Aadhaar And Pan Card: ವಾಟ್ಸಪ್ನಲ್ಲೇ ಆಧಾರ್ & ಪಾನ್ ಕಾರ್ಡ್ ಡೌನ್ಲೋಡ್ ಮಾಡಿಕೊಳ್ಳಬಹುದು; ಮಾಹಿತಿ ಇಲ್ಲಿದೆ
Aadhaar And Pan Card: ಆಧಾರ್, ಪಾನ್ ಕಾರ್ಡ್ ಗಳು ಪ್ರಮುಖ ದಾಖಲೆಗಳಾಗಿವೆ. ಯಾವುದೇ ಅರ್ಜಿ ಸಲ್ಲಿಕೆಗೆ ಇವುಗಳು ಕಡ್ಡಾಯವಾಗಿ ಬೇಕೇ ಬೇಕಾಗುತ್ತದೆ. ಇವುಗಳನ್ನು ಇದೀಗ ವಾಟ್ಸಪ್ನಲ್ಲೇ ಡೌನ್ಲೋಡ್ ಮಾಡಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ. ಹಾಗಾದರೆ ಹೇಗೆ ಪಡೆಯಬಹುದು ಎನ್ನುವ ವಿಧಾನಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
MyGov ಹೆಲ್ಪ್ಡೆಸ್ಕ್ ವಾಟ್ಸ್ಆ್ಯಪ್ ಅಂತಾ ಸಹಾಯವಾಣಿ ನಂಬರ್ವೊಂದನ್ನು ನೀಡಿದ್ದು, ಇದರ ಸಹಾಯದಿಂದ ಡಿಜಿಲಾಕರ್ ಖಾತೆಗೆ ಸೈನ್ ಅಪ್ ಆಗಬೇಕು. ಈ ಮೂಲಕ ದಾಖಲೆಗಳನ್ನು ನೀವು ವಾಟ್ಸ್ಆ್ಯಪ್ನಲ್ಲಿ ಪಡೆಯಬಹುದಾಗಿದೆ. ಒಂದು ವೇಳೆ ನೀವು ಈಗಾಗಲೇ ಡಿಜಿಲಾಕರ್ ಅಕೌಂಟ್ ಹೊಂದಿದ್ದರೆ ಈ ದಾಖಲೆಗಳನ್ನು ಮತ್ತಷ್ಟು ಸುಲಭವಾಗಿ ಪಡೆದುಕೊಳ್ಳವಹುದಾಗಿದೆ.

ವಾಟ್ಸ್ಆ್ಯಪ್ ಪ್ರಸ್ತುತ ಕೇವಲ ಚಾಟ್ ಮಾಡುವುದಕ್ಕೆ, ಫೋಟೋ, ಡಾಕ್ಯೂಮೆಂಟ್, ವಿಡಿಯೋ ಕಳುಹಿಸಲು ಮಾತ್ರ ಸೀಮಿತ ಆಗಿಲ್ಲ. ಜೊತೆಗೆ ಅನೇಕ ಪ್ರಯೋಜನಗಳನ್ನ ಇದರಲ್ಲಿ ನೀಡಲಾಗಿದೆ. ಭಾರತದಲ್ಲಿ ವಾಟ್ಸ್ಆ್ಯಪ್ ಬಳಕೆದಾರರು ಪ್ಯಾನ್, ಆಧಾರ್, ಚಾಲನ ಪರವಾನಗಿ, ವಿಮಾ ಪಾಲಿಸಿ ಸೇರಿ ಹಲವು ದಾಖಲೆಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಡೌನ್ಲೋಡ್ ಮಾಡುವ ವಿಧಾನಗಳು
* +91-9013151515 ಈ ನಂಬರ್ ಅನ್ನು MyGov HelpDesk ಎಂದು ನಿಮ್ಮ ಫೋನ್ನಲ್ಲಿ ಸೇವ್ ಮಾಡಿ.
* ವಾಟ್ಸ್ಆ್ಯಪ್ MyGov HelpDesk ಚಾಟ್ಬಾಕ್ಸ್ನಲ್ಲಿ ನಮಸ್ತೆ, ಹಾಯ್ ಎಂದು ಟೈಪ್ ಮಾಡಿ ಕಳುಹಿಸಿ.
* ಡಿಜಿಲಾಕರ್ ಅಥವಾ ಕೋವಿನ್ ಸೇವೆ ಎಂಬ ಎರಡು ಆಯ್ಕೆ ಕಾಣಿಸಲಿದ್ದು, ಇಲ್ಲಿ ಡಿಜಿಲಾಕರ್ ಸೇವೆಗಳು ಎಂಬುದನ್ನು ಆಯ್ಕೆ ಮಾಡಿ.
* ಡಿಜಿಲಾಕರ್ ಖಾತೆಯನ್ನು ಹೊಂದಿದ್ದೀರಾ ಎಂದು ಚಾಟ್ಬಾಟ್ ಕೇಳಿದಾಗ ಹೌದು ಎಂಬುದರ ಮೇಲೆ ಕ್ಲಿಕ್ ಮಾಡಿ.
* ಒಂದು ವೇಳೆ ಖಾತೆ ಹೊಂದಿಲ್ಲದಿದ್ದರೆ, ಅಧಿಕೃತ ವೆಬ್ಸೈಟ್ ಅಥವಾ ಡಿಜಿಲಾಕರ್ ಅಪ್ಲಿಕೇಶನ್ಗೆ ಭೇಟಿ ನೀಡಿ. ಈ ಮೂಲಕ ಮೂಲಕ ನಿಮ್ಮ ಖಾತೆಯನ್ನು ರಚಿಸಿಕೊಳ್ಳಿ.
* ನಿಮ್ಮ ಡಿಜಿಲಾಕರ್ ಖಾತೆಯನ್ನು ಲಿಂಕ್ ಮಾಡಲು ಮತ್ತು ದೃಢೀಕರಿಸಲು ನಿಮ್ಮ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ ಮತ್ತು ಕಳುಹಿಸಿ.
* ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ OTP ಅನ್ನು ಸ್ವೀಕರಿಸುತ್ತೀರಿ. ಅದನ್ನು ಚಾಟ್ಬಾಕ್ಸ್ನಲ್ಲಿ ನಮೂದಿಸಿ.
* ಚಾಟ್ಬಾಕ್ಸ್ ಪಟ್ಟಿಗಳು ನಿಮ್ಮ ಡಿಜಿಲಾಕರ್ ಖಾತೆಯೊಂದಿಗೆ ಲಿಂಕ್ ಮಾಡಲಾದ ಎಲ್ಲಾ ದಾಖಲೆಗಳನ್ನು ನಿಮಗೆ ತೋರಿಸುತ್ತದೆ.
* ಡೌನ್ಲೋಡ್ ಮಾಡಲು, ಕಳುಹಿಸಲಾದ ದಾಖಲೆ ಸಂಖ್ಯೆಯನ್ನು ಟೈಪ್ ಮಾಡಿ ಮತ್ತು ಕಳುಹಿಸಿ.
* ನಿಮ್ಮ ಡಾಕ್ಯುಮೆಂಟ್ ಪಿಡಿಎಫ್ನಲ್ಲಿ ಚಾಟ್ ಬಾಕ್ಸ್ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications