ಆಸ್ಪತ್ರೆ, ಆರೋಗ್ಯ ದಾಖಲೆಗಳಿಗೆ ಈಗ ಡಿಜಿಲಾಕರ್ ಸೌಲಭ್ಯ
ನವದೆಹಲಿ, ನವೆಂಬರ್ 16: ಡಿಜಿಲಾಕರ್ ಬಳಕೆದಾರರು ಈಗ ಆಸ್ಪತ್ರೆ ಹಾಗೂ ಆರೋಗ್ಯ ದಾಖಲೆಗಳನ್ನು ಡಿಜಿಟಲ್ನಲ್ಲಿ ಸಂಗ್ರಹಿಸಬಹುದು ಮತ್ತು ಅವುಗಳನ್ನು 'ಆಯುಷ್ಮಾನ್ ಭಾರತ್ ಆರೋಗ್ಯ ಖಾತೆ'ಗೆ ಲಿಂಕ್ ಮಾಡಿಕೊಂಡು ಡಿಜಿಟಲ್ ಪೇಪರ್ವರ್ಕ್ ಮೂಲಕ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಆರೋಗ್ಯ ಸೌಲಭ್ಯವನ್ನು ಪಡೆದುಕೊಳ್ಳಬಹುದು.
ಹೌದು, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಅಧಿಕೃತ ದಾಖಲೆ ವಿನಿಮಯ ವೇದಿಕೆಯಾದ ಡಿಜಿಲಾಕರ್ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ (ಎಬಿಡಿಎಂ)ನೊಂದಿಗೆ 2ನೇ ಹಂತದ ಹೊಸ ಆಪ್ಡೇಟ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಈ ಸೇವೆಯನ್ನು ಸಾರ್ವಜನಿಕವಾಗಿ ಲಭ್ಯಗೊಳಿಸಲಾಗಿದೆ.
ಇನ್ನು ಸಾರ್ವಜನಿಕವಾಗಿ ಬಳಕೆದಾರರು (ಡಿಜಿಲಾಕರ್) ಈಗ ಡಿಜಿಲಾಕರ್ನಲ್ಲಿ ವ್ಯಾಕ್ಸಿನೇಷನ್ ದಾಖಲೆಗಳು, ವೈದ್ಯರ ಪ್ರಿಸ್ಕ್ರಿಪ್ಷನ್ಗಳು, ಲ್ಯಾಬ್ ವರದಿಗಳು, ಆಸ್ಪತ್ರೆಯ ಡಿಸ್ಚಾರ್ಜ್ ಸಾರಾಂಶಗಳು ಮುಂತಾದ ಆರೋಗ್ಯ ದಾಖಲೆಗಳನ್ನು ಸಂಗ್ರಹಿಸಬಹುದು ಮತ್ತು ಪ್ರವೇಶಿಸಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ದಾಖಲೆಯನ್ನು ಆಸ್ಪತ್ರೆಗಳಿಗೆ ಲಿಂಕ್ ಮಾಡಬಹುದು
ಡಿಜಿಲಾಕರ್ ಈ ಹಿಂದೆ ಎಬಿಡಿಎಮ್ (ABDM) ನೊಂದಿಗೆ ಲೆವೆಲ್ 1 ಏಕೀಕರಣವನ್ನು ಪೂರ್ಣಗೊಳಿಸಿತ್ತು. ಈ ಯೋಜನೆಯ ಪ್ಲಾಟ್ಫಾರ್ಮ್ ತನ್ನ 130 ಮಿಲಿಯನ್ ಬಳಕೆದಾರರಿಗೆ ಎಬಿಎಚ್ಎ(ABHA) ಅಥವಾ ಆಯುಷ್ಮಾನ್ ಭಾರತ್ ಆರೋಗ್ಯ ಖಾತೆ ರಚನೆ ಸೌಲಭ್ಯವನ್ನು ಸೇರಿಸಲಾಯಿತು.
ಆದರೆ, ಇತ್ತೀಚಿನ ಏಕೀಕರಣವು ಈಗ ಡಿಜಿಲಾಕರ್ ವೈಯಕ್ತಿಕ ಆರೋಗ್ಯ ದಾಖಲೆ (PHR) ಅಪ್ಲಿಕೇಶನ್ನಂತೆ ಬಳಸಲು ಬಳಕೆದಾರರನ್ನು ಸಕ್ರಿಯಗೊಳಿಸುತ್ತದೆ. ಹೆಚ್ಚುವರಿಯಾಗಿ ಆಯುಷ್ಮಾನ್ ಭಾರತ್ ಹೆಲ್ತ್ ಅಕೌಂಟ್ (ABHA) ನಂಬರ್ ಹೊಂದಿರುವವರು ತಮ್ಮ ಆರೋಗ್ಯ ದಾಖಲೆಗಳನ್ನು ವಿವಿಧ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ನೋಂದಾಯಿತ ಆರೋಗ್ಯ ಸೌಲಭ್ಯಗಳಾದ ಆಸ್ಪತ್ರೆಗಳು ಮತ್ತು ಪ್ರಯೋಗಾಲಯಗಳಿಂದ ಲಿಂಕ್ ಮಾಡಬಹುದು ಮತ್ತು ಅವುಗಳನ್ನು ಡಿಜಿಲಾಕರ್ ಮೂಲಕ ಪ್ರವೇಶಿಸಬಹುದು.

ಬಳಕೆದಾರರು ತಮ್ಮ ಹಳೆಯ ಆರೋಗ್ಯ ದಾಖಲೆಗಳನ್ನು ಆ್ಯಪ್ನಲ್ಲಿ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬಹುದು. ಹೆಚ್ಚುವರಿಯಾಗಿ, ಅವರು ABDM ನೋಂದಾಯಿತ ಆರೋಗ್ಯ ವೃತ್ತಿಪರರೊಂದಿಗೆ ಆಯ್ದ ದಾಖಲೆಗಳನ್ನು ಹಂಚಿಕೊಳ್ಳಬಹುದು.
ಡಿಜಿಲಾಕರ್ ವೈಶಿಷ್ಟ್ಯಗಳು
*ಡಿಜಿಲಾಕರ್ ಆಧಾರ್ ಒದಗಿಸಿದ ದೃಢೀಕರಣ ಸೇವೆಗಳನ್ನು ಬಳಸುವುದರಿಂದ ಎಲ್ಲಾ ದಾಖಲೆಗಳಿಗೆ ಸುರಕ್ಷಿತ ಪ್ರವೇಶವನ್ನು ಒದಗಿಸುತ್ತದೆ.
*ಭೌತಿಕ ದಾಖಲೆಗಳನ್ನು ಸಾಗಿಸುವ ಅಗತ್ಯವಿಲ್ಲವಿರುವುದಿಲ್ಲ. ಡಿಜಿಲಾಕರ್ ಭಾರತೀಯ ನಿವಾಸಿಗಳಿಗೆ ಎಲ್ಲಾ ಸರ್ಕಾರಿ ಏಜೆನ್ಸಿಗಳಲ್ಲಿ ಆನ್ಲೈನ್ನಲ್ಲಿ ದಾಖಲೆಗಳನ್ನು ಹಂಚಿಕೊಳ್ಳಲು ಅನುಮತಿಸುತ್ತದೆ. ಇದರಿಂದಾಗಿ, ಎಲ್ಲಾ ಸಮಯದಲ್ಲೂ ಭೌತಿಕ ದಾಖಲೆಗಳನ್ನು ಸಾಗಿಸುವ ಅಗತ್ಯವನ್ನು ತೆಗೆದುಹಾಕುತ್ತದೆ.
*ಡಿಜಿಲಾಕರ್ ಪೇಪರ್ವರ್ಕ್ನ ಅಗತ್ಯವನ್ನು ಕಡಿಮೆ ಮಾಡುತ್ತದೆ ಅಥವಾ ತೆಗೆದುಹಾಕುತ್ತದೆ ಮತ್ತು ಸರ್ಕಾರಿ ಏಜೆನ್ಸಿಗಳಲ್ಲಿ ಸ್ವೀಕರಿಸಿದ ದಾಖಲೆಗಳನ್ನು ವಿಂಗಡಿಸುವಲ್ಲಿ ತೊಡಗಿರುವ ದೈಹಿಕ ಶ್ರಮವನ್ನು ಕಡಿಮೆ ಮಾಡುತ್ತದೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications