HP Result 2022; ಸಿಎಂ ರೇಸ್ನಲ್ಲಿದ್ದ ಕಾಂಗ್ರೆಸ್ ನಾಯಕಿಗೆ ಸೋಲು!
ನವದೆಹಲಿ, ಡಿಸೆಂಬರ್ 08; ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಪಕ್ಷದ 6 ಬಾರಿಯ ಶಾಸಕಿ, ಸಿಎಂ ರೇಸ್ನಲ್ಲಿದ್ದ ನಾಯಕಿ ಸೋಲು ಕಂಡಿದ್ದಾರೆ.
ಗುರುವಾರ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. 68 ಸದಸ್ಯ ಬಲದ ವಿಧಾನಸಭೆಯಲ್ಲಿ ಬಹುಮತ ಪಡೆಯಲು ಬೇಕಾದ ಮ್ಯಾಜಿಕ್ ನಂಬರ್ 35. ಸದ್ಯದ ಮಾಹಿತಿ ಪ್ರಕಾರ ಕಾಂಗ್ರೆಸ್ 40 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಕಾಂಗ್ರೆಸ್ ಪಕ್ಷ ಅತಿ ದೊಡ್ಡ ಪಕ್ಷವಾದರೂ ಡಾಲ್ ಹೌಸೀ ಕ್ಷೇತ್ರದಲ್ಲಿ ಪಕ್ಷದ ನಾಯಕಿ, 6 ಬಾರಿ ಶಾಸಕಿಯಾಗಿದ್ದ ಆಶಾ ಕುಮಾರಿ ಸೋಲು ಕಂಡಿದ್ದಾರೆ. ಆಶಾ ರಾಣಿ ಎಂದೇ ಪ್ರಸಿದ್ಧಿ ಪಡೆದಿರುವ ನಾಯಕಿ ಮುಖ್ಯಮಂತ್ರಿ ಹುದ್ದೆಯ ರೇಸ್ನಲ್ಲಿದ್ದರು.

ಬಿಜೆಪಿ ಅಭ್ಯರ್ಥಿ ಡಿ. ಎಸ್. ಠಾಕೂರ್ ಆಶಾ ಕುಮಾರಿ ಸೋಲಿಸಿದ್ದಾರೆ. ಸುಮಾರು 9,918 ಮತಗಳ ಅಂತರದಿಂದ ಡಿ. ಎಸ್. ಠಾಕೂರ್ ಜಯಗಳಿಸಿದ್ದಾರೆ. ಚಂಬಾ ಜಿಲ್ಲೆಯಲ್ಲಿ ಬರುವ ಡಾಲ್ ಹೌಸೀ ಕ್ಷೇತ್ರ ಮಾಜಿ ಸಿಎಂ ವೀರಭದ್ರ ಸಿಂಗ್ ಆಪ್ತ ಹರ್ಷ ಮಹಾಜನ್ ಬಿಜೆಪಿ ಸೇರಿದ ಬಳಿಕ ಗಮನಸೆಳೆದಿತ್ತು.
ಆಶಾ ಕುಮಾರಿ ಚಂಬಾದ ಪ್ರತಿಷ್ಠಿತ ಕುಟುಂಬಕ್ಕೆ ಸೇರಿದವರು. ಮೊದಲ ಬಾರಿಗೆ 1985ರಲ್ಲಿ ಅವರು ಶಾಸಕಿಯಾಗಿ ಆಯ್ಕೆಯಾದರು. ಬಳಿಕ 1993, 1998, 2003, 2012 ಮತ್ತು 2017ರಲ್ಲಿ ಗೆಲುವು ಸಾಧಿಸಿದರು.
2012ರಲ್ಲಿ ಬಿಜೆಪಿಯ ಅಭ್ಯರ್ಥಿ ರೇಣು ಚಡ್ಡಾರನ್ನು 7,365 ಮತಗಳ ಅಂತರದಿಂದ ಆಶಾ ಕುಮಾರಿ ಸೋಲಿಸಿದ್ದರು. 2017ರ ಚುನಾವಣೆಯಲ್ಲಿ ಠಾಕೂರ್ ವಿರುದ್ಧ 556 ಮತಗಳ ಅಂತರದಿಂದ ಗೆದ್ದಿದ್ದರು.
ಪಂಜಾಬ್ ರಾಜ್ಯದ ಕಾಂಗ್ರೆಸ್ ಉಸ್ತುವಾರಿಯಾಗಿರುವ ಆಶಾ ಕುಮಾರಿ ರಾಜ್ಯದ ಪ್ರಭಾವಿ ನಾಯಕಿ. ಛತ್ತೀಸ್ಗಢದ ಸಚಿವ ಟಿ. ಎಸ್. ಸಿಂಗ್ ಅವರ ಸಹೋದರಿ.
-
Samarth Shamanur: ದಾವಣಗೆರೆ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಫೈಟ್ ಅಂತ್ಯ: ಶಾಮನೂರು ಕುಟುಂಬದ ಕುಡಿ ಸಮರ್ಥ್ ಕಣಕ್ಕೆ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ












Click it and Unblock the Notifications