಾರಿಗಳು ಒನ್ ಇಂಡಿಯಾಕ್ಕೆ ನೀಡಿರುವ ಮಾಹಿತಿಯಂತೆ ಎರಡು ತಂಡಗಳಲ್ಲಿ ಉಗ್ರರು ವಾಯುನೆಲೆ ಪ್ರವೇಶಿಸಿದ್ದರು. ಜನವರಿ 1ರಂದು ಇಬ್ಬರು ನುಗ್ಗಿದ್ದರು. ಉಳಿದ ನಾಲ್ವರು ಜನವರಿ 2ರಂದು ವಾಯುನೆಲೆ ಪ್ರವೇಶಿಸಿದ್ದರು. [ಪಠಾಣ್ ಕೋಟ್ ವಾಯುನೆಲೆಯ ವಿಶೇಷತೆಗಳೇನು?]

ವಾಯುನೆಲೆಯನ್ನು ತಮ್ಮ ವಶಕ್ಕೆ ಪಡೆದುಕೊಂಡು ಅದಕ್ಕೆ ಹಾನಿ ಮಾಡುವುದು ಉಗ್ರರ ಉದ್ದೇಶವಾಗಿತ್ತು. ಮೊದಲು ಜನವರಿ 1ರಂದು ದಾಳಿ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ಕೊನೆಯ ಹಂತದಲ್ಲಿ ಉಗ್ರರು ಯೋಜನೆ ಬದಲಾವಣೆ ಮಾಡಿ, ಜನವರಿ 2ರಂದು ದಾಳಿ ಆರಂಭಿಸಿದ್ದರು. [ಪಠಾಣ್ ಕೋಟ್ ಉಗ್ರರ ದಾಳಿ : ಟೈಮ್ ಲೈನ್]
ಎರಡು ತಂಡಗಳಲ್ಲಿ ಬಂದ ಉಗ್ರರ ಪೈಕಿ ನಾಲ್ವರು ಗೋಡೆ ಹಾರಿ ವಾಯುನೆಲೆ ಪ್ರವೇಶಿಸಿದರೆ, ಇನ್ನಿಬ್ಬರು ಉಗ್ರರು ನೀರಿನ ಕೊಳವೆ ಮೂಲಕ ವಾಯುನೆಲೆಗೆ ನುಗ್ಗಿದ್ದರು. ದಾಳಿ ನಡೆಸಿದ ಉಗ್ರರು ವಾಯುನೆಲೆಯ ನೀಲನಕ್ಷೆಯನ್ನು ಹೊಂದಿದ್ದರು ಎಂಬುದು ತನಿಖೆಯಿಂದ ಬಹಿರಂಗಗೊಂಡಿದೆ. [ಪಠಾಣ್ ಕೋಟ್ ದಾಳಿ : ಪಾಕಿಸ್ತಾನದಿಂದ ಮಾಹಿತಿ ಬೇಕಾಗಿದೆ]
ಜನವರಿ 1ರಂದು ನುಗ್ಗಿದ ಉಗ್ರರು ಉಳಿದವರು ಬರುವ ತನಕ ಯಾವುದೇ ದಾಳಿ ಮಾಡದೆ ಕಾದು ಕುಳಿತಿದ್ದರು. ಜನವರಿ 2ರಂದು ಮುಂಜಾನೆ 3.30ರ ಸುಮಾರಿಗೆ ಒಂದಾದ ಉಗ್ರರು ದಾಳಿ ಆರಂಭಿಸಿದರು. ಉಗ್ರರು ವಾಯುನಲೆಯ ಬೇರೆ ಬೇರೆ ಪ್ರದೇಶದಲ್ಲಿ ಅಡಗಿಕೊಳ್ಳಲು ಸಂಚು ರೂಪಿಸಿದ್ದರು. ಆದರೆ, ಯೋಧರು ಅದನ್ನು ವಿಫಲಗೊಳಿಸಿದರು.
ವಾಯುನೆಲೆ ನಿಯಂತ್ರಣ ಕೊಠಡಿಗೆ ನುಗ್ಗಿ ಉಗ್ರರು ತಮ್ಮನ್ನು ತಾವು ಸ್ಫೋಟಿಸಿಕೊಳ್ಳುವ ಉದ್ದೇಶ ಹೊಂದಿದ್ದರು. ಆದರೆ, ಯೋಧರ ದಾಳಿಯಿಂದಾಗಿ ಈ ಪ್ರಯತ್ನ ವಿಫಲವಾಯಿತು. ಗೋಡೆ ಹಾರುವಾಗಲೇ ಉಗ್ರನೊಬ್ಬ ಯೋಧರ ಗುಂಡಿಗೆ ಬಲಿಯಾದ ತಕ್ಷಣ, ಅವರು ತಮ್ಮ ಕಾರ್ಯತಂತ್ರವನ್ನು ಬದಲಾವಣೆ ಮಾಡಿ, ಮನಬಂದಂತೆ ಗುಂಡಿನ ದಾಳಿ ನಡೆಸಲು ಆರಂಭಿಸಿದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications