ಶಾರುಕ್-ಅನುಷ್ಕಾ ಜೋಡಿಯ ಸಿನಿಮಾ ಹಾಡು ಬಿಡುಗಡೆ, ಗುಜರಾತಿನ ಮಳೆ
ಮುಂಗಾರು ಮಳೆಗೆ ಗುಜರಾತ್ ತತ್ತರಿಸಿ ಹೋಗಿದೆ. ಅಹ್ಮದಾಬಾದ್ ನಲ್ಲಿ ಅಂತರರಾಷ್ಟ್ರೀಯ ವಿಮಾಣ ನಿಲ್ದಾಣ ಸಣ್ಣ ಕೆರೆ ಕಂಡಂತೆ ಭಾಸವಾಗುತ್ತದೆ. ಇನ್ನು ರಸ್ತೆಗಳಲ್ಲಿ ವಾಹನವೇ ಕಾಣಿಸಿಕೊಳ್ಳುತ್ತಿಲ್ಲ. ಒಂದು ವೇಳೆ ಕಾಣಿಸಿಕೊಂಡರೂ ಯಾಕಪ್ಪಾ ರಸ್ತೆಗೆ ತಂದ್ವಿ ಎಂದು ತಮ್ಮನ್ನೇ ಶಪಿಸಿಕೊಳ್ಳುತ್ತಾ ಮನೆ ತಲುಪುವುದರೊಳಗೆ ಸಾಕುಬೇಕಾಗುತ್ತದೆ.
ತಮಿಳುನಾಡಿನ ರಾಮೇಶ್ವರಂನಲ್ಲಿ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಸ್ಮಾರಕ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ನಾಗರಪಂಚಮಿಗೆ ಪೂರ್ವಭಾವಿಯಾಗಿ ದಂಗಲ್ ಅಖಾಡಕ್ಕೆ ಸಿದ್ಧವಾಗಿರುವ ಕುಸ್ತಿಪಟುಗಳನ್ನು ನೋಡುವುದಕ್ಕೆ ಖುಷಿ ಎನಿಸುತ್ತದೆ. ಮುಂಗಾರು ಸಂಸತ್ ಅಧಿವೇಶನ ನಡೆಯುತ್ತಿದ್ದು, ರಾಹುಲ್ ಗಾಂಧಿ ಮಾಧ್ಯಮದವರ ಜತೆಗೆ ಮಾತನಾಡಿದ್ದಾರೆ.
ಬಿಹಾರದಲ್ಲಿ ರಾತ್ರೋರಾತ್ರಿ ದೋಸೆ ಮಗುಚಿ ಹಾಕಿದ ಹಾಗೆ ಆಡಳಿತ ನಡೆಸುತ್ತಿದ್ದ ಆರ್ ಜೆಡಿ ವಿಪಕ್ಷ ಸ್ಥಾನದಲ್ಲೂ, ಇನ್ನು ವಿಪಕ್ಷ ಸ್ಥಾನದಲ್ಲಿ ಕೂರುತ್ತಿದ್ದ ಬಿಜೆಪಿ ಆಡಳಿತ ನಡೆಸುವ ಸರಕಾರದ ಜತೆ ಕಾಣಿಸಿಕೊಂಡಿವೆ. ಎಲ್ಲ ನಿತೀಶ್ ಕುಮಾರ್ ಮಹಿಮೆ. ಒಟ್ಟಿನಲ್ಲಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಮುಂದಿನ ಲೋಕಸಭೆ ಚುನಾವಣೆ ಬಿಜೆಪಿ ವಿರುದ್ಧ ಬಡಿದಾಡಬೇಕು ಅಂದುಕೊಳ್ತಿದ್ದವರೆಲ್ಲ ಶಪಿಸುವಂತಾಯಿತು.
ಇನ್ನಷ್ಟು ಸುದ್ದಿ-ಚಿತ್ರಗಳಿಗೆ ಓದಿ-ನೋಡಿ.

ಆಣೆ ಮಾಡಿ ಹೇಳ್ತೀವಿ, ಇದು ವಿಮಾನ ನಿಲ್ದಾಣ
ನೀರಿನ ಮಧ್ಯೆ ಸಾಲಾಗಿ ವಿಮಾನಗಳು ನಿಂತಿವೆಯಲ್ಲಾ, ಇದು ಅಹ್ಮದಾಬಾದ್ ನ ಸರ್ದಾರ್ ಪಟೇಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ದೃಶ್ಯ. ಮುಂಗಾರಿನ ಭಾರೀ ಮಳೆಗೆ ಗುರುವಾರ ನಿಲ್ದಾಣ ಕಂಡುಬಂದಿದ್ದು ಹೀಗೆ.

ಆಟೋ ಒಯ್ಯಲು ಹರಸಾಹಸ
ಅಹ್ಮದಾಬಾದ್ ನ ಬಡಾವಣೆಯೊಂದರಲ್ಲಿ ಮಳೆಗೆ ರಸ್ತೆಯಲ್ಲಿ ನೀರು ತುಂಬಿಹೋಗಿದೆ. ನೀರಿನ ಮಧ್ಯೆ ಸಿಕ್ಕಿಕೊಂಡ ಆಟೋವೊಂದನ್ನು ತೆಗೆದುಕೊಂಡು ಹೋಗಲು ಹರಸಾಹಸ ಪಡುತ್ತಿರುವುದು.

ದಂಗಲ್ ಅಖಾಡ
ಜಬ್ಬಲ್ ಪುರ್ ನಲ್ಲಿ ನಾಗರಪಂಚಮಿಗೆ ಪೂರ್ವಭಾವಿಯಾಗಿ ದಂಗಲ್ ಅಖಾಡಕ್ಕೆ ಸಿದ್ಧವಾಗಿದ್ದ ಕುಸ್ತಿಪಟುಗಳು.

ಸ್ಮಾರಕ ಭವನದಲ್ಲೊಂದು ಅಚ್ಚರಿ
ತಮಿಳುನಾಡಿನ ರಾಮೇಶ್ವರಂನ ಪೈಕರುಂಬುನಲ್ಲಿ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಸ್ಮಾರಕಭವನದ ಉದ್ಘಾಟನೆ ವೇಳೆ ಕಲಾಂ ಅವರ ಕಲಾಕೃತಿಯೊಂದನ್ನು ಅಚ್ಚರಿಯಿಂದ ವೀಕ್ಷಿಸಿದ ಪ್ರಧಾನಿ ನರೇಂದ್ರ ಮೋದಿ.

ಮಾಧ್ಯಮದವರ ಜತೆ ಮಾತುಕತೆ
ನವದೆಹಲಿಯ ಸಂಸತ್ ನಲ್ಲಿ ಮುಂಗಾರು ಅಧಿವೇಶನ ನಡೆಯುತ್ತಿದ್ದು, ಗುರುವಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮಾಧ್ಯಮದವರ ಮಾತನಾಡಿದರು.

ಸಿಟ್ಟು ತರಿಸಿದ ನಿತೀಶ್ ನಗು ಇದೇ ಇರಬಹುದಾ?
ಬಿಹಾರದಲ್ಲಿ ಗುರುವಾರ ಪ್ರಮಾಣವಚನ ಸ್ವೀಕಾರ ಸಮಾರಂಭದ ನಂತರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾಗಿದ್ದು ಹೀಗೆ.

ಹಾಡುಗಳ ಬಿಡುಗಡೆ
ಮುಂಬೈನಲ್ಲಿ ನಡೆದ ಜಬ್ ಹ್ಯಾರಿ ಮೆಟ್ ಸೆಜಲ್ ಸಿನಿಮಾದ ಹಾಡುಗಳ ಬಿಡುಗಡೆ ಸಮಾರಂಭದಲ್ಲಿ ನಟ ಶಾರುಕ್ ಖಾನ್, ಅನುಷ್ಕಾ ಶರ್ಮಾ, ನಿರ್ದೇಶಕ ಇಮ್ತಿಯಾಜ್ ಆಲಿ ಕಾಣಿಸಿಕೊಂಡರು.

ವಿಕೆಟ್ ಪಡೆದ ಸಂಭ್ರಮ
ಗಾಲೆಯಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ನ ಎರಡನೇ ದಿನ ಧನುಷ್ಕ್ ಗುಣತಿಲಕ ಅವರ ವಿಕೆಟ್ ಪಡೆದ ಮೊಹಮ್ಮದ್ ಶಮಿ ಸಂಭ್ರಮಿಸಿದ ಬಗೆ ಇದು.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications