ತಮಿಳುನಾಡು ಪೊಲೀಸ್ ಇಲಾಖೆಗೆ ಮಾನವ ಹಕ್ಕು ಆಯೋಗದ ನೋಟಿಸ್
ಜಲ್ಲಿಕಟ್ಟು ಪ್ರತಿಭಟನೆ ವೇಳೆ ಪೊಲೀಸರೇ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಬೆಂಕಿ ಇಟ್ಟಿದ್ದಾರೆಂಬ ಆರೋಪಗಳಿಗೆ ಪ್ರತಿಕ್ರಿಯೆ ಕೇಳಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ
ನವದೆಹಲಿ, ಜನವರಿ 24: ಜಲ್ಲಿಕಟ್ಟು ಕ್ರೀಡೆಗೆ ಸಂಬಂಧಿಸಿದಂತೆ ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಪ್ರತಿಭಟನೆ ವೇಳೆ ನಗರದ ಪೊಲೀಸರಿಂದಲೇ ನಡೆದಿದೆ ಎನ್ನಲಾದ ಕೆಲವಾರು ಪ್ರಕರಣಗಳ ಬಗ್ಗೆ ವಿವರಣೆ ನೀಡುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ ಸಿ) ತಮಿಳುನಾಡು ಸರ್ಕಾರ ಹಾಗೂ ಅಲ್ಲಿನ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿದೆ.
ಗಲಾಟೆ ನಡೆಯುವ ವೇಳೆ, ಕೆಲ ಪೊಲೀಸರೇ ಸಾರ್ವಜನಿಕ ಆಸ್ತಿಪಾಸ್ತಿಗೆ ಧಕ್ಕೆ ತರುವಂಥ ಕೆಲವಾರು ದೃಶ್ಯಗಳು ವಾಹಿನಿಗಳಲ್ಲಿ ಎರಡು ದಿನಗಳ ಹಿಂದೆ ಬಿತ್ತರಗೊಂಡು ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿದ್ದವು. ಇವನ್ನು ಪೊಲೀಸರೇ ಮಾಡಿದರೆ ಅಥವಾ ಪೊಲೀಸು ಸಮವಸ್ತ್ರ ಧರಿಸಿ ಬಂದ ಕಿಡಿಗೇಡಿಗಳು ಇಂಥ ಕೃತ್ಯಗಳನ್ನು ನಡೆಸಿದರೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಆದರೂ, ಮಾಧ್ಯಮಗಳಲ್ಲಿ ಬಂದಿರುವ ದೃಶ್ಯಾವಳಿಗಳನ್ನು ಗಂಭೀರವಾಗಿ ಪರಿಗಣಿಸಿರುವ ಎನ್ಎಚ್ಆರ್ ಸಿಯು, ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ನೋಟಿಸ್ ಜಾರಿಗೊಳಿಸಿದೆ. ತಮಿಳುನಾಡು ಸರ್ಕಾರ, ಸರ್ಕಾರದ ಮುಖ್ಯ ಕಾರ್ಯದರ್ಶಿ, ತಮಿಳುನಾಡು ಪೊಲೀಸ್ ಮಹಾ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಲಾಗಿದ್ದು, ಅವರು ಪ್ರಕರಣದ ಬಗ್ಗೆ ಉತ್ತರಿಸಬೇಕಿದೆ.[ನಿಮಿಷದಲ್ಲಿ ಪಾಸಾಯ್ತು ಜಲ್ಲಿಕಟ್ಟು ಮಸೂದೆ!]
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications