ಹೃತಿಕ್ ಅವರ ಮಾಜಿ ಪತ್ನಿ ವಿರುದ್ಧ ಎಫ್ಐಆರ್
ಪಣಜಿ, ಜೂನ್ 20: ಹಿಂದಿ ಚಿತ್ರರಂಗದ ಜನಪ್ರಿಯ ನಟ ಹೃತಿಕ್ ರೋಷನ್ ಅವರ ಮಾಜಿ ಪತ್ನಿ, ಉದ್ಯಮಿ ,ಇಂಟೀರಿಯರ್ ಡಿಸೈನರ್ ಸುಸ್ಸಾನ್ ಖಾನ್ ಮತ್ತೆ ಸುದ್ದಿಯಲ್ಲಿದ್ದಾರೆ. ಗೋವಾ ಪೊಲೀಸರು ಸುಸ್ಸಾನ್ ವಿರುದ್ಧ ಕೋಟ್ಯಂತರ ರುಪಾಯಿ ವಂಚಿಸಿದ ಆರೋಪ ಮೇಲೆ ಪ್ರಕರಣ ದಾಖಲಿಸಿಕೊಂಡು ಎಫ್ ಐಆರ್ ಹಾಕಿದ್ದಾರೆ.
37ವರ್ಷ ವಯಸ್ಸಿನ ಸುಸ್ಸಾನ್ ಅವರು 1.87 ಕೋಟಿ ರು ವಂಚನೆ ಮಾಡಿದ ಆರೋಪ ಹೊರೆಸಿ ಪಣಜಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸುಸ್ಸಾನ್ ವಿರುದ್ಧ ಐಪಿಸಿ ಸೆಕ್ಷನ್ 420 ಅನ್ವಯ ಪ್ರಕರಣ ದಾಖಲಾಗಿದೆ.[ಕ್ರೈಸ್ತರ ಕೆಂಗಣ್ಣಿಗೆ ಗುರಿಯಾದ ಹೃತಿಕ್ ಮಾಡಿದ ಟ್ವೀಟ್!]

ಜೂನ್ 9ರಂದು ಸುಸ್ಸಾನ್ ವಿರುದ್ಧ ರಿಯಲ್ ಎಸ್ಟೇಟ್ ಕಂಪನಿಯೊಂದು ದೂರು ದಾಖಲಿಸಿತ್ತು. 'ದಿ ಚಾರ್ ಕೋಲ್' ಪ್ರಾಜೆಕ್ಟ್ ಕಂಪನಿಯ ಮುಖ್ಯ ವಿನ್ಯಾಸಗಾರ್ತಿ ಹಾಗೂ ಒಡತಿ ಎಂದು ಹೇಳಿಕೊಂಡು ಡೀಲ್ ಪಡೆದುಕೊಂಡಿದ್ದ ಸುಸ್ಸಾನ್ ಯಾವುದೇ ಕಾರ್ಯ ಕೈಗೊಂಡಿಲ್ಲ ಎಂದು ದೂರಿನಲ್ಲಿ ದಾಖಲಿಸಲಾಗಿದೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಸಿದ್ಧಾಂತ್ ಶಿರೋಡ್ಕರ್ ಹೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಸುಸ್ಸಾನ್, ನಾನು ಮಾಡಿಕೊಂಡ ಒಪ್ಪಂದದಂತೆ ಉತ್ತಮ ಗುಣಮಟ್ಟದ ಸೇವೆಯನ್ನೇ ನೀಡಿದ್ದೇನೆ. ಮೊದಲು ನನಗಾದ ಹಾನಿಯನ್ನು ತುಂಬಿಕೊಡಲಿ ಎಂದಿದ್ದಾರೆ. ಸುಸ್ಸಾನ್ ಅವರ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಮುದಿತ್ ಗುಪ್ತಾ ಅವರ ಹೆಸರು ಕೂಡಾ ದೂರಿನಲ್ಲಿ ದಾಖಲಾಗಿದೆ.
ಉತ್ತರ ಗೋವಾದ ತಿಸ್ವಾಡಿಯಲ್ಲಿರುವ ನೈರಾ ಕಾಂಪ್ಲೆಕ್ಸ್ನ ಆರ್ಕಿಟೆಕ್ಟ್ ಹಾಗೂ ಇಂಟೀರಿಯರ್ ಡಿಸೈನ್ ಮಾಡಲು ಸುಸ್ಸಾನ್ ಅವರ ಕಂಪನಿ ಒಪ್ಪಂದ ಮಾಡಿಕೊಂಡಿತ್ತು. ಆದರೆ, ನಿಗದಿತ ಅವಧಿಯೊಳಗೆ ಕೆಲಸ ಮುಗಿಸಿರಲಿಲ್ಲ. ಹೀಗಾಗಿ ಎಮ್ಗಿ ಎಂಟರ್ ಪ್ರೈಸಸ್ ಸಂಸ್ಥೆ ದೂರು ನೀಡಿದೆ. (ಒನ್ ಇಂಡಿಯಾ ಸುದ್ದಿ)
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications