Smile Designing Surgery: ಹಲ್ಲು ಚಂದ ಕಾಣಿಸಲು ಹೋಗಿ ಪ್ರಾಣ ಕಳೆದುಕೊಂಡ ವ್ಯಕ್ತಿ!
ಹೈದರಾಬಾದ್ ಫೆಬ್ರವರಿ 20: ಚಂದ ಕಾಣಿಸಬೇಕು ಅನ್ನೋ ಆಸೆ ಯಾರಿಗೆ ತಾನೆ ಇರೋದಿಲ್ಲ ಹೇಳಿ. ಭೂಮಿ ಮೇಲೆ ಇರುವ ಪ್ರತಿಯೊಬ್ಬ ಮನುಷ್ಯನಿಗೂ ಚಂದವಾಗಿ ಕಾಣಬೇಕು ಅನ್ನೋ ಆಸೆ ಇರುತ್ತದೆ. ಆದರೆ ಇಲ್ಲೊಬ್ಬ ವ್ಯಕ್ತಿ ತನ್ನ ಹಲ್ಲು ಚಂದಕಾಣಿಸಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿದ್ದಾನೆ.
ಹೌದು... ಹೈದರಾಬಾದಿನ ದಂತ ಚಿಕಿತ್ಸಾಲಯದಲ್ಲಿ 28 ವರ್ಷದ ಯುವಕನೊಬ್ಬ ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆಯ (Smile Designing Surgery) ಸಮಯದಲ್ಲಿ ಸಾವನ್ನಪ್ಪಿದ್ದಾನೆ. ಲಕ್ಷ್ಮಿ ನಾರಾಯಣ ಮೃತ ದುರ್ದೈವಿ. ಫೆಬ್ರವರಿ 16 ರಂದು ಈ ಘಟನೆ ಸಂಭವಿಸಿದೆ. ಅನಸ್ತೇಷಿಯಾ ಮಿತಿಮೀರಿದ ಸೇವನೆಯಿಂದ ಲಕ್ಷ್ಮಿ ನಾರಾಯಣ ನಿಧನರಾಗಿದ್ದಾರೆ.

ತಮ್ಮ ಮದುವೆಗೆ ತಾವು ಚಂದ ಕಾಣಿಸಬೇಕು ಎಂದು ಮದುವೆಗೆ ಮುಂಚಿತವಾಗಿ ತನ್ನ ನಗುವಿನ ಸೌಂದರ್ಯ ಹೆಚ್ಚಿಸಲು ಅವರು ಯೋಚಿಸಿದ್ದಾರೆ. ಇದಕ್ಕಾಗಿ ದಂತ ಚಿಕಿತ್ಸಾಲಯಕ್ಕೆ ಭೇಟಿ ನೀಡಿದ್ದಾರೆ. ಹಲ್ಲಿನ ಸೌಂದರ್ಯ ಹೆಚ್ಚಳಕ್ಕೆ ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಮುಂದಾಗಿದ್ದಾರೆ.
ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆ ವೇಳೆ ಲಕ್ಷ್ಮಿ ನಾರಾಯಣ ಒಬ್ಬರೇ ಕ್ಲಿನಿಕ್ಗೆ ಹೋಗಿದ್ದರು. ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆ ಮಾಡಿಸುವ ಅದೇ ದಿನ ಸಂಜೆ ತಂದೆ ವಿಂಜಂ ರಾಮುಲು ಅವರು ಲಕ್ಷ್ಮಿ ನಾರಾಯಣ ಫೋನ್ಗೆ ಕರೆ ಮಾಡಿದ್ದಾರೆ. ಆಗ ಕರೆಯನ್ನು ಕ್ಲಿನಿಕ್ ಸಿಬ್ಬಂದಿ ಸ್ವೀಕರಿಸಿದ್ದಾರೆ.
ಸಿಬ್ಬಂದಿ ನಿಮ್ಮ ಮಗ ಪ್ರಜ್ಞಾಹೀನನಾಗಿ ಬಿದ್ದಿದ್ದಾನೆ ಎಂದು ನಾರಾಯಣ್ ಅವರ ತಂದೆಗೆ ತಿಳಿಸಿದ್ದಾರೆ. ತಕ್ಷಣ ನಾರಾಯಣ್ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರು ತಲುಪುವಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು ಎಂದು ಅವರ ಕುಟುಂಬದವರು ಹೇಳಿದ್ದಾರೆ.
ಕುಟುಂಬ ದಂತ ಚಿಕಿತ್ಸಾಲಯದ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 ಎ ಅಡಿಯಲ್ಲಿ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ದೂರು ದಾಖಲಿಸಿದೆ. ಶಶ್ತ್ರಚಿಕಿತ್ಸೆಯ ಸಮಯದಲ್ಲಿ ನಾರಾಯಣ್ ಅವರಿಗೆ ಹೆಚ್ಚಿನ ಪ್ರಮಾಣದಲ್ಲಿ ಅರಿವಳಿಕೆ ನೀಡಲಾಗಿತ್ತು. ಇದು ಅವರ ಸಾವಿಗೆ ಕಾರಣವಾಯಿತು ಎಂದು ಕುಟುಂಬದವರು ದೂರಿನಲ್ಲಿ ಆರೋಪಿಸಿದ್ದಾರೆ. ಪೊಲೀಸರು ಕ್ಲಿನಿಕ್ನಿಂದ ಸಿಸಿಟಿವಿ ಪುರಾವೆಗಳನ್ನು ಸಂಗ್ರಹಿಸಿದ್ದು, ಪ್ರಕರಣದ ಮುಂದಿನ ತನಿಖೆ ನಡೆಸುತ್ತಿದ್ದಾರೆ.
-
Harish Rana: ಭಾರತದ ಮೊದಲ ದಯಾಮರಣದ ಹಕ್ಕುದಾರ ಹರೀಶ್ ರಾಣಾ ನಿಧನ, ಕುಟುಂಬಸ್ಥರಿಂದ ಅಂಗಾಂಗ ದಾನ -
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ











Click it and Unblock the Notifications