ರೈತರ ಆದಾಯವು ದ್ವಿಗುಣವಾಗುವುದು ಹೇಗೆ? ಮನಮೋಹನ್ ಸಿಂಗ್ ಪ್ರಶ್ನೆ
ನವದೆಹಲಿ, ಫೆಬ್ರವರಿ 1: ಅರುಣ್ ಜೇಟ್ಲಿಯವರ ಕೇಂದ್ರ ಬಜೆಟ್-2018ನ್ನು ಮಾಜಿ ಹಣಕಾಸು ಸಚಿವ ಮನಮೋಹನ್ ಸಿಂಗ್ ಟೀಕಿಸಿದ್ದಾರೆ.
ಮುಂಬರುವ ಖಾರಿಫ್ ಋತುವಿನಿಂದ ರೈತರಿಗೆ ಶೇ. 50ರಷ್ಟು ಉತ್ಪಾದನಾ ವೆಚ್ಚವನ್ನು ಹಿಂದಿರುಗಿಸಲು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು ನಿಗದಿಪಡಿಸುವ ಸ್ವಾಮಿನಾಥನ್ ಸೂತ್ರವನ್ನು ಅನುಷ್ಠಾನಗೊಳಿಸುವ ಭರವಸೆಯನ್ನು ಬಜೆಟ್ ನಲ್ಲಿ ಜೇಟ್ಲಿ ನೀಡಿದ್ದಾರೆ.
ಈ ಸಂಬಂಧ ಜೇಟ್ಲಿಯನ್ನು ಟೀಕಿಸಿರುವ ಸಿಂಗ್, "ರೈತರ ಆದಾಯವು ದ್ವಿಗುಣವಾಗುವುದು ಹೇಗೆ? ಈ ಭರವಸೆಗಳು ಹೇಗೆ ಇಡೇರಿಸಲಾಗುತ್ತದೆ?" ಎಂದು ಪ್ರಶ್ನಿಸಿದ್ದಾರೆ.

ಇದೇ ವೇಳೆ ಅವರು ಹಣಕಾಸಿನ ಅಂಕಗಣಿತ ತಪ್ಪಾಗಿದೆ ಎಂದು ಹೇಳಿದ್ದಾರೆ. "ಚುನಾವಣೆಯಲ್ಲಿ ಗೆಲ್ಲುವ ಮೂಲಕ ಬಜೆಟನ್ನು ಜನರು ಬೆಂಬಲಿಸುತ್ತಿದ್ದಾರೆ ಎಂಬ ಕಾರಣಕ್ಕೆ ನಾನು ಬಜೆಟನ್ನು ದೂಷಿಸುವುದಿಲ್ಲ. ಆದರೆ ಹಣಕಾಸಿನ ಅಂಕಗಣಿತವು ದೋಷಪೂರಿತವಾಗಿದೆ" ಎಂದು ಅವರು ಹೇಳಿದ್ದಾರೆ.
"ಈ ಬಜೆಟ್ ಪ್ರಕಾಶಮಾನವಾದ ಭವಿಷ್ಯದ ಚಿತ್ರವನ್ನು ತೋರಿಸುವುದರಲ್ಲಿ ಹೆಚ್ಚಿನ ಪಾಲು ತೊಡಗಿಸಿಕೊಂಡಿದೆ. ಆದರೆ ಅದನ್ನು ಸಾಧಿಸಲು ಹೇಗೆ ಸಾಧ್ಯ?" ಎಂದು ಮನಮೋಹನ್ ಸಿಂಗ್ ಜೇಟ್ಲಿಯವರನ್ನು ಪ್ರಶ್ನಿಸಿದ್ದಾರೆ.
ಇನ್ನು ಬಜೆಟ್ ಸುಧಾರಣಾವಾದಿ ಎಂದಿದ್ದಕ್ಕೆ ಸಿಂಗ್, 'ಸುಧಾರಣೆ' ಶಬ್ದವನ್ನು ಹಲವು ಬಾರಿ ಬಳಸಲಾಗಿದೆ ಮತ್ತು ಅದರ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂದಿದ್ದಾರೆ. 'ನಾನು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ,' ಎಂದು ಸಿಂಗ್ ಹೇಳಿದ್ದಾರೆ.
"ನಿಜ ಸಮಸ್ಯೆ ಏನೆಂದರೆ ಕೃಷಿ ಬಿಕ್ಕಟ್ಟು ಹಿಂದಿನ ವಿಷಯವೇ ಎಂಬುದು. ಇಲ್ಲವಾದರೆ, ಕೃಷಿ ಬಿಕ್ಕಟ್ಟನ್ನು ನಿಭಾಯಿಸುವ ತಂತ್ರವೇನು" ಎಂದು ಸಿಂಗ್ ಕೇಂದ್ರ ಸರಕಾರವನ್ನು ಪ್ರಶ್ನೆ ಮಾಡಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications