Hyderabad: ಪ್ರೇಮಿಯನ್ನು ಕೊಂದು ವಿವಾಹಿತ ಅರ್ಚಕ, ದೇವಸ್ಥಾನದ ಬಳಿ ಶವ ಪತ್ತೆ
ಅರ್ಚಕನೊಬ್ಬ 30 ವರ್ಷದ ಪ್ರೇಮಿಯನ್ನು ಕೊಂದು ಎಸೆದ ಭಯಾನಕ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಅಯ್ಯಗಾರಿ ಸಾಯಿಕೃಷ್ಣ ಎಂದು ಗುರುತಿಸಲಾದ ವಿವಾಹಿತ ಅರ್ಚಕ ಈ ಕೃತ್ಯವನ್ನು ಎಸಗಿದ್ದಾನೆ. ಈತನ ಮೇಲೆ ಮಹಿಳೆಯನ್ನು ಕೊಂದು ಶವವನ್ನು ತೆಲಂಗಾಣದ ಸರೂರ್ನಗರದ ರಿಜಿಸ್ಟ್ರಾರ್ ಕಚೇರಿಯ ಹಿಂಭಾಗದ ಒಳಚರಂಡಿಗೆ ಎಸೆದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಅಯ್ಯಗಾರಿ ಸಾಯಿಕೃಷ್ಣ ಸಂತ್ರಸ್ತೆ ಅಪ್ಸರಾಳ ಕಾಣೆಯಾಗಿದ್ದಾಳೆ ಎನ್ನುವ ದೂರನ್ನು ನೀಡಿದ್ದಾನೆ. ನಾಪತ್ತೆ ದೂರು ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ತೆ ಅಪ್ಸರಾಳನ್ನು ಭದ್ರಾಚಲಂಗೆ ತೆರಳಲು ಮುಂದಾಗಿದ್ದ ವೇಳೆ ಶಂಶಾಬಾದ್ ಬಸ್ ನಿಲ್ದಾಣದಲ್ಲಿ ಡ್ರಾಪ್ ಮಾಡಿರುವುದಾಗಿ ಸಾಯಿಕೃಷ್ಣ ದೂರು ದಾಖಲು ಮಾಡಿದ್ದಾನೆ. ಅಂದಿನಿಂದ ಅವಳು ಯಾವುದೇ ಕರೆಗಳಿಗೆ ಪ್ರತಿಕ್ರಿಯಿಸಲಿಲ್ಲ ಎಂದಿದ್ದಾನೆ. ಮೇ 3 ರಿಂದ ಆಕೆ ನಾಪತ್ತೆಯಾಗಿದ್ದಾಳೆ ಎಂದು ಅಯ್ಯಗಾರಿ ಸಾಯಿಕೃಷ್ಣ ಅವರು ಹೇಳಿದರು.

ತನ್ನ ದೂರಿನಲ್ಲಿ ಸಾಯಿಕೃಷ್ಣ ಮಹಿಳೆಯನ್ನು ತನ್ನ ಸೊಸೆ ಎಂದು ಹೇಳಿಕೊಂಡಿದ್ದಾನೆ. ಆದಾಗ್ಯೂ ತನಿಖೆ ಮುಂದುವರೆದಂತೆ ಸಿಸಿಟಿವಿಗಳು ಮತ್ತು ಇತರ ತಾಂತ್ರಿಕ ಡೇಟಾವನ್ನು ಶೋಧಿಸಿದ ನಂತರ ಸಾಯಿಕೃಷ್ಣ ಅವರ ಬಗ್ಗೆ ಪೊಲೀಸರಿಗೆ ಅನುಮಾನ ಮೂಡಿದೆ.
ನಂತರ ವಿಚಾರಣೆ ವೇಳೆ ಸಾಯಿಕೃಷ್ಣ ತಪ್ಪೊಪ್ಪಿಕೊಂಡಿದ್ದು, ತಾನು ಅಪ್ಸರಾಳನ್ನು ಕೊಂದಿರುವುದಾಗಿ ಬಹಿರಂಗಪಡಿಸಿದ್ದಾನೆ. ಪೊಲೀಸರ ಪ್ರಕಾರ, ಸಾಯಿಕೃಷ್ಣನಿಗೆ ಈಗಾಗಲೇ ಮದುವೆಯಾಗಿ ಇಬ್ಬರು ಮಕ್ಕಳಿದ್ದರು. ಆದರೆ, ಅಪ್ಸರಾ ಜೊತೆ ವಿವಾಹೇತರ ಸಂಬಂಧ ಹೊಂದಿದ್ದ.
ಸಾಯಿಕೃಷ್ಣ ಅವರ ತಪ್ಪೊಪ್ಪಿಗೆ ಪ್ರಕಾರ, ಅಪ್ಸರಾ ತನ್ನನ್ನು ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದಳು. ಹೀಗಾಗಿ ಸಾಯಿಕೃಷ್ಣ ಆಕೆಯ ಹತ್ಯೆ ಮಾಡಿರುವುದಾಗಿ ಹೇಳಿಕೊಂಡಿದ್ದಾನೆ.
ಪೊಲೀಸರ ಪ್ರಕಾರ, ಆರೋಪಿ ಶಂಶಾಬಾದ್ನಲ್ಲಿ ಅಪ್ಸರಾವನ್ನು ಕೊಂದು ನಂತರ ಸರೂರ್ನಗರಕ್ಕೆ ಸಾಗಿಸುವ ಮೊದಲು ಶವವನ್ನು ಪ್ಲಾಸ್ಟಿಕ್ ಕವರ್ನಲ್ಲಿ ಪ್ಯಾಕ್ ಮಾಡಿದ್ದನು. ಅವರು ಅರ್ಚಕರಾಗಿ ಸೇವೆ ಸಲ್ಲಿಸಿದ ದೇವಸ್ಥಾನದ ಸಮೀಪವಿರುವ ಎಂಆರ್ಒ ಕಚೇರಿಯ ಹಿಂಭಾಗದ ಮ್ಯಾನ್ಹೋಲ್ಗೆ ಶವವನ್ನು ಎಸೆದ್ದನು. ಸಾಯಿಕೃಷ್ಣ ವಿರುದ್ಧ ಪ್ರಕರಣ ದಾಖಲಾಗಿದ್ದು, ಪ್ರಕರಣದ ಮುಂದಿನ ತನಿಖೆ ನಡೆಯುತ್ತಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications