ಹೈದರಾಬಾದ್; ಓವೈಸಿ ಎದುರಾಳಿ ಬಿಜೆಪಿ ಅಭ್ಯರ್ಥಿ ಆಸ್ತಿ 221 ಕೋಟಿ!
ಹೈದರಾಬಾದ್, ಏಪ್ರಿಲ್ 26: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇಶದ ಕುತೂಹಲ ಕೆರಳಿಸಿರುವ ಕ್ಷೇತ್ರಗಳಲ್ಲಿ ಹೈದರಾಬಾದ್ ಸಹ ಒಂದು. ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಪ್ರತಿನಿಧಿಸುವ ಕ್ಷೇತ್ರವಿದು. ಬಿಜೆಪಿ ಒವೈಸಿಗೆ ಎದುರಾಳಿಯಾಗಿ ಮಹಿಳೆಯನ್ನು ಕಣಕ್ಕಿಳಿಸಿದೆ.
ಹೈದರಾಬಾದ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ ಮಾಡಿರುವ ಬಿಜೆಪಿ ಅಭ್ಯರ್ಥಿ ಕೆ. ಮಾಧವಿ ಲತಾ ಅವರು 221 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವಾಗಿ ಘೋಷಣೆ ಮಾಡಿದ್ದಾರೆ. ಮೇ 13ರಂದು ದೇಶದ 3ನೇ ಹಂತದ ಮತದಾನ ನಡೆಯುವಾಗ ಹೈದರಾಬಾದ್ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ.

ಮಾಧವಿ ಲತಾ ಆಸ್ತಿ ವಿವರ: ಬಿಜೆಪಿ ಅಭ್ಯರ್ಥಿ ಕೆ. ಮಾಧವಿ ಲತಾ ಅವರು 221 ಕೋಟಿ ಮೌಲ್ಯದ ಸ್ಥಿರ ಮತ್ತು ಚರಾಸ್ತಿ ಹೊಂದಿದ್ದೇನೆ ಎಂದು ಘೋಷಣೆ ಮಾಡಿದ್ದಾರೆ. ಮಾಧವಿ ಅವರ ಕುಟುಂಬ ವಿರಿಂಚಿ ಕಂಪನಿಯಲ್ಲಿ 94.44 ಕೋಟಿ ಮೌಲ್ಯದ 2.94 ಕೋಟಿ ಷೇರುಗಳನ್ನು ಹೊಂದಿದೆ.
ಕೆ. ಮಾಧವಿ ಲತಾ ಅವರ ಪತಿ ವಿಶ್ವನಾಥ ಕಂಪಲ್ಲೆ ಮದ್ರಾಸ್ ಐಐಟಿಯಿಂದ ಪದವಿ ಪಡೆದವರು. ಫಿನ್ಟೆಕ್ ಅಂಡ್ ಹೆಲ್ತ್ ಕೇರ್ ಕಂಪನಿ ಸಂಸ್ಥಾಪಕರೂ ಸಹ ಹೌದು. ಮಾಧವಿ ಅವರ ಬಳಿ 165.46 ಕೋಟಿ ಚರಾಸ್ತಿ ಮತ್ತು 55.92 ಕೋಟಿಯಷ್ಟು ಸ್ತಿರಾಸ್ತಿ ಇದೆ ಎಂದು ನಾಮಪತ್ರದೊಂದಿಗೆ ಪ್ರಮಾಣ ಪತ್ರವನ್ನು ಸಲ್ಲಿಕೆ ಮಾಡಿದ್ದಾರೆ.
ರಾಜಕೀಯ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ ಕೆ. ಮಾಧವಿ ಲತಾ ಮತ್ತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ನಡುವೆ ಈ ಬಾರಿಯ ಚುನಾವಣೆಯಲ್ಲಿ ತೀವ್ರ ಪೈಪೋಟಿ ನಿರೀಕ್ಷೆ ಮಾಡಲಾಗಿದೆ. ಉಭಯ ಅಭ್ಯರ್ಥಿಗಳು ಸಹ ಬಿರುಸಿನಿಂದ ಪ್ರಚಾರವನ್ನು ನಡೆಸುತ್ತಿದ್ದಾರೆ.
ಹೈದರಾಬಾದ್ ಕ್ಷೇತ್ರದಲ್ಲಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಬಹಳಷ್ಟು ಪ್ರಭಾವ ಹೊಂದಿದ್ದಾರೆ. ಬಿಜೆಪಿ ಅವರ ಎದುರಾಳಿಯಾಗಿ ಮಹಿಳೆಯನ್ನು ಕಣಕ್ಕಿಳಿಸುವ ಮೂಲಕ ಚುನಾವಣಾ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.
ಕ್ಷೇತ್ರದಲ್ಲಿ ಬಿಜೆಪಿಯ ಕೆ. ಮಾಧವಿ ಲತಾ, ಎಐಎಂಐಎಂನಿಂದ ಅಸಾದುದ್ದೀನ್ ಒವೈಸಿ ಮತ್ತು ಕಾಂಗ್ರೆಸ್ನಿಂದ ವಲಿಯುಲ್ಲಾ ಸಮೀರ್ ಅಭ್ಯರ್ಥಿಗಳು. ಅಸಾದುದ್ದೀನ್ ಒವೈಸಿ 23.87 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ.
ಕೆ. ಮಾಧವಿ ಲತಾ ಅವರು ಮೊದಲ ಬಾರಿಗೆ ಚುನಾವಣೆಯನ್ನು ಎದುರಿಸುತ್ತಿದ್ದಾರೆ. ಹೈದರಾಬಾದ್ ಕ್ಷೇತ್ರ ಎಐಎಂಐಎಂ ಭದ್ರಕೋಟೆ. ಅಸಾದುದ್ದೀನ್ ಒವೈಸಿ ಹಾಲಿ ಸಂಸದರು. 2004ರಿಂದ ನಾಲ್ಕು ಬಾರಿ ಅವರು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಅವರ ತಂದೆ ಸುಲ್ತಾನ್ ಸಲಾವುದ್ದೀನ್ ಓವೈಸಿ 6 ಬಾರಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.
ಬಿಜೆಪಿ ಅಭ್ಯರ್ಥಿ ಕೆ. ಮಾಧವಿ ಲತಾ ಹಿಂದುತ್ವದ ಹೆಸರಿನಲ್ಲಿ ಮತ ಕೇಳುತ್ತಿದ್ದಾರೆ. ಹೈದರಾಬಾದ್ ಮೂಲದ ವಿರಿಂಚಿ ಆಸ್ಪತ್ರೆಗಳ ಅಧ್ಯಕ್ಷರು. ವಿದ್ಯಾರ್ಥಿಯಾಗಿದ್ದಾಗ ಎನ್ಸಿಸಿಯಲ್ಲಿದ್ದ ಅವರು, ಭರತನಾಟ್ಯ ಕಲಾವಿದರೂ ಹೌದು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications