ಪತ್ನಿಯಿಂದ ವಿಚ್ಛೇದನ ಸಿಕ್ಕ ಖುಷಿಗೆ ಪತಿ ಮಾಡಿದ್ದೇನು ಗೊತ್ತಾ?; ದೇಶಾದ್ಯಂತ ವಿಚಿತ್ರ ವಿಡಿಯೋ ಭಾರೀ ವೈರಲ್
ಇತ್ತೀಚಿನ ದಿನಗಳಲ್ಲಿ ವಿವಾಹವಾದ ಕೆಲವೇ ದಿನಗಳಲ್ಲಿ ವಿಚ್ಛೇದನದ ಕಡೆ ಮುಖ ಮಾಡುವವರ ಸಂಖ್ಯೆ ಹೆಚ್ಚಾಗಿಬಿಟ್ಟಿದೆ. ಅದರಲ್ಲೂ ಸೆಲೆಬ್ರೆಟಿಗಳು, ಗಣ್ಯ ವ್ಯಕ್ತಿಗಳು, ರಾಜಕಾರಣಿಗಳು ಈ ನಿರ್ಧಾರ ತೆಗೆದುಕೊಂಡರೆ ಸಾಕು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿಬಿಡುತ್ತದೆ. ಇದೀಗ ಈ ನಡುವೆಯೂ ಪತ್ನಿಯಿಂದ ವಿಚ್ಛೇದನ ಪಡೆದಿದ್ದಕ್ಕೆ ಪತಿ ಮಾಡಿದ ವಿಚಿತ್ರ ಘಟನೆಯೊಂದು ಅಷ್ಟೇ ಸದ್ದು ಮಾಡುತ್ತಿದೆ. ಹಾಗಾದ್ರೆ ಆತ ಮಾಡಿದ್ದಾದ್ರೂ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಪತ್ನಿಯಿಂದ ವಿಚ್ಛೇದನ ಪಡೆದ ಪತಿ 40 ಲೀಟರ್ ಹಾಲಿನಲ್ಲಿ ಸ್ನಾನ ಮಾಡಿ ಸಂಭ್ರಮಿಸಿರುವ ವಿಚಿತ್ರ ಘಟನೆ ಅಸ್ಸಾಂನ ನಲ್ಬರಿ ಜಿಲ್ಲೆಯ ಬಾರ್ಲಿಯಾಪರ್ನಲ್ಲಿ ನಡೆದಿದೆ. ಮಾಣಿಕ್ ಅಲಿ ಹಾಲಿನಿಂದ ಸ್ನಾನ ಮಾಡಿದ ವ್ಯಕ್ತಿಯಾಗಿದ್ದಾರೆ.

ಸ್ನಾನದ ವಿಡಿಯೋ ಮಾಡಿಕೊಳ್ಳುತ್ತಾ, ನಾನು ಈಗ ಸ್ವತಂತ್ರ ಎಂದು ಹೇಳಿಕೊಂಡಿದ್ದಾನೆ. ಕಾನೂನಿನ ಮೂಲಕ ಪತ್ನಿಯಿಂದ ವಿಚ್ಛೇದನ ಪಡೆದಿದ್ದೇನೆ. ನಾನು ಇಂದಿನಿಂದ ಸ್ವತಂತ್ರವಾಗಿದ್ದೇನೆ. ಶುದ್ಧೀಕರಣ ಮತ್ತು ಬಿಡುಗಡೆಯ ಸಾಂಕೇತಿಕವಾಗಿ 40 ಲೀಟರ್ ಹಾಲು ತಂದು ಸ್ನಾನ ಮಾಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದು, ಈ ವಿಡಿಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
ಪತ್ನಿ ತನ್ನ ಪ್ರಿಯಕರನೊಂದಿಗೆ ಆಗಾಗ ಓಡಿಹೋಗುತ್ತಲಿದ್ದಳು. ನಾನು ನಮ್ಮ ಕುಟುಂಬದ ಗೌರವ ಹಾಗೂ ಶಾಂತಿಗಾಗಿ ಮೌನ ಆಗಿದ್ದೆ. ಬಳಿಕ ವಿಚ್ಛೇದನ ಪಡೆಯಲು ನಿರ್ಧರಿಸಿದ್ದೆವು. ನನ್ನ ವಕೀಲರು ಕರೆ ಮಾಡಿ ವಿಚ್ಛೇದನ ಸಿಕ್ಕ ಮಾಹಿತಿ ನೀಡಿದರು ಎಂದು ಮಾಣಿಕ್ ಅಲಿ ಹೇಳಿಕೊಂಡಿದ್ದಾನೆ. ಅಲ್ಲದೆ, ಈತ ಹಾಲಿನಲ್ಲೇ ಸ್ನಾನ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ.
Manik Ali from Assam celebrated his divorce with wife in a way that grabbed much attention.
— Vani Mehrotra (@vani_mehrotra) July 13, 2025
He bathed in 40 litres of milk soon after his lawyer confirmed to him that the divorce process was complete, as per multiple media reports. pic.twitter.com/RVehKtRYJg
ಇತ್ತೀಚಿನ ದಿನಗಳಲ್ಲಿ ವಿಚ್ಛೇದನ ಎನ್ನುವುದು ಸಾಮಾನ್ಯ ಆಗಿಬಿಟ್ಟಿದೆ. ಅದರಲ್ಲೂ ಮಾಹಿತಿ ಪ್ರಕಾರ, ಪ್ರೀತಿಸಿ ಮದುವೆಯಾಗಿರುವವರೇ ಹೆಚ್ಚಾಗಿ ದುಡುಕಿ ಈ ನಿರ್ಧಾರಕ್ಕೆ ಇಳಿಯುತ್ತಿದ್ದಾರೆ. ಬಳಿಕ ಪಡಬಾರದ ಕಷ್ಟ ಪಟ್ಟಿರುವ ಉದಾಹರಣೆಗಳು ಸಹ ಇವೆ. ಮನೆಯಲ್ಲೇ ಕುಳಿತುಕೊಂಡು ಬರೆಹರಿಸಿಕೊಳ್ಳುವ ಚಿಕ್ಕ ಚಿಕ್ಕ ವಿಚಾರವನ್ನು ದೊಡ್ಡ ಮಟ್ಟದ ಜಗಳಕ್ಕೆ ತೆಗೆದುಕೊಂಡು ಹೋಗಿಬಿಡುತ್ತಾರೆ. ಕೊನೆಗೆ ಕೋರ್ಟ್ ಮೆಟ್ಟಿಲೇರಿ ವಿಚ್ಚೇದನಕ್ಕೆ ಮುಂದಾಗುತ್ತಿದ್ದಾರೆ.
ಇನ್ನೂ ಕೆಲ ದಂಪತಿಗಳು ಸಣ್ಣಪುಟ್ಟ ವಿಚಾರಕ್ಕೆ ಜಗಳ ಆಡಿಕೊಂಡು ಕೊಲೆ ಹಂತಕ್ಕೂ ಹೋಗಿರುವ ಉದಾಹರಣೆಗಳಿವೆ. ಆದರೆ, ಇದೀಗ ಅಸ್ಸಾಂನಲ್ಲಿ ನಡೆದಿರುವ ವಿಚ್ಚೇದನ ಪ್ರಕರಣ ತುಸು ವಿಚಿತ್ರವಾಗಿದೆ. ಒಟ್ಟಿನಲ್ಲಿ, ಹೇಳೋದಾದ್ರೆ ದಂಪತಿಗಳಿಬ್ಬರಲ್ಲೂ ಹೊಂದಾಣಿಕೆ ಮನೋಭಾವ ಇದ್ದರೆ ಇಲ್ಲಿಯವರೆಗೂ ವಿಷಯ ಇಲ್ಲಿಯವರೆಗೂ ಹೋಗುವುದಿಲ್ಲ.
-
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
Free Biryani: ಒಂದು ಸಿಲಿಂಡರ್ ಕೊಡಿ, ತಿಂಗಳು ಪೂರ್ತಿ ಉಚಿತ ಬಿರಿಯಾನಿ ತಿನ್ನಿ: ಹೊಸೂರು ಹೋಟೆಲ್ನಿಂದ ಭರ್ಜರಿ ಆಫರ್ -
Viral Video: ತೆಂಗಿನ ಚಿಪ್ಪನ್ನು ಮಗುವಿನ ಶೌಚಾಲಯ ಮಾಡಿಕೊಂಡ ದಂಪತಿ, ವಿಡಿಯೋ ವೈರಲ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications