ನೀವು ಎಲ್ಲೇ ಇರಿ, ನಿಮ್ಮ ಅಂಕಪಟ್ಟಿ ಕ್ಷಣಾರ್ಧದಲ್ಲಿ ಲಭ್ಯ
ನವದೆಹಲಿ,ಆ.6:ನಕಲಿ ಅಂಕಪಟ್ಟಿ, ನಕಲಿ ಪದವಿ ಹಾವಳಿಯನ್ನು ತಡೆಗಟ್ಟಲು ರಾಷ್ಟ್ರೀಯ ಶೈಕ್ಷಣಿಕ ಕೋಶ ಸ್ಥಾಪಿಸಲು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಮುಂದಾಗಿದೆ.
ಈ ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲೇ ಈ ಯೋಜನೆ ರೂಪುಗೊಂಡಿತ್ತಾದರೂ, ಅದರಲ್ಲಿನ ಕೆಲವೊಂದು ಅಂಶಗಳ ಬಗ್ಗೆ ಕಾನೂನು ಸಚಿವಾಲಯ ಅಪಸ್ವರ ಎತ್ತಿತ್ತು. ಇದೀಗ ಈ ಕೆಲ ಅಂಶಗಳಿಗೆ ತಿದ್ದುಪಡಿ ಮಾಡಲಾಗಿದ್ದು ಕರಡು ಮಸೂದೆ ಸದ್ಯದಲ್ಲೇ ಲೋಕಸಭೆಯಲ್ಲಿ ಮಂಡನೆಯಾಗಲಿದೆ.[ಸರ್ಕಾರಿ ಸೌಲಭ್ಯಕ್ಕೆ ಗೆಜೆಟೆಡ್, ನೋಟರಿ ಸಹಿ ಬೇಕಿಲ್ಲ]

ಏನಿದು ಯೋಜನೆ?: ಈ ಯೋಜನೆ ಪ್ರಕಾರ ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ಯಾವುದೇ ಶಿಕ್ಷಣ ಪಡೆದ ವಿದ್ಯಾರ್ಥಿಯ ಅಂಕಪಟ್ಟಿ ಮತ್ತು ಪರೀಕ್ಷೆ ಉತ್ತೀರ್ಣದ ಮಾಹಿತಿ ಮತ್ತಿತರ ಮಾಹಿತಿಯನ್ನು ಎಲೆಕ್ಟ್ರಾನಿಕ್ ಡೇಟಾಬೇಸ್ನಲ್ಲಿ ಸಂಗ್ರಹಿಸಲಾಗುತ್ತದೆ. ಒಮ್ಮೆ ಯೋಜನೆ ಜಾರಿಯಾದ ಬಳಿಕ, ದೇಶದ ಪ್ರತಿಯೊಂದು ಶೈಕ್ಷಣಿಕ ಸಂಸ್ಥೆಗಳು ಕೂಡಾ, ತಮ್ಮ ವಿದ್ಯಾರ್ಥಿಗಳ ಮಾಹಿತಿಯನ್ನು ಇದರಲ್ಲಿ ದಾಖಲಿಸುವುದು ಕಡ್ಡಾಯವಾಗುತ್ತದೆ.[ವಿಬ್ಗಯಾರ್ ರೇಪ್ ಪ್ರಕರಣ: ವರದಿ ಕೇಳಿದ ಕೇಂದ್ರ]
ಈ ಯೋಜನೆ ಕಾರ್ಯಗತವಾದಲ್ಲಿ ಅಂತರ್ಜಾಲದಲ್ಲಿ ದೇಶದ ಎಲ್ಲಾ ವಿದ್ಯಾರ್ಥಿಗಳ ಶೈಕ್ಷಣಿಕ ಮಾಹಿತಿಯನ್ನು ಉಚಿತವಾಗಿ ಕ್ಷಣಾರ್ಧದಲ್ಲಿ ನೋಡಬಹುದಾಗಿದೆ. ಕಂಪೆನಿಗಳು ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿರುವ ವ್ಯಕ್ತಿಯ ಅರ್ಹತೆಯನ್ನು ಪರಿಶೀಲಿಸಬಹುದಾಗಿದೆ. ಅಷ್ಟೇ ಅಲ್ಲದೇ ವಿದ್ಯಾರ್ಥಿಯ ಅಂಕಪಟ್ಟಿ ಕಳೆದು ಹೋದಲ್ಲಿ ಅಥವಾ ಮತ್ತೊಂದು ಪ್ರತಿ ಬೇಕಾದಲ್ಲಿ ಈ ವೆಬ್ಸೈಟ್ ಮೂಲಕವೇ ಪ್ರಿಂಟ್ ತೆಗೆಯಬಹುದಾಗಿದೆ.
-
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
SSLC ಪರೀಕ್ಷೆಗೆ ಹಾಜರಾತಿ ಶಾಕ್: ನಿಯಮ ಉಲ್ಲಂಘಿಸಿದ 35,000 ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತ -
ಹನುಮ ಜಯಂತಿ ಮುನ್ನವೇ ಅಯೋಧ್ಯೆಗೆ ಗೌತಮ್ ಅದಾನಿ ಭೇಟಿ: ಪ್ರಾಚೀನ ಗುರುಕುಲಕ್ಕೆ AI ಲ್ಯಾಬ್ ಘೋಷಣೆ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು?












Click it and Unblock the Notifications