ನಾನು ಆರೋಗ್ಯವಾಗಿದ್ದೇನೆː ಅಬ್ದುಲ್ ಕಲಾಂ
ನವದೆಹಲಿ, ಅ. 23 : ಭಾರತದ ಕ್ಷಿಪಣಿ ತಂತ್ರಜ್ಞಾನದ ಪಿತಾಮಹ, ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಆರೋಗ್ಯದಲ್ಲಿ ಏರುಪೇರಾಗಿದೆ ಎಂಬ ವದಂತಿಗಳಿಗೆ ಜನ ಬೆಲೆ ನೀಡಬಾರದು. ಅವರು ಆರೋಗ್ಯವಾಗಿದ್ದಾರೆ ಎಂದು ಕಲಾಂ ಕಚೇರಿ ಮೂಲಗಳು ತಿಳಿಸಿವೆ.
ಕಲಾಂ ಆರೋಗ್ಯದಲ್ಲಿ ಏರುಪೇರಾಗಿದೆ ಎಂಬ ಸುದ್ದಿ ಕಳೆದ ವಾರ ದೆಹಲಿಯಲ್ಲಿ ಸದ್ದು ಮಾಡಿತ್ತು. ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿತ್ತು. ಕಲಾಂ ತಮ್ಮ ನಿವಾಸದಲ್ಲಿ ಇಲ್ಲದಿರುವುದು ಈ ವದಂತಿಗಳಿಗೆ ಮತ್ತಷ್ಟು ಪುಷ್ಟಿ ನೀಡಿದ್ದವು.[ನಾನು ಗುರಿ ಮುಟ್ಟಿದ್ದೇನೆ, ನೀವು? ಯುವಕರಿಗೆ ಕಲಾಂ ಪ್ರಶ್ನೆ]

ಆದರೆ ಕಲಾಂ ಢಾಕಾದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಿದ್ದರು. ಇತ್ತೀಚಿಗೆ ಅಷ್ಟೇ ಜನ್ಮದಿನ ಆಚರಿಸಿಕೊಂಡ ವಿಜ್ಞಾನಿ ಆರೋಗ್ಯದಿಂದಿದ್ದಾರೆ. ಅವರು ತಮ್ಮ ಕೆಲಸ ಮತ್ತು ಸಂಶೋಧನೆಯಲ್ಲಿ ನಿರತರಾಗಿದ್ದಾರೆ ಎಂದು ಕಲಾಂ ಕಚೇರಿ ಒನ್ ಇಂಡಿಯಾಗೆ ತಿಳಿಸುವ ಮೂಲಕ ಎಲ್ಲ ವದಂತಿಗಳಿಗೆ ತೆರೆ ಎಳೆದಿದೆ.
ವದಂತಿ ಹರಡಿದ್ದು ಹೇಗೆ?
ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಹರಡಿದ ಸಂದೇಶವೊಂದು ಇಷ್ಟೆಲ್ಲ ಅವಗಢ ಸಂಭವಿಸಲು ಕಾರಣವಾಗಿದೆ. ಡಾ.ಕಲಾಂ 'ನಾನು ಆರೋಗ್ಯವಾಗಿದ್ದೇನೆ. ಇಂಥ ಸಂದೇಶಗಳು ಸತ್ಯಕ್ಕೆ ದೂರವಾದವು' ಎಂದು ಟ್ವೀಟ್ ಮಾಡುವ ಮೂಲಕ ಎಲ್ಲ ಅನುಮಾನಗಳು ಕೊನೆಗೊಂಡಿವೆ. ಅಲ್ಲದೇ ಕಲಾಂ ಜನತೆಗೆ ದೀಪಾವಳಿ ಶುಭಾಷಯವನ್ನು ಕೋರಿದ್ದಾರೆ.[ಅಣುಶಕ್ತಿ, ಜ್ಞಾನಶಕ್ತಿ, ಮತದಾನ ಬಗ್ಗೆ ಕಲಾಂ ಪಾಠ]
ಇಂಥ ವರದಿಗಳನ್ನು ಪ್ರಸಾರ ಮಾಡುವ ಮೊದಲು ಇನ್ನೊಮ್ಮೆ ಪರಿಶೀಲಿಸುವುವುದು ಉತ್ತಮ. ಅವರು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿದ್ದಾರೆ ಒಮ್ಮೆ ಅಲ್ಲಿಗೆ ಭೇಟಿ ನೀಡಿ ಅಕೌಂಟ್ ಪರೀಕ್ಷಿಸಿ ಮುಂದುವರಿಯಬೇಕು. ವದಂತಿಗಳನ್ನೇ ಸುದ್ದಿ ಎಂದು ಪ್ರಸಾರ ಮಾಡುವುದು ಸರಿಯಲ್ಲ ಎಂದು ಕೇರಳ ಕೌಮುದಿ ಮಲೆಯಾಳಂ ಪತ್ರಿಕೆಯ ದೆಹಲಿ ಮುಖ್ಯಸ್ಥ ಪ್ರಸೀನ್ ಕಂದಥ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Som msg is bein circultd dat Im unwell & hospitalized!This is totally FALSE.Im bsy workin with severl commitmnts. Plz pay no heed2such rumor
— APJ Abdul Kalam (@apj_abdul_kalam) October 22, 2014 ಇದೇ ಮೊದಲ್ಲ
ಕಲಾಂಗೆ ಅನಾರೋಗ್ಯ ಎಂಬ ವದಂತಿಗಳು ಹರಡುತ್ತಿರುವುದು ಇದೇ ಮೊದಲಲ್ಲ. ಹಿಂದೊಮ್ಮೆ ಕಲಾಂ ಆರೋಗ್ಯ ಹದಗೆಟ್ಟಿದೆ ಎಂಬ ಮಾಹಿತಿ ಮುಂಬೈನಿಂದ ಪ್ರಸಾರವಾಗಿತ್ತು. 2011ರಲ್ಲಿ ಕಲಾಂ ಸಾವನ್ನಪ್ಪಿದ್ದಾರೆ ಎಂಬ ಸುದ್ದಿಯೂ ಹರಿದಾಡಿತ್ತು. ಬಾಹ್ಯಾಕಾಶ ವಿಜ್ಞಾನಿ ಹಫೀಜ್ ಸಯೀದ್ ಮಹಮದ್ ಅಲ್ಲಾದೀನ್ ಸಾವನ್ನು ಕಲಾಂ ಸಾವು ಎಂದು ತಪ್ಪಾಗಿ ಭಾವಿಸಲಾಗಿತ್ತು.
ಕಲಾಂ ಆರೋಗ್ಯದ ಬಗ್ಗೆ ಇಂಥ ಸುಳ್ಳು ಸುದ್ದಿ ಹಬ್ಬಿಸುವವರ ಬಗ್ಗೆ ನಿಗಾ ಇಡಬೇಕಿದೆ. ಕಳೆದ ವರ್ಷ ನವೆಂಬರ್ ನಲ್ಲಿ ಜ್ವರದಿಂದ ಆಸ್ಪತ್ರೆ ಸೇರಿದ್ದೆ ಕೊನೆ. ನಂತರ ಕಲಾಂ ಆರೋಗ್ಯ ಸ್ಥಿರವಾಗಿದೆ ಎಂದು ಕಚೇರಿಯ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.
ಅಪಾರ ಅಭಿಮಾನಿಗಳನ್ನು ಹೊಂದಿರುವ ಕಲಾಂ ಅಂಥವರ ಕುರಿತು ಇಂಥ ಸುದ್ದಿಗಳು ಹರಿದಾಡಿದರೆ ಅಪಾಯ ಎದುರಾಗಬಹುದು. ಇಂಥ ಅಸಂಬದ್ಧ ಸಂದೇಶಗಳು ಸಮಾಜದ ಶಾಂತಿ ಕದಡಲು ಕಾರಣವಾಗಬಹುದು ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications