HP Election Result 2022; ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಯಾರು?
ನವದೆಹಲಿ, ಡಿಸೆಂಬರ್ 08; ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದೆ. ರಾಜ್ಯದಲ್ಲಿ ವಿರೋಧ ಪಕ್ಷವಾಗಿರುವ ಕಾಂಗ್ರೆಸ್ 40 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಮುಖ್ಯಮಂತ್ರಿ ಜೈರಾಮ್ ಠಾಕೂರ್ ಸೆರಾಜ್ ಕ್ಷೇತ್ರದಲ್ಲಿ ಗೆದ್ದರೂ ಪಕ್ಷ ರಾಜ್ಯದಲ್ಲಿ ಅಧಿಕಾರ ಹಿಡಿಯುವುದು ಕಷ್ಟ.
2017ರ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ 44 ಸ್ಥಾನಗಳಲ್ಲಿ ಗೆದ್ದು ಸರ್ಕಾರ ರಚನೆ ಮಾಡಿತ್ತು. ಆದರೆ ಒಮ್ಮೆ ಅಧಿಕಾರ ನಡೆಸಿದ ಪಕ್ಷ ಮತ್ತೊಮ್ಮೆ ಗೆಲ್ಲುವುದಿಲ್ಲ ಎಂಬುದು ಹಿಮಾಚಲ ಪ್ರದೇಶದಲ್ಲಿ ಮತ್ತೆ ಸಾಬೀತಾಗುತ್ತಿದೆ.
Recommended Video
ಹಿಮಾಚಲದಲ್ಲಿ ಬಿಜೆಪಿ ರಚಿಸಿದ ಚುನಾವಣೆ ತಂತ್ರ ಫಲ ನೀಡಿದಂತೆ ಕಾಣುತ್ತಿಲ್ಲ. ಮಧ್ಯಾಹ್ನ 1 ಗಂಟೆಯ ಹೊತ್ತಿಗೆ ಬಿಜೆಪಿ 24, ಕಾಂಗ್ರೆಸ್ 40 ಮತ್ತು ಪಕ್ಷೇತರ ಅಭ್ಯರ್ಥಿಗಳು 3 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಕಾಂಗ್ರೆಸ್ ಮುನ್ನಡೆಸುವುದು ಯಾರು?; ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಈಗ ಪಕ್ಷ ಸರ್ಕಾರ ರಚನೆ ಮಾಡಬೇಕಾದರೆ ಸಿಎಂ ಅಭ್ಯರ್ಥಿ ಆಯ್ಕೆ ಅಷ್ಟು ಸುಲಭವಾಗಿ ಉಳಿದಿಲ್ಲ. ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಮುಂದೆ ದೊಡ್ಡ ಸವಾಲು ಇದೆ.
ಹಿಮಾಚಲ ಪ್ರದೇಶದಲ್ಲಿ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳು ಹಲವರಿದ್ದಾರೆ. 5 ಪ್ರಮುಖ ನಾಯಕರ ಹೆಸರು ಸಿಎಂ ಹುದ್ದೆಗೆ ಕೇಳಿ ಬರುತ್ತಿದೆ. ಹೈಕಮಾಂಡ್ ನಾಯಕರು ಯಾರಿಗೆ ಮಣೆ ಹಾಕುತ್ತಾರೆ? ಎಂದು ಕಾದು ನೋಡಬೇಕಿದೆ.
ಯಾರು ಸಿಎಂ ಆಗಬಹುದು?
1. ಪ್ರತಿಭಾ ಸಿಂಗ್; ಹಿಮಾಚಲ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ. ಮಾಜಿ ಮುಖ್ಯಮಂತ್ರಿ ದಿ. ವೀರಭದ್ರ ಸಿಂಗ್ ಪತ್ನಿ. ಈ ಬಾರಿಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿಲ್ಲ. ಮಂಡಿ ಲೋಕಸಭಾ ಕ್ಷೇತ್ರದ ಸಂಸದೆ. ಪಕ್ಷ ಇಷ್ಟು ಸ್ಥಾನಗಳಿಸುವಲ್ಲಿ ಇವರ ಪಾತ್ರವೂ ಹೆಚ್ಚಿದೆ.

2. ಸುಖ್ವಿಂದರ್ ಸಿಂಗ್ ಸುಖು; ರಾಜ್ಯ ಕಾಂಗ್ರೆಸ್ನ ನಿಕಟಪೂರ್ವ ಅಧ್ಯಕ್ಷರು. ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರು. ಸಂಸದ ರಾಹುಲ್ ಗಾಂಧಿಗೆ ಆಪ್ತರು. ಮೂರು ಬಾರಿ ಶಾಸಕರಾಗಿರುವ ಇವರು ಪ್ರಸ್ತುತ ಹಮಿರ್ಪುರದ ನೌದಾನ್ ಕ್ಷೇತ್ರದಿಂದ ಕಣಕ್ಕಿಳಿಸಿದ್ದಾರೆ.
3. ಮುಕೇಶ್ ಅಗ್ನಿಹೋತ್ರಿ; ಹಿಮಾಚಲ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರು. ವೀರಭದ್ರ ಸಿಂಗ್ ಸಂಪುಟದಲ್ಲಿ ಸಚಿವರು ಆಗಿದ್ದರು. ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಬಾರಿ ಉನಾ ಜಿಲ್ಲೆಯ ಹರೋಲಿ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.
4. ಠಾಕೂರ್ ಕೌಲ್ ಸಿಂಗ್; 8 ಬಾರಿ ಶಾಸಕರಾಗಿರುವ ಠಾಕೂರ್ ಕೌಲ್ ಸಿಂಗ್ 77 ವರ್ಷದ ಹಿರಿಯ ನಾಯಕ. ಮಾಜಿ ಸಚಿವರು, ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷರು. ಪ್ರತಿಭಾ ಸಿಂಗ್ ಆಪ್ತ ವಲಯದಲ್ಲಿ ಗುರುತಿಸಿಕೊಂಡವರು. ವಯಸ್ಸಿನ ಕಾರಣಕ್ಕೆ ಸಿಎಂ ಸ್ಥಾನ ಕೈತಪ್ಪುವ ಸಾಧ್ಯತೆಯೂ ಇದೆ.
5. ಆಶಾ ಕುಮಾರಿ; ಪಂಜಾಬ್ ಕಾಂಗ್ರೆಸ್ ಉಸ್ತುವಾರಿಯಾಗಿರುವ ಆಶಾ ಸಿಂಗ್ 6 ಬಾರಿ ಶಾಸಕಿಯಾಗಿದ್ದಾರೆ.
-
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ












Click it and Unblock the Notifications