Hyderabad- Bengaluru Bus: ಅಗ್ನಿ ಕೆನ್ನಾಲಿಗೆಯಿಂದ ಈ ಕಾರಣಕ್ಕೆ ಜೀವ ಉಳಿಸಿಕೊಂಡ 12 ಜನ, ಉಳಿದವರು ಸಜೀವ ದಹನ!
Hyderabad- Bengaluru Bus Accident: ಹೈದರಾಬಾದ್ - ಬೆಂಗಳೂರು ಬಸ್ ಅಗ್ನಿ ದುರಂತದಲ್ಲಿ 25ಕ್ಕೂ ಹೆಚ್ಚು ಜನ ಮೃತಪಟ್ಟಿದ್ದು, ಈ ದುರಂತದಲ್ಲಿ 12 ಜನ ಪವಾಡ ದೃಶ್ಯವಾಗಿ ಬದುಕುಳಿದಿದ್ದಾರೆ. ಹೈದರಾಬಾದ್ - ಬೆಂಗಳೂರು ಬಸ್ ದುರಂತವು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಈ ದುರಂತದಲ್ಲಿ ಕನ್ನಡಿಗರೂ ಸಹ ಮೃತಪಟ್ಟಿರುವ ಸಾಧ್ಯತೆ ಇದೆ. ಈ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ತನಿಖೆ ನಡೆದಿದೆ. ಅಗ್ನಿ ಕೆನ್ನಾಲಿಗೆಯಿಂದ 12 ಜನ ಪಾರಾಗಿದ್ದಾರೆ.
ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಆಂಧ್ರಪ್ರದೇಶದ ಕರ್ನೂಲು ಬಳಿ ಅಪಘಾತಕ್ಕೀಡಾಗಿದ್ದು, ಈ ದುರಂತದಲ್ಲಿ 25ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಕಾರಣ ಬೆಂಕಿಯ ತೀವ್ರತೆ ಆ ಪ್ರಮಾಣದಲ್ಲಿತ್ತು. ಬಸ್ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರಲ್ಲಿ ಕೇವಲ 12 ಜನ ಮಾತ್ರ ಪ್ರಾಣ ಉಳಿಸಿಕೊಂಡಿದ್ದಾರೆ ಎನ್ನಲಾಗಿದೆ. ಸಾವಿನ ಸಂಖ್ಯೆಯ ಬಗ್ಗೆ ಆಂಧ್ರಪ್ರದೇಶ ಪೊಲೀಸರು ಇನ್ನಷ್ಟೇ ನಿಖರ ಮಾಹಿತಿ ನೀಡಬೇಕಾಗಿದೆ.

ಕಾವೇರಿ ಟ್ರಾವೆಲ್ಸ್ಗೆ ಸೇರಿದ (ಡಿಡಿ01 ಎನ್ 9490) ವೋಲ್ವೋ ಬಸ್ ಕರ್ನೂಲು ಜಿಲ್ಲೆಯ ಚಿನ್ನ ಟೇಕೂರು ಗ್ರಾಮದ ಬಳಿ ಶುಕ್ರವಾರ (ಅಕ್ಟೋಬರ್ 24ರಂದು) ಬೈಕ್ಗೆ ಡಿಕ್ಕಿ ಹೊಡೆದು ಈ ದಾರುಣ ದುರಂತ ಸಂಭವಿಸಿತ್ತು. ಪ್ರಯಾಣಿಕರೆಲ್ಲರೂ ಈ ವೇಳೆ ಗಾಢ ನಿದ್ರೆಯಲ್ಲಿದ್ದರು. ಇದರಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ ಎಂದು ಹೇಳಲಾಗಿದೆ. ಎಸಿ ಬಸ್ ಆಗಿದ್ದರಿಂದ ಹೊಗೆ ಆವರಿಸುತ್ತಿದ್ದಂತೆ ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದಾರೆ ಯಾರಿಗೂ ಏನು ಮಾಡಬೇಕು ಎಂದು ತೋಚಿಲ್ಲ. ಆರಂಭದಲ್ಲಿ ಸಣ್ಣದಾಗಿದ್ದ ಬೆಂಕಿಯನ್ನು ಚಾಲಕ ಹಾಗೂ ಸಹಾಯಕ ನೀರಿನ ಬಾಟಲಿಯಿಂದ ನಂದಿಸುವುದಕ್ಕೆ ಪ್ರಯತ್ನಿಸಿದ್ದಾರಾದರೂ ಸಾಧ್ಯವಾಗಿಲ್ಲ ಎನ್ನಲಾಗಿದೆ.
ಪ್ರಾಣ ಉಳಿಸಿಕೊಂಡ 12 ಜನ: ಇನ್ನು ಈ ದುರಂತದಲ್ಲಿ 12 ಜನ ಪ್ರಾಣ ಉಳಿಸಿಕೊಂಡಿದ್ದಾರೆ. ಬೆಂಕಿ ಹರಡುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಪ್ರಯಾಣಿಕರು ಬಸ್ನಿಂದ ಹೊರ ಬರುವುದಕ್ಕೆ ದಾರಿ ನೋಡಿದ್ದಾರೆ, ಕೂಡಲೇ ಬಸ್ನ ಕಿಟಕಿ ಗಾಜುಗಳನ್ನು ಒಡೆದು ಹೊರಗೆ ಹಾರುವ ಮೂಲಕ ಪ್ರಾಣ ಉಳಿಸಿಕೊಂಡಿದ್ದಾರೆ. ಆದರೆ, ಈ ಹಂತದಲ್ಲಿ ಹೆಚ್ಚಿನವರಿಗೆ ಗಂಭೀರವಾದ ಸುಟ್ಟ ಗಾಯಗಳಾಗಿವೆ. ಬಸ್ನಿಂದ ಹೊರಬರಲು ಸಾಧ್ಯವಾಗದ 32 ಜನ ಸಜೀವ ದಹನವಾಗಿದ್ದಾರೆ ಎಂದು ಹೇಳಲಾಗಿದೆ. ಆದರೆ ಸಾವಿನ ಸಂಖ್ಯೆಯ ಬಗ್ಗೆ ಇನ್ನಷ್ಟೇ ನಿಖರ ಮಾಹಿತಿ ಲಭ್ಯವಾಗಬೇಕಾಗಿದೆ.
ಚಂದ್ರಬಾಬು ನಾಯ್ಡು ಟ್ವೀಟ್: ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಟ್ವೀಟ್ ಮಾಡಿದ್ದಾರೆ. ಕರ್ನೂಲ್ ಜಿಲ್ಲೆಯ ಚಿನ್ನಾ ಟೇಕೂರ್ ಗ್ರಾಮದ ಬಳಿ ಸಂಭವಿಸಿದ ಭೀಕರ ಬಸ್ ಬೆಂಕಿ ಅಪಘಾತದ ವಿಷಯ ಕೇಳಿ ನನಗೆ ಆಘಾತವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಮತ್ತು ಬಾಧಿತ ಕುಟುಂಬಗಳಿಗೆ ಸರ್ಕಾರಿ ಅಧಿಕಾರಿಗಳು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಪರಿಹಾರ ವಿಚಾರಗಳು ಇನ್ನಷ್ಟೇ ನಿಗದಿಯಾಗಬೇಕಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications