ರೈತರ ಆದಾಯವು ದ್ವಿಗುಣವಾಗುವುದು ಹೇಗೆ? ಮನಮೋಹನ್ ಸಿಂಗ್ ಪ್ರಶ್ನೆ
ನವದೆಹಲಿ, ಫೆಬ್ರವರಿ 1: ಅರುಣ್ ಜೇಟ್ಲಿಯವರ ಕೇಂದ್ರ ಬಜೆಟ್-2018ನ್ನು ಮಾಜಿ ಹಣಕಾಸು ಸಚಿವ ಮನಮೋಹನ್ ಸಿಂಗ್ ಟೀಕಿಸಿದ್ದಾರೆ.
ಮುಂಬರುವ ಖಾರಿಫ್ ಋತುವಿನಿಂದ ರೈತರಿಗೆ ಶೇ. 50ರಷ್ಟು ಉತ್ಪಾದನಾ ವೆಚ್ಚವನ್ನು ಹಿಂದಿರುಗಿಸಲು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು ನಿಗದಿಪಡಿಸುವ ಸ್ವಾಮಿನಾಥನ್ ಸೂತ್ರವನ್ನು ಅನುಷ್ಠಾನಗೊಳಿಸುವ ಭರವಸೆಯನ್ನು ಬಜೆಟ್ ನಲ್ಲಿ ಜೇಟ್ಲಿ ನೀಡಿದ್ದಾರೆ.
ಈ ಸಂಬಂಧ ಜೇಟ್ಲಿಯನ್ನು ಟೀಕಿಸಿರುವ ಸಿಂಗ್, "ರೈತರ ಆದಾಯವು ದ್ವಿಗುಣವಾಗುವುದು ಹೇಗೆ? ಈ ಭರವಸೆಗಳು ಹೇಗೆ ಇಡೇರಿಸಲಾಗುತ್ತದೆ?" ಎಂದು ಪ್ರಶ್ನಿಸಿದ್ದಾರೆ.

ಇದೇ ವೇಳೆ ಅವರು ಹಣಕಾಸಿನ ಅಂಕಗಣಿತ ತಪ್ಪಾಗಿದೆ ಎಂದು ಹೇಳಿದ್ದಾರೆ. "ಚುನಾವಣೆಯಲ್ಲಿ ಗೆಲ್ಲುವ ಮೂಲಕ ಬಜೆಟನ್ನು ಜನರು ಬೆಂಬಲಿಸುತ್ತಿದ್ದಾರೆ ಎಂಬ ಕಾರಣಕ್ಕೆ ನಾನು ಬಜೆಟನ್ನು ದೂಷಿಸುವುದಿಲ್ಲ. ಆದರೆ ಹಣಕಾಸಿನ ಅಂಕಗಣಿತವು ದೋಷಪೂರಿತವಾಗಿದೆ" ಎಂದು ಅವರು ಹೇಳಿದ್ದಾರೆ.
"ಈ ಬಜೆಟ್ ಪ್ರಕಾಶಮಾನವಾದ ಭವಿಷ್ಯದ ಚಿತ್ರವನ್ನು ತೋರಿಸುವುದರಲ್ಲಿ ಹೆಚ್ಚಿನ ಪಾಲು ತೊಡಗಿಸಿಕೊಂಡಿದೆ. ಆದರೆ ಅದನ್ನು ಸಾಧಿಸಲು ಹೇಗೆ ಸಾಧ್ಯ?" ಎಂದು ಮನಮೋಹನ್ ಸಿಂಗ್ ಜೇಟ್ಲಿಯವರನ್ನು ಪ್ರಶ್ನಿಸಿದ್ದಾರೆ.
ಇನ್ನು ಬಜೆಟ್ ಸುಧಾರಣಾವಾದಿ ಎಂದಿದ್ದಕ್ಕೆ ಸಿಂಗ್, 'ಸುಧಾರಣೆ' ಶಬ್ದವನ್ನು ಹಲವು ಬಾರಿ ಬಳಸಲಾಗಿದೆ ಮತ್ತು ಅದರ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂದಿದ್ದಾರೆ. 'ನಾನು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ,' ಎಂದು ಸಿಂಗ್ ಹೇಳಿದ್ದಾರೆ.
"ನಿಜ ಸಮಸ್ಯೆ ಏನೆಂದರೆ ಕೃಷಿ ಬಿಕ್ಕಟ್ಟು ಹಿಂದಿನ ವಿಷಯವೇ ಎಂಬುದು. ಇಲ್ಲವಾದರೆ, ಕೃಷಿ ಬಿಕ್ಕಟ್ಟನ್ನು ನಿಭಾಯಿಸುವ ತಂತ್ರವೇನು" ಎಂದು ಸಿಂಗ್ ಕೇಂದ್ರ ಸರಕಾರವನ್ನು ಪ್ರಶ್ನೆ ಮಾಡಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications